ಸೌಕರ್ಯಗಳಿಲ್ಲದೆ ವಾಗಣಗೇರಾ ಒಣ ಒಣ
•ಕುಡಿಯುವ ನೀರಿಗೆ ಹಾಹಾಕಾರ•ಅಧಿಕಾರಿ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ
Team Udayavani, Jul 9, 2019, 12:10 PM IST
ಸುರಪುರ: ವಾಗಣಗೇರಾ ಗ್ರಾಮದ ಕಿಲ್ಲಾ ಮೇಲೆ ನಿರ್ಮಿಸಿರುವ ನೀರಿನ ಟ್ಯಾಂಕ್.
ಸುರಪುರ: ತಾಲೂಕು ಕೇಂದ್ರದಿಂದ ಕೇವಲ 10 ಕಿ.ಮೀಟರ್ ಅಂತರದಲ್ಲಿರುವ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳಿಲ್ಲದೆ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ಉಂಟಗಿದೆ.
ಗಬ್ಬೆದ್ದು ನಾರುತಿರುವ ಚರಂಡಿಗಳು, ತ್ಯಾಜ್ಯ ನೀರು ರಸ್ತೆ ಮೇಲೆ ಹರಿಯುವ ಕೊಳಚೆ ನೀರು. ಮನೆಗಳ ಪಕ್ಕದಲ್ಲಿಯೇ ತಿಪ್ಪೆ ಗುಂಡಿ, ಕುಡಿಯುವ ನೀರಿಗೂ ಜನರ ಪರದಾಟ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಕಾಡುತ್ತಿದೆ.
ಗ್ರಾಮದಲ್ಲಿ ಸುಮಾರು 400 ಕುಟುಂಬಗಳಿವೆ. 6000 ಸಾವಿರಕ್ಕೂ ಮೇಲ್ಪಟ್ಟ ಜನಸಂಖ್ಯೆ ಹೊಂದಿದೆ. 8 ಜನ ಗ್ರಾಪಂ ಸದಸ್ಯರಿದ್ದು, ಓರ್ವ ತಾಪಂ ಸದಸ್ಯನಿದ್ದು, ಗ್ರಾಪಂ ಕೇಂದ್ರ ಸ್ಥಾನ ಹೊಂದಿದೆ. ಕಚೇರಿ ಮತ್ತು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದರೂ ಕುಡಿಯುವ ನೀರಿನ ಸಮಸ್ಯೆಗೆ ಮಾತ್ರ ಮುಕ್ತಿ ಸಿಕ್ಕಿಲ್ಲ.
2014-15ರಲ್ಲಿ 22 ಲಕ್ಷ ರೂ. ವೆಚ್ಚದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಲಾಗಿದೆ. ಕಳಪೆ ಕಾಮಗಾರಿಯಿಂದ ಟ್ಯಾಂಕ್ ಸಂಪೂರ್ಣ ಸೋರುತ್ತಿದೆ. ಹೀಗಾಗಿ ಇದುವರೆಗೂ ಟ್ಯಾಂಕ್ಗೆ ನೀರು ಹರಿಸಿಲ್ಲ. ಗುತ್ತಿಗೆದಾರರು ಪೈಪ್ಲೈನ್ ಕಾಮಗಾರಿ ಅಪೂರ್ಣಗೊಳಿಸಿ ಬಿಲ್ ಎತ್ತಿ ಹಾಕಿದ್ದಾರೆ. ಸರಕಾರದ ಅನುದಾನ ಅನಗತ್ಯ ಪೋಲು ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ನೂರಾರು ಜನ ಸೇರಿ ತಾಲೂಕು ಪಂಚಾಯಿತಿ ಕಚೇರಿಗೆ ಎರಡು ಬಾರಿ ಮುತ್ತಿಗೆ ಹಾಕಿ ಖಾಲಿ ಕೊಡಗಳ ಪ್ರದರ್ಶನ ಮಾಡಿದ್ದೇವೆ. ಸಮಸ್ಯೆ ಬಗೆಹರಿಸುವಂತೆ ಶಾಸಕರು ಗ್ರಾಮೀಣ ನೀರು ಸರಬರಾಜು ಇಲಾಖೆಯವರಿಗೆ ತಾಕೀತು ಮಾಡಿದ್ದಾರೆ. ಆದರೆ ಇಲಾಖೆ ಎಇಇ ಹಣಮಂತಪ್ಪ ಅಂಬ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗುತ್ತಿಲ್ಲ. ಶಾಸಕರ ಮಾತಿಗೆ ಯಾವುದೇ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ನೀರಿನ ಸಮಸ್ಯೆ ತಪ್ಪುತ್ತಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತ ಪಡಿಸಿದ್ದಾರೆ.
ನೀರಿಗಾಗಿ ಜಮೀನುಗಳತ್ತ ಲಗ್ಗೆ:
ಘಟಕಕ್ಕಿಲ್ಲ ಉದ್ಘಾಟನೆ ಭಾಗ್ಯ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್