ಬಿರುಗಾಳಿ-ಮಳೆಗೆ ಅಪಾರ ಹಾನಿ: ಅಧಿಕಾರಿಗಳ ಪರಿಶೀಲನೆ
Team Udayavani, Apr 22, 2020, 1:33 PM IST
ವಡಗೇರಾ: ಮದರಕರ್ ಗ್ರಾಮದಲ್ಲಿ ಬಿರುಗಾಳಿಗೆ ಮನೆ ಟೀನ್ ಶೆಡ್ ಕಿತ್ತಿರುವುದನ್ನು ಅಧಿಕಾರಿಗಳು ಪರಿಶೀಲಿಸಿದರು.
ವಡಗೇರಾ: ಸೋಮವಾರ ಸಂಜೆ ಬೀಸಿದ ಬಿರುಗಾಳಿಗೆ ಬಡವರ ಆಶ್ರಯ ಮನೆಗಳ ಸೀಟುಗಳು ಕಿತ್ತು ಹೋರುವ ಘಟನೆ ನಡೆದಿದೆ. ಅಕಾಲಿಕ ಗಾಳಿ ಮಳೆಗೆ ದನದ ಕೊಟ್ಟಿಗೆಳು ನೆಲಸಮವಾಗಿವೆ.
ಮದರಕಲ್ ಗ್ರಾಮದ ಅಂಬೋಜಿ ಹವಾಲ್ದಾರ್ ಎನ್ನುವವರ ಮನೆಗೆ ಹೆಚ್ಚು ಹಾನಿಯಾಗಿದೆ. ಸಂಗಣ್ಣಗೌಡರ ಮನೆ ಛಾವಣಿ ಕಿತ್ತು ಹೋಗಿದ್ದು, ಒಟ್ಟು ಮೂರು ಮನೆಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. 10ರಿಂದ 11 ಬೃಹತ್ ಮರಗಳು ನೆಲಕ್ಕುರುಳಿದ್ದು, ಒಂದು ವಿದ್ಯುತ್ ಕಂಬ ಬಿದ್ದು ಹೋಗಿದೆ. ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಕುಡಿಯುವ ನೀರಿಗೆ ತೊಂದರೆಯಾಗಿದೆ.
ಹಾನಿಯಾದ ಸ್ಥಳಕ್ಕೆ ಕಂದಾಯ ನಿರೀಕ್ಷಕ ಬಸಯ್ಯ ಸ್ವಾಮಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಪ್ರವೀಣಕುಮಾರ ಭೇಟಿ ನೀಡಿ ಸಮೀಕ್ಷೆ ಮಾಡಿದ್ದಾರೆ.
ಗಾಳಿ ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರ ಶೀಘ್ರವೇ ಪರಿಹಾರ ನೀಡಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ