ಕಾಲುವೆ ದಡ ಕೊಚ್ಚಿ ನೀರು ಪೋಲು: ಕ್ರಮಕ್ಕೆ ಆಗ್ರಹ
Team Udayavani, Aug 28, 2017, 2:55 PM IST
ಹುಣಸಗಿ: ಸಮೀಪದ ಎಚ್ಬಿಸಿ 2ರ ಕಾಲುವೆ ಅಡಿಯಲ್ಲಿನ ವಿತರಣಾ ಕಾಲುವೆ ಡಿ. 2ರ ನೀರು ಪೋಲಾಗುತ್ತಿದ್ದು, ಕಾಲುವೆ ಪಕ್ಕದ ಹೊಲಗಳಿಗೆ ನೀರು ನುಗ್ಗಿ ಕಾಲುವೆ ಬದಿಯ ಸೇವಾ ರಸ್ತೆ ಕೊಚ್ಚಿ ಹೋಗಿದೆ ಎಂದು ರಾಜನಕೋಳೂರ ಗ್ರಾಮದ ಬಿ.ಸಿ. ಪಾಟೀಲ ತಿಳಿಸಿದ್ದಾರೆ. ಒಂದೆಡೆ ನೀರಿಗಾಗಿ ರೈತರು ಹೋರಾಟ ಮಾಡುತ್ತಿದ್ದು, ನೀರು ವ್ಯರ್ಥವಾಗುವುದನ್ನು ತಡೆಯುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕಿದೆ ಎಂದರು. ರಾಜನಕೋಳುರ ಗ್ರಾಮದಿಂದ ರಾಜವಾಳ, ಕಡದರಾಳ ಸೇರಿದಂತೆ ಇತರ ಗ್ರಾಮಗಳ ಜಮೀನುಗಳಿಗೆ ನೀರು ಒದಗಿಸುವ ಕಾಲುವೆ ಇದಾಗಿದ್ದು, ಈ ಕಾಲುವೆ ಕೊಡೇಕಲ್ಲ ಉಪವಿಭಾಗದಡಿ ಬರುತ್ತದೆ. ಶೀಘ್ರ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ. ರಸ್ತೆಯ ಮಾರ್ಗವಾಗಿ ಹೊಲಕ್ಕೆ ತೆರಳುವ ರೈತರು ತೊಂದರೆ ಪಡುವಂತಾಗಿದೆ. ಕೂಡಲೇ ಅಧಿಕಾರಿಗಳು ಭೇಟಿ ನೀಡಿ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ