ರಸ್ತೆ ದುರಸ್ತಿಗೆ ಗ್ರಾಮಸ್ತರ ಒತ್ತಾಯ
Team Udayavani, Jun 11, 2022, 5:52 PM IST
ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ತೆರಳಲು ಈ ಹಿಂದೆ ಬಳಕೆಯಲಿದ್ದ ಹಳೆ ಡ್ಯಾಮ್ ರಸ್ತೆಯೂ ಸೂಕ್ತ ನಿರ್ವಹಣೆ ಇಲ್ಲದೇ ಸಂಪೂರ್ಣ ಹದಗೆಟ್ಟಿದೆ ಎಂದು ಸ್ಥಳೀಯರು ದೂರುತ್ತಿದ್ದಾರೆ.
ನಾರಾಯಣಪುರದಿಂದ ಬೃಹತ್ ನೀರಾವರಿ ಯೋಜನೆಯಾಗಿರುವ ಬಸವಸಾಗರ ಜಲಾಶಯಕ್ಕೆ ಅಂದಾಜು 5 ಕಿ.ಮೀ. ದೂರ ಇದ್ದು, ದಶಕಗಳ ಹಿಂದೆ ಅಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ಈ ರಸ್ತೆಯೇ ಮುಖ್ಯ ಸಂಪರ್ಕ ಮಾರ್ಗವಾಗಿತ್ತು. ಈ ಹಿಂದಿನ ಹಲವು ಸಂದರ್ಭದಲ್ಲಿ ಹಳೆ ಡ್ಯಾಮ್ ರಸ್ತೆಯ ನಿರ್ವಹಣೆ ಬಗ್ಗೆ ಕಾಳಜಿ ವಹಿಸಿದ್ದ ಕೃಷ್ಣಾ ಭಾಗ್ಯ ಜಲ ನಿಗಮವೂ ಸದ್ಯ ಈ ರಸ್ತೆ ಬಗ್ಗೆ ನಿರ್ಲಕ್ಷ್ಯ ತೋರಿದೆ. ಈಗ ಚೆಕ್ಪೋಸ್ಟ್ ಮಾರ್ಗವಾಗಿ ಬಸವಸಾಗರ ಜಲಾಶಯಕ್ಕೆ ಪರ್ಯಾಯ ರಸ್ತೆ ಇರುವುದರಿಂದ, ಈ ಹಳೆ ಡ್ಯಾಮ್ ರಸ್ತೆಯೂ ಸಂಪೂರ್ಣ ನಿರ್ಲಕ್ಷ್ಯಕೊಳಗಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಹೀಗಾಗಿ ಸಂಪೂರ್ಣ ರಸ್ತೆ ಹದಗೆಟ್ಟು ಹೋಗಿದ್ದು, ಅಲ್ಲಲ್ಲಿ ದೊಡ್ಡ ಗಾತ್ರದ ತಗ್ಗು ಗುಂಡಿಗಳಿರುವುದು ಒಂದೆಡೆಯಾದರೆ, ರಸ್ತೆ ಬದಿಗಳಲ್ಲಿ ದಟ್ಟವಾಗಿ ಬೆಳೆದ ಮುಳ್ಳು ಕಂಟಿ ರಸ್ತೆಯನ್ನು ಇಕ್ಕಟ್ಟಾಗಿಸಿವೆ. ಕೆಲ ಸಂದರ್ಭಗಳಲ್ಲಿ ಬೈಕ್ ಸವಾರರೂ ರಸ್ತೆ ಮೇಲಿನ ತಗ್ಗು ದಿನ್ನೆಗಳನ್ನು ತಪ್ಪಿಸಲು ಹೋಗಿ ಆಯಾ ತಪ್ಪಿ ಬಿದ್ದು ಗಾಯಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಸಂಬಂಧಪಟ್ಟ ಇಲಾಖೆಯವರು ಹಳೆ ಡ್ಯಾಮ್ ರಸ್ತೆ ದುರಸ್ತಿಗೊಳಿಸುವುದರ ಜೊತೆಗೆ ದಟ್ಟವಾಗಿ ಬೆಳೆದಿರುವ ಮುಳ್ಳು ಕಂಠಿಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.