ಯುಗಾದಿ ಹಬ್ಬ; ವಸ್ತುಗಳ ಖರೀದಿ ಭರಾಟೆ ಜೋರು
Team Udayavani, Apr 2, 2022, 2:43 PM IST
ಗುರುಮಠಕಲ್: ಕೊರೊನಾ ಸೋಂಕಿನ ಹಾವಳಿಯಿಂದ ಹೊರಬಂದ ಜನ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ. ಮನೆ ಮಂದಿಯಲ್ಲ ಮಾರುಕಟ್ಟೆಗೆ ಬಂದು ಹಣ್ಣು ಸೇರಿದಂತೆ ವಿವಿಧ ಪೂಜಾ ಸಾಮಗ್ರಿ ಖರೀದಿಯಲ್ಲಿ ತೊಡಗಿದ್ದಾರೆ. ಹಬ್ಬದ ನಿಮಿತ್ತ ಬಸ್ ನಿಲ್ದಾಣದ ಹತ್ತಿರ ಜನಸಂದಣಿ ಹೆಚ್ಚಾಗಿ ಕಂಡು ಬಂತು.
ಅಂಬಿಗರ ಚೌಡಯ್ಯ ವೃತ್ತದಿಂದ ಗಂಗಾ ಪರಮೇಶ್ವರಿ ವೃತ್ತದವರೆಗೂ ವಾಹನ ದಟ್ಟಣೆ ಹೆಚ್ಚಾಗಿತ್ತು. ಈ ರಸ್ತೆ ಮಾರ್ಗದುದ್ದಕ್ಕೂ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಯಿತು. ಪಟ್ಟಣದಲ್ಲಿ ಬಹುತೇಕ ಬಟ್ಟೆ ಅಂಗಡಿಗಳು ಜನರಿಂದ ತುಂಬಿದ್ದವು.
ರಂಗೋಲಿ, ಬಣ್ಣದ ಪುಡಿ ಮಾರಾಟ ಜೋರಾಗಿತ್ತು. ಪಟ್ಟಣದ ಪ್ರಮುಖ ರಸ್ತೆಗಳಷ್ಟೇ ಅಲ್ಲದೆ, ಪಾದಚಾರಿ ಮಾರ್ಗಗಳಲ್ಲಿಯೂ ಜನರ ದಟ್ಟಣೆ ಹೆಚ್ಚಾಗಿತ್ತು. ಯುಗಾದಿ ಹಬ್ಬಕ್ಕೆ ಬಟ್ಟೆ, ಮಾವಿನ ತೋರಣ, ಬೇವಿನ ಸೊಪ್ಪು, ಉಡುದಾರ, ಬಳೆ ಸೇರಿ ಮಹಿಳೆಯರ ಅಲಂಕಾರಿಕ ವಸ್ತುಗಳ ಖರೀದಿ ಜೋರಾಗಿತ್ತು.
ಸುಡು ಬಿಸಿಲಲ್ಲೂ ಜನರು ಖರೀದಿಯಲ್ಲಿ ತೊಡಗಿದ್ದರು. ಯುಗಾದಿ ಹಬ್ಬದ ಕಾರಣಕ್ಕೆ ಪೂಜಾ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಸಂತೆ ಹೊಂಡದ ಮುಂಭಾಗದಲ್ಲಿ ಹಬ್ಬಕ್ಕಾಗಿ ಹಣ್ಣು, ಪೂಜಾ ಸಾಮಗ್ರಿ ಹಾಗೂ ಹೂವು ಖರೀದಿಗೂ ಜನ ಮುಗಿ ಬಿದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು