ಶೇ.50ರಷ್ಟು ಜನರು ಬಳಸಲ್ಲ ಶೌಚಾಲಯ

ಕೊಂಕಲ್‌ ವ್ಯಾಪ್ತಿಯಲ್ಲಿ 845 ಶೌಚಾಲಯ ನಿರ್ಮಾಣ

Team Udayavani, Mar 16, 2020, 12:24 PM IST

16-March-8

ವಡಗೇರಾ: ಪ್ರಸ್ತುತ ಶೌಚಾಲಯ ಎಲ್ಲರಿಗೂ ಅತ್ಯಗತ್ಯ. ಇದನ್ನು ತಿಳಿದರೂ ಜನರು ಶೌಚಾಲಯ ಸುವ್ಯವಸ್ಥಿತ ನಿರ್ಮಾಣ ಹಾಗೂ ಬಳಕೆಗೆ ಮುಂದಾಗುತ್ತಿಲ್ಲ. ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಅದಕ್ಕೆ ಒಂದು ಪೈಸೆಯೂ ಸೇರಿಸಿ ನಿರ್ಮಿಸಿಕೊಳ್ಳದೇ ಪ್ರೋತ್ಸಾಹ ಧನದಲ್ಲಿಯೇ ಶೌಚಗೃಹ ನಿರ್ಮಾಣ ಮಾಡಿಕೊಳ್ಳುವ ಇರಾದೆ ಹೊಂದಿದ್ದಾರೆ.

ವಡಗೇರಾ ತಾಲೂಕು ಕೊಂಕಲ್‌ ಗ್ರಾಪಂ ವ್ಯಾಪ್ತಿಯ ಅನಕಸೂಗರ,  ರಿಹಾಳ, ಗೊಂದೆನೂರು, ಚನ್ನೂರು, ಕೂಂಕಲ್‌ ಗ್ರಾಮಗಳಲ್ಲಿ ಒಟ್ಟು 1400 ಕುಟುಂಬಗಳಿದ್ದು, 9 ಸಾವಿರದಷ್ಟು ಜನಸಂಖ್ಯೆ ಇದೆ. ಆದರೆ ಇಲ್ಲಿ ಒಟ್ಟು 845 ವೈಯಕ್ತಿಕ ಶೌಚಾಲಯಗಳು ನಿರ್ಮಾಣವಾಗಿವೆ. ಇದರಲ್ಲಿ ಶೇ.50ರಷ್ಟು ಜನರು ಶೌಚಾಲಯ ಬಳಸುತ್ತಿಲ್ಲ ಎನ್ನುವುದು ದುರಾದೃಷ್ಟ.

ಇನ್ನೂ ಸ್ವಂತ ಜಾಗವಿಲ್ಲದ ಜನರು ಶೌಚಾಲಯ ನಿರ್ಮಿಸಿಕೊಳ್ಳಲು ಆಗುತ್ತಿಲ್ಲ. ಅಂಥವರಿಗಾಗಿ ಸರ್ಕಾರ ಸಮುದಾಯ ಶೌಚಾಲಯ ಯೋಜನೆ ಜಾರಿಗೊಳಿಸಿದೆ. ಆದರೆ ಈ ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣ ಮಾಡಿಲ್ಲ ಎಂದು ಜನರು ಬೇಸರ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಮಹಿಳೆಯರು ತೀವ್ರ ಮುಜುಗರ ಅನುಭವಿಸುವಂತಾಗಿದೆ.

ಶೌಚಾಲಯ ಇಲ್ಲದಿರುವುದು ಒಂದು ಕಡೆಯಾದರೆ, ನಿರ್ಮಾಣ ಗೊಂಡಿರುವ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡದಿರುವುದರಿಂದ ಅವುಗಳು ಕೂಡ ಬಳಕೆಗೆ ಬಾರದಂತಾಗಿವೆ. ಕೆಲವು ಶೌಚಾಲಯಗಳು ಜಾನುವಾರುಗಳಿಗೆ ಮೇವು ಇಡುವುದಕ್ಕೆ ಮತ್ತು ಅಡುಗೆ ಮಾಡುವುದಕ್ಕೆ ಕಟ್ಟಿಗೆಗಳನ್ನು ಸಂಗ್ರಹಿಸುವ ಕೊಠಡಿಗಳಾಗಿ ಮಾರ್ಪಟ್ಟಿವೆ.

ಶೌಚಾಲಯಗಳಿದ್ದರೂ ಅವುಗಳ ಸದ್ಬಳಕೆಯಾಗುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಬಯಲನ್ನು ಮರೆತಿಲ್ಲ. ನೂತನ ಶೌಚಾಲಯಗಳು ಕೂಡ ಗಬ್ಬುನಾರುತ್ತಿವೆ. ರೆಡಿಮೇಡ್‌ ಶೌಚಾಲಯಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಗ್ರಾಪಂ ಅಧಿಕಾರಿಗಳು ಸ್ಥಳ ಪರಿಶೀಲಿಸದೇ ಬಿಲ್‌ ಪಾವತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೇವಲ ನಾಮಕೇ ವಾಸ್ತೆ ಎನ್ನುವಂತೆ ಶೌಚಾಲಯಗಳು ನಿರ್ಮಾಣವಾಗಿವೆ. ಆದರೆ ಬಳಕೆಗೆ ಬಾರದಂತಾಗಿವೆ. ಈ ಬಗ್ಗೆ ಸಾರ್ವಜನಿಕರು ವೈಯಕ್ತಿಕ ಶೌಚಾಲಯ ಬಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಜಾಗೃತಿ ಮೂಡಿಸಬೇಕಿದೆ.

ಗ್ರಾಮದಲ್ಲಿ ಮಹಿಳೆಯರು ನಿತ್ಯ ಬಯಲಿಗೆ ತೆರಳಬೇಕಿದೆ. ಯಾವಾಗ ಕತ್ತಲಾಗುತ್ತದೋ ಎನ್ನುವುದನ್ನು ಕಾಯಬೇಕಿದೆ. ಜಮೀನುಗಳಲ್ಲಿ ಹೋಗಲು ಸೋಲಾರ್‌ ವಿದ್ಯುತ್‌ ಉತ್ಪನ್ನ ಮಾಡುವ ಉಪಕರಣಗಳಿವೆ. ಮಹಿಳೆಯರು ಸಾಮೂಹಿಕ ಶೌಚಾಲಯವಿಲ್ಲದೇ ತೀವ್ರ ಮುಜುಗರ ಅನುಭವಿಸುವಂತಾಗಿದೆ. ಸಮುದಾಯ ಶೌಚಾಲಯ ನಿರ್ಮಿಸಿಕೊಡಬೇಕು.
ಮಲ್ಲಮ್ಮ ಅನಕಸೂಗೂರ,
ಗ್ರಾಮಸ್ಥೆ

ಬೇಸ್‌ ಲೈನ್‌ ಸರ್ವೆಯಿಂದ ಹೊರಗುಳಿದ ಕುಟುಂಬಗಳ 208 ಅರ್ಜಿ ಪಡೆಯಲಾಗಿದೆ. ನಿವೇಶನದ ಸಮಸ್ಯೆಯಿದೆ ಮತ್ತು ಹೊಸದಾಗಿ ಶೌಚಾಲಯ ನಿರ್ಮಿಸಿಕೊಳ್ಳುವವರಿಗೆ ಅರ್ಜಿ ಕರೆಯಲಾಗಿದೆ. ಬಯಲು ಮುಕ್ತ ಗ್ರಾಮ ಪಂಚಾಯಿತಿನ್ನಾಗಿಸಲು ಗುರಿ ಹೊಂದಿದ್ದೇವೆ.
ಪವೀಣಕುಮಾರ,
ಪಿಡಿಒ ಕೊಂಕಲ್‌

ನಿಂಗಣ್ಣ ಕುರಿ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.