2.15 ಲಕ್ಷ ಮೌಲ್ಯದ ಅನಧಿಕೃತ ಕೀಟನಾಶಕ ಜಪ್ತಿ
Team Udayavani, Aug 6, 2022, 7:56 PM IST
ಶಹಾಪುರ: ಅನಧಿಕೃತವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 2.15 ಲಕ್ಷ ರೂ. ಮೌಲ್ಯದ ಕೀಟನಾಶಕ ಔಷಧಿಯನ್ನು ಆರೋಪಿ ಸಮೇತ ಶುಕ್ರವಾರ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡ ಘಟನೆ ಮಡಿವಾಳೇಶ್ವರ ನಗರದ ಮನೆಯೊಂದರಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೊಸೂರ ಗ್ರಾಮದ ಬಾಳಪ್ಪ ಛತ್ರಪ್ಪ ಛಲವಾದಿ (45) ಬಂಧಿತ ಆರೋಪಿ. ನೋಂದಾಯಿತವಲ್ಲದ ಕೀಟನಾಶಕಗಳನ್ನು ಅಕ್ರಮವಾಗಿ ರೈತರಿಗೆ ವಂಚಿಸಿ, ಮಾರಾಟ ಮಾಡುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರ ಜತೆಗೂಡಿ ದಾಳಿ ನಡೆಸಲಾಗಿದೆ ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಡಾ| ರೂಪಾದೇವಿ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
ಸೂಪರ್ ಪ್ಲವರ್ ಕೀಟನಾಶಕ, ಬಲವನ್ ಅರ್ಗೇನೀಕ್ ರಸಗೊಬ್ಬರ ಹೀಗೆ ವಿವಿಧ ಅನಧಿಕೃತ ಕೀಟನಾಶಕ ಹಾಗೂ ರಸಗೊಬ್ಬರ ಇರುವುದು ಕಂಡು ಬಂತು. ಅವುಗಳ ಮೌಲ್ಯ 2,15,799 ರೂ. ಆಗಿದೆ ಎಂದು ಅವರು ವಿವರಿಸಿದ್ದಾರೆ. ಅಲ್ಲದೆ ಅನಧಿಕೃತ ಕೀಟನಾಶಕ ಹಾಗೂ ರಸಗೊಬ್ಬರ ಮಾರಾಟ ಮಾಡಲು ತಾಳಿಕೋಟಿ ತಾಲೂಕಿನ ಅಸ್ಕಿ ಗ್ರಾಮದ ಜಟ್ಟಿಲಿಂಗೇಶ್ವರ ಅಗ್ರೋ ಏಜೆನ್ಸಿಯಿಂದ ತಂದಿರುವುದಾಗಿ ಆರೋಪಿ ತಿಳಿಸಿದರು ಎಂದು ಮಾಹಿತಿ ನೀಡಿದ್ದಾರೆ. ಪಿಎಸೈ ಶ್ಯಾಮಸುಂದರ ನಾಯಕ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ