ವಿವೇಕಾನಂದರ ಚಿಂತನೆ ಯುವ ಜನಾಂಗಕ್ಕೆ ಸ್ಪೂರ್ತಿ: ಪಾಟೀಲ್
Team Udayavani, Jan 15, 2022, 2:58 PM IST
ಸುರಪುರ: ರಾಷ್ಟ್ರದ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರ ತತ್ವ, ಚಿಂತನೆ, ವಿಚಾರಗಳು ಯುವ ಜನಾಂಗಕ್ಕೆ ಸ್ಫೂರ್ತಿ ಮತ್ತು ಪ್ರೇರಣೆಯಾಗಿವೆ ಎಂದು ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್ ಹೇಳಿದರು.
ರಂಗಂಪೇಟೆಯ ಖಾದಿ ಕೇಂದ್ರದ ಆವರಣದಲ್ಲಿ ನೆಹರು ಯುವ ಕೇಂದ್ರ ಕಲಬುರಗಿ, ಸಗರನಾಡು ಯುವಕ ಸಂಘದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವದಿನ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ನಿಮಿತ್ತ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚಿಕ್ಯಾಗೋ ಸಮ್ಮೇಳನದ ಮೂಲಕ ವಿಶ್ವದ ಗಮನ ಸೆಳೆದ ಸ್ವಾಮಿ ವಿವೇಕಾನಂದರು ಈ ರಾಷ್ಟ್ರದ ಯುವ ಜನಾಂಗಕ್ಕಾಗಿ ಅನೇಕ ವಿಚಾರ, ಚಿಂತನೆ, ಆಲೋಚನೆಗಳನ್ನು ತಿಳಿಸಿದ್ದಾರೆ. ಯುವ ಜನಾಂಗಕ್ಕೆ ವಿವೇಕಾನಂದರ ವಿಚಾರಗಳು ಅತ್ಯಂತ ಅವಶ್ಯಕ ಎಂದು ಹೇಳಿದರು.
ಯುವಕ ಸಂಘದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಡಾ| ಮಲ್ಲಿಕಾರ್ಜುನ ಕುಲಕರ್ಣಿ ಮಾತನಾಡಿದರು. ಬಸವೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯ ವೀರೇಶ ಹಳಿಮನಿ, ಶಾಂತು ನಾಯಕ, ಕರ್ನಾಟಕ ನವನಿರ್ಮಾಣ ವೇದಿಕೆಯ ಅಧ್ಯಕ್ಷ ಶಿವರಾಜ ಕಲಿಕೇರಿ, ಶ್ರೀಗುರು ಸಂಸ್ಥೆಯ ಅಧ್ಯಕ್ಷ ಮಲ್ಲು ಬಾದ್ಯಾಪುರ, ಪೊಲೀಸ್ ಪೇದೆ ದಯಾನಂದ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ