ಪಕ್ಷಿಗಳಿಗೆ ನೀರಿನ ವ್ಯವಸ್ಥೆ
Team Udayavani, May 1, 2022, 4:00 PM IST
ಸುರಪುರ: ದಾರಿಹೋಕರಿಗೆ ನೀರಿನ ಅರವಟ್ಟಿಗೆ ವ್ಯವಸ್ಥೆ ಮಾಡುವುದು ಸಹಜ. ಆದರೆ ದೇವಸ್ಥಾನ ಕಮೀಟಿಯವರು ದೇವಸ್ಥಾನದ ಸುತ್ತಮುತ್ತಲಿನ ಗಿಡ-ಮರಗಳಿಗೆ ನೀರಿನ ಬಟ್ಟಲು ಕಟ್ಟಿ ಪಕ್ಷಿಗಳಿಗೆ ಕುಡಿಯವ ನೀರಿನ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದು ಡಿವೈಎಸ್ಪಿ ಡಾ| ದೇವರಾಜ ನಾಯ್ಕ ಅಭಿಪ್ರಾಯಪಟ್ಟರು.
ತಾಲೂಕಿನ ಕುಂಬಾರಪೇಟ ಹತ್ತಿರದ ನಾಗಲಾಪುರ ವೀರಾಂಜನೇಯ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಪಕ್ಷಗಳಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಯಾರಿಕೆಯಾದರೆ ಮನುಷ್ಯ ನೀರನ್ನು ಖರೀದಿಸಿಯಾದರೂ ಕುಡಿಯುತ್ತಾನೆ. ಆದರೆ ಪಕ್ಷಿಗಳು ತೊಂದರೆ ಎದುರಿಸುತ್ತವೆ. ಕುಡಿಯುವ ನೀರಿಗಾಗಿ ಸಾಕಷ್ಟು ಅಲೆದಾಟ ನಡೆಸುತ್ತಿವೆ. ಅದರಲ್ಲೂ ಬೇಸಿಗೆಯಲ್ಲಿ ನೀರು ಸಿಗುವುದು ಕಷ್ಟ. ಪಕ್ಷಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಪುಣ್ಯದ ಕೆಲಸ ಎಂದು ತಿಳಿಸಿದರು.
ಪತ್ರಕರ್ತ ಅಶೋಕ ಸಾಲವಡಗಿ ಮಾತನಾಡಿ, ನೀರು ಕೇವಲ ಮನುಷ್ಯನಿಗೆ ಮಾತ್ರವಲ್ಲ ಭೂಮಿ ಮೇಲೆ ಜೀವಿಸುವ ಪ್ರತಿಯೊಂದು ಜೀವಿಗೂ ಅಗತ್ಯವಾಗಿದೆ. ಒಂದು ಹನಿ ನೀರು ಜೀವ ರಕ್ಷಣೆಗೆ ಆಧಾರವಾಗಿದೆ. ಹೀಗಾಗಿ ನೀರು ಅಮೃತಕ್ಕೆ ಸಮಾನ. ಮನುಷ್ಯರಿಗೆ ವ್ಯವಸ್ಥೆ ಮಾಡುವುದಕ್ಕಿಂತ ಪಕ್ಷಗಳಿಗೆ ನೀರಿನ ವ್ಯವಸ್ಥೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದರು.
ಇದೇ ವೇಳೆ ಮುಖ್ಯಮಂತ್ರಿ ಪದಕ ಪುರಸ್ಕೃತರಾದ ಡಿವೈಎಸ್ಪಿ ಡಾ| ದೇವರಾಜ ನಾಯ್ಕ ಮತ್ತು ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ಕಂದಾಯ ನಿರೀಕ್ಷಕ ವಿಠ್ಠಲ ಬಂದಾಳ ಅವರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಅರ್ಚಕ ಸೀತಾರಾಮ ಐ.ಜಿ., ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ದೇವಸ್ಥಾನ ಕಮೀಟಿ ಅಧ್ಯಕ್ಷ ಸಂಜೀವ ದರಬಾರಿ, ಕಾರ್ಯದರ್ಶಿ ಮುದ್ದಪ್ಪ ಅಪ್ಪಾಗೋಳ, ಮಹಾದೇವಪ್ಪ ಗುತ್ತೇದಾರ, ಮಲ್ಲಯ್ಯ ದೇವರು, ಸಿದ್ದು ಗುಡ್ಡಕಾಯಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ತಪ್ಪಿಸಿಕೊಳ್ಳಬಾರದೆಂದು ಮಕ್ಕಳನ್ನು ಸರಪಳಿಯಲ್ಲಿ ಕಟ್ಟಿದ ಮದರಸಾದ ಮೌಲಾನಾ
ಮುಂದುವರೆದ ಮಳೆ: ಶಾಲಾ ಆವರಣಕ್ಕೆ ನುಗ್ಗಿದ ನೀರು, ಮರದ ಕೆಳಗೆ ಪಾಠ
ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ಕನ್ನಡಿಗರಿಗೆ ತೊಂದರೆಯಾದರೆ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ: ಸಿಎಂ ಬೊಮ್ಮಾಯಿ
ಗರ್ಭಗುಡಿಯ ಮೂರ್ತಿ ಶ್ರೀಚಕ್ರ ಸ್ಥಳಾಂತರ: ಸ್ಥಳಕ್ಕೆ ಭೇಟಿ ನೀಡದ ಸಚಿವ ಆನಂದ್ ಸಿಂಗ್; ಆಕ್ರೋಶ