ಮತಕ್ಕಾಗಿ ನಡೆದಿದೆ ಬಿಸಿಲಿನಲ್ಲೂ ಕಸರತ್ತು


Team Udayavani, Apr 20, 2018, 5:39 PM IST

yad-.jpg

ಯಾದಗಿರಿ: ಬಿಸಿಲನಗರಿ ಯಾದಗಿರಿ ಗುಡ್ಡ ಬೆಟ್ಟಗಳಿಗೆ ಹೆಸರುವಾಸಿ. ಇಲ್ಲಿನ ಬಿಸಿಲಿಗೆ ಜನ ಸಾಮಾನ್ಯರು ಮನೆ ಬಿಟ್ಟು ಹೊರಗಡೆ ಬರಲು ಹೆದರುತ್ತಿದ್ದರೆ, ಆದರೆ ಅಭ್ಯರ್ಥಿಗಳು ಮಾತ್ರ ಮುಖಂಡರೊಂದಿಗೆ ಬಿಸಿಲನ್ನು ಲೆಕ್ಕಿಸದೆ ಚುನಾವಣಾ ಪ್ರಚಾರದಲ್ಲಿ ಧುಮುಕಿದ್ದಾರೆ. ಕಳೆದ ಐದು ವರ್ಷದಲ್ಲಿ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸದೆ, ಎಸಿ ರೂಮ್‌ನಲಿದ್ದ ನಾಯಕರು ಪ್ರಚಾರಕ್ಕಾಗಿ ಬಿಸಿಲಿನಲ್ಲಿಯೇ ಗ್ರಾಮಗಳಲ್ಲಿ ತೆರಳಿ ಪ್ರಚಾರ ಮಾಡಿ ಬೆವರು ಸುರಿಸುತ್ತಿದ್ದಾರೆ. 

ಕಾಂಗ್ರೆಸ್‌ ಅಭ್ಯರ್ಥಿ ಡಾ| ಎ.ಬಿ. ಮಾಲಕರೆಡ್ಡಿ, ಬಿಜೆಪಿ ಅಭ್ಯರ್ಥಿ ಡಾ| ವೆಂಕಟರೆಡ್ಡಿ ಮುದ್ನಾಳ ಹಾಗೂ ಜೆಡಿಎಸ್‌ ಅಭ್ಯರ್ಥಿ ಎ.ಸಿ. ಕಾಡ್ಲೂರ ಈಗಾಗಲೇ ವಡಗೇರಾ, ಹಯ್ನಾಳ, ದೋರಹಳ್ಳಿ ಜಿಪಂ ವ್ಯಾಪ್ತಿಯಲ್ಲಿ ಪ್ರತಿದಿನ 8 ಗಂಟೆ ಹಳ್ಳಿಗಳಲ್ಲಿ ಪ್ರಚಾರ ಪ್ರಚಾರ ಮಾಡುತ್ತಿದ್ದಾರೆ.

ಜೆಡಿಎಸ್‌ ಪಕ್ಷ ತನ್ನ ಅಭ್ಯರ್ಥಿಯನ್ನು ಹದಿನೈದು ದಿನಗಳ ಮುಂಚೆಯೇ ಪ್ರಕಟಿಸಿದ್ದ ಜೆಡಿಎಸ್‌ ಅಭ್ಯರ್ಥಿ ಎ.ಸಿ. ಕಾಡ್ಲೂರ ಅವರು ಈಗಾಗಲೇ ತಮ್ಮ ಕಾರ್ಯಕರ್ತರೊಂದಿಗೆ ಕ್ಷೇತ್ರದಾದ್ಯಂತ ಪ್ರಚಾರ ಮಾಡಿದ್ದಾರೆ. ಇನ್ನೂ ಕಾಂಗ್ರೆಸ್‌, ಬಿಜೆಪಿ ಅಭ್ಯರ್ಥಿಗಳ ಘೋಷಣೆ ನಾಲೈದು ದಿನಗಳ ಹಿಂದೆ ಆಗಿದ್ದು, ಅವರು ಸಹ ಟಿಕೆಟ್‌ ಘೋಷಣೆ ಆಗುತ್ತಿದ್ದಂತೆ ಪ್ರಚಾರದಲ್ಲಿ ತೊಡಗಿದ್ದು, ಮತದಾರರ ಕೈ ಮುಗಿದು
ಮತ ಹಾಕುವಂತೆ ಬೇಡಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ.

ಯಾದಗಿರಿ ಮತಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಲಿ ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಅವರು ಆರನೇ ಬಾರಿಗೆ ಶಾಸಕರಾಗಬೇಕೆಂಬ ಹಂಬಲದೊಂದಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ತಮ್ಮ ಕಾರ್ಯಕರ್ತರೊಂದಿಗೆ 83ರ ಇಳಿ ವಯಸ್ಸಿನಲ್ಲಿಯೂ ಪ್ರಚಾರ ಕೈಗೊಂಡಿದ್ದಾರೆ. ಇನ್ನೊಂದೆಡೆ ಭಾರತೀಯ ಜನತಾ ಪಕ್ಷ ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಅವರ ಬದಲು ಅವರ ಸಹೋದರ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಯಾದಗಿರಿ ಮತಕ್ಷೇತ್ರದಲ್ಲಿ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಅವರು ತಮ್ಮ ಹಿಡಿತವನ್ನು ಹೊಂದಿದ್ದಾರೆ. ಆದರೆ ತಮ್ಮ ಸಹೋದರ ವೆಂಕಟರೆಡ್ಡಿ ಟಿಕೆಟ್‌ ದೊರೆದಿದ್ದು, ಅವರ ಬೆಂಬಲವಾಗಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದು, ಅದು ಎಷ್ಟರ ಮಟ್ಟಿಗೆ ಅವರಿಗೆ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಲಾಭ ತಂದು ಕೊಡಲಿದೆ ಎಂಬುದು ಕಾಯ್ದು ನೋಡಬೇಕಿದೆ. 

ಇನ್ನೂ ಸುರಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಬಿಜೆಪಿ ಅಭ್ಯರ್ಥಿ ರಾಜುಗೌಡ, ಜೆಡಿಎಸ್‌ ಅಭ್ಯರ್ಥಿ ರಾಜಾ ಕೃಷ್ಣಪ್ಪ ನಾಯಕ, ಶಹಾಪುರ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಗುರು ಪಾಟೀಲ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಜೆಡಿಎಸ್‌ ಅಭ್ಯರ್ಥಿ ಅಮೀನ್‌ರೆಡ್ಡಿ ಯಾಳಗಿ, ಗುರುಮಠಕಲ್‌ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಬಾಬುರಾವ್‌ ಚಿಂಚನಸೂರ, ಬಿಜೆಪಿ ಅಭ್ಯರ್ಥಿ ಸಾಯಿಬಣ್ಣ ಬೋರಬಂಡಾ, ಜೆಡಿಎಸ್‌ ಅಭ್ಯರ್ಥಿ ನಾಗಣ್ಣಗೌಡ ಕಂದಕೂರ ಅವರು ನಾಮಪತ್ರ ಸಲ್ಲಿಸುವ ಮುಂಚೆಯೇ ಪ್ರಚಾರಕ್ಕೆ ಧಮುಕಿದ್ದು, ಮತದಾರರು ಯಾರಿಗೆ ಆರ್ಶೀವಾದ ಮಾಡಲಿದ್ದಾರೆ ಎಂಬುದು ಮೇ. 12ರ ಚುನಾವಣೆ ನಿರ್ಧರಿಸಲಿದೆ
 
ಖಾಸಗಿ ವಾಹನ ಮಾಲೀಕರಿಗೆ ಲಾಭ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕೆಲವರಿಗೆ ಮುಳುವಾಗಿದ್ದರೆ, ಇನ್ನು ಖಾಸಗಿ ವಾಹನ ಮಾಲೀಕರಿಗೆ ಚುನಾವಣೆ ಬಂಪರ್‌ ಲಾಭ ತಂದುಕೊಡುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಖಾಸಗಿ ವಾಹನಗಳನ್ನು ಪಡೆದು ಗ್ರಾಮ ಗ್ರಾಮಗಳಿಗೆ ಪ್ರಚಾರಕ್ಕೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಒಂದು ತಿಂಗಳು ಬುಕ್‌ ಮಾಡಿಕೊಳ್ಳಲಾಗಿದೆ. ಈಗಾಗಲೇ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಆ ನಿಟ್ಟಿನಲ್ಲಿ ಮತ ಬ್ಯಾಂಕ್‌ ಭದ್ರಪಡಿಸಲು ಎಲ್ಲ ರಾಜಕೀಯ ತಂತ್ರ ರೂಪಿಸಿವೆ. ರಾಜಕೀಯ ತಂತ್ರದಲ್ಲಿ ಯಾರು ಯಶಸ್ವಿಯಾಗಿದ್ದಾರೆ ಎಂಬುದು ಚುನಾವಣೆ ಫಲಿತಾಂಶ ನಿರ್ಧರಿಸಲಿದೆ.

„ರಾಜೇಶ ಪಾಟೀಲ್‌ ಯಡ್ಡಳ್ಳಿ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.