ಎಡದಂಡೆ ಮುಖ್ಯ ಕಾಲುವೆಗೆ 6ರ ವರೆಗೆ ನೀರು ಪೂರೈಕೆ
Team Udayavani, Apr 4, 2022, 3:15 PM IST
ನಾರಾಯಣಪುರ: ಬಸವಸಾಗರ ಜಲಾಶಯದ ಎಡದಂಡೆ ಮುಖ್ಯ ಕಾಲುವೆಗೆ ಏ. 6ರವರೆಗೆ ನೀರು ಹರಿಸಲಾಗುತ್ತದೆ ಎಂದು ಅಣೆಕಟ್ಟು ವಿಭಾಗದ ಎಕ್ಸಿಕ್ಯೂಟಿವ್ ಎಂಜನಿಯರ್ ಶಂಕರ ನಾಯ್ಕೋಡಿ ಮಾಹಿತಿ ನೀಡಿದ್ದಾರೆ.
ಈಗಾಗಲೇ ಹಿಂಗಾರು ಹಂಗಾಮಿನ ಬೆಳೆಗಳ ಸಂರಕ್ಷಣೆ, ಕೆರೆಗಳು ಹಾಗೂ ಇಂಪೌಂಡಿಂಗ್ ರಿಸರವೈಯರ್ ತುಂಬಿಸಿಕೊಳ್ಳಲು ಅಚ್ಚುಕಟ್ಟು ಭಾಗದ ಶಾಸಕರು, ರೈತರು ಹಾಗೂ ರೈತ ಸಂಘಟನೆಗಳು ಏ. 4ರಿಂದ ಏ. 10ರವರಗೆ ಕಾಲುವೆಗಳಿಗೆ ನೀರನ್ನು ಹರಿಸುವಂತೆ ಮನವಿ ಮಾಡಿದೆ.
ಹೀಗಾಗಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಅವರ ನಿರ್ದೇಶನದಂತೆ ಜಲಾಶಯದಲ್ಲಿ ಉಳಿತಾಯವಾದ ನೀರನ್ನು ಏ. 4ರಿಂದ ಏ. 6ರವರೆಗೆ 3 ದಿನಗಳವರೆಗೆ ನೀರು ಹರಿಸಲಾಗುತ್ತದೆ. ಈ ಹಿಂದೆ ಹಿಂಗಾರು ಹಂಗಾಮಿಗೆ ನೀರು ಹರಿಸಲು ಕರೆಯಲಾದ ನೀರಾವರಿ ಸಲಹಾ ಸಮಿತಿ ಸಭೆ ನಿರ್ದೇಶನದಂತೆ ಮುಖ್ಯ ಕಾಲುವೆಗಳಿಗೆ ಏ. 3ರವರೆಗೆ ನೀರು ಹರಿಸಿ ಬಳಿಕ ನೀರು ಸ್ಥಗಿತಗೊಳಿಸಲು ಹೇಳಲಾಗಿತ್ತು ಎಂದು ಪತ್ರಿಕೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ