ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ


Team Udayavani, Jun 29, 2018, 2:54 PM IST

yad-1.jpg

ಯಾದಗಿರಿ: ಆಧುನಿಕ ತಂತ್ರಜ್ಞಾನ ಬಳಸುವ ಮೂಲಕ ಕೃಷಿ ಕ್ಷೇತ್ರದಲ್ಲಿ ರೈತರು ಹೆಚ್ಚಿನ ಲಾಭ ಪಡೆಯಬಹುದು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ಶಹಾಪುರ ತಾಲೂಕಿನ ಖಾನಾಪುರ ಗ್ರಾಮದ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ
ದೋರನಹಳ್ಳಿ ಹೋಬಳಿ ಮಟ್ಟದ 2018-19ನೇ ಸಾಲಿನ ಮುಂಗಾರು ಹಂಗಾಮಿನ ಸಮಗ್ರ ಕೃಷಿ ಅಭಿಯಾನ
ಹಾಗೂ ಕೃಷಿ ಸಂವಾದ, ವಿಜ್ಞಾನಿಗಳ ಜತೆ ರೈತರ ಸಂವಾದ, ಬೀಜೋಪಚಾರ ಆಂದೋಲನ ಕಾರ್ಯಕ್ರಮವನ್ನು ಜ್ಯೋತಿ ಬೆಳೆಗಿಸಿ ಉದ್ಘಾಟಿಸಿ ಅವರು ಮಾತನಾಡಿ, ಕೃಷಿ ಪ್ರಧಾನ ದೇಶದಲ್ಲಿ ರೈತ ಸಂಕಷ್ಟವನ್ನು ದೂರ ಮಾಡಲು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ರೂಪಿಸಿ ರೈತನು ಆರ್ಥಿಕವಾಗಿ ಸದೃಢಗೊಳ್ಳುವಂತೆ ಮಾಡುತ್ತಿವೆ ಎಂದರು.
 
ಭೀಮರಾಯನ ಗುಡಿ ಕೃಷಿ ಮಹಾವಿದ್ಯಾಲಯದ ತೋಟಗಾರಿಕೆ ವಿಜ್ಞಾನಿ ಡಾ| ಜಯಪ್ರಕಾಶ ಮಾತನಾಡಿ,
ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ನಿಂಬೆ, ಪಪಾಯ, ಹೂವಿನ ಬೆಳೆ, ತರಕಾರಿ ಬೆಳೆಗಳ ಬಗ್ಗೆ ತಾಂತ್ರಿಕ ಮಾಹಿತಿ ಮತ್ತು ಬೆಳೆ ಬೆಳೆಯುವ ವಿಧಾನದ ಬಗ್ಗೆ ಸಮಗ್ರ ಮಾಹಿತಿ ನೀಡಿ, ಬಳಿಕ ರೈತರೊಂದಿಗೆ ಸಂವಾದ ನಡೆಸಿದರು.
 
ಬೇಸಾಯ ತಜ್ಞ ಡಾ| ಶಿವಾನಂದ ಹೊನ್ನಳ್ಳಿ ಮಾತನಾಡಿ, ಸಣ್ಣ ಮತ್ತು ಅತಿಸಣ್ಣ ರೈತರು ಸಮಗ್ರ ಕೃಷಿ ಪದ್ಧತಿಯಲ್ಲಿ ಹಣ್ಣಿನ ಬೆಳೆಗಳು, ತರಕಾರಿ ಬೆಳೆಗಳು, ಹೂವಿನ ಬೆಳೆಗಳು, ಆಡು, ಕುರಿ, ಕೋಳಿ ಸಾಕಾಣಿಕೆ ಮಾಡುವುದರಿಂದ ರೈತರಿಗೆ ಹೆಚ್ಚಿನ ಆದಾಯ ಬರುತ್ತದೆ ಎಂದು ತಿಳಿಸಿದರು.
 
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ದಾನಪ್ಪ ಕತ್ನಳ್ಳಿ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಹೇಳಿದರು. ತೋಟಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯಿಂದ ರೈತರಿಗೆ ದೊರಯುವ ಸೌಲಭ್ಯ ಮತ್ತು ತಾಂತ್ರಿಕತೆ ಮಾಹಿತಿ ನೀಡಿದರು. 

ರೈತ ಮುಖಂಡರಾದ ಸಿದ್ದಣ್ಣಗೌಡ ಕಾಡಂನೋರ ಮತ್ತು ಚೆನ್ನಾರೆಡ್ಡಿ ಸಂವಾದದಲ್ಲಿ ಭಾಗವಹಿಸಿದ್ದರು. ಮಾಜಿ ಶಾಸಕ ಡಾ| ವೀರಬಸಂತರೆಡ್ಡಿ ಮುದ್ನಾಳ, ಜಿಪಂ ಸದಸ್ಯೆ ದೇವಕ್ಕೆಮ್ಮ ಪೂಜಾರಿ, ಎಪಿಎಮ್‌ಸಿ ಸದಸ್ಯ ಸಂತೋಷ ನಿರ್ಮಲ್ಕರ್‌, ತಾಪಂ ಸದಸ್ಯ ಪರಶುರಾಮ ಕುರಕುಂದಾ, ಭೀಮರೆಡ್ಡಿ ಚಟ್ನಳ್ಳಿ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೆಜೆಪ್ಪ, ಉಪಾಧ್ಯಕ್ಷ ಬಸವರಾಜ, ರೈತ ಮುಖಂಡರಾದ ದೇವಿಂದ್ರಪ್ಪ ಇಬ್ರಾಹಿಂಪೂರ, ನೀಜಗುಣ ದೋರನಹಳ್ಳಿ, ಅಬ್ದುಲ್‌ ರಸೂಲಸಾಬ್‌ ಕುರಕುಂದಾ, ಚೆನ್ನಾರೆಡ್ಡಿಗೌಡ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು. 

ಕೃಷಿ ಇಲಾಖೆ ಅಧಿಕಾರಿ ಜಯರಾಮ ಚವ್ಹಾಣ  ರೂಪಿಸಿದರು. ವೆಂಕಟೆಶ ಕುಲಕರ್ಣಿ ಸ್ವಾಗತಿಸಿದರು. ಸಂಜೀವಪ್ಪಗೌಡ ವಂದಿಸಿದರು.  

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.