ಬೆಳೆ ಹಾನಿ ರೈತರ ವಿವರ ದಾಖಲಿಸಲು ವಾರದ ಗಡುವು
Team Udayavani, Nov 23, 2020, 8:35 PM IST
ಯಾದಗಿರಿ: ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ರೈತರಿಗಾದ ಬೆಳೆ ನಷ್ಟ ಪರಿಹಾರವನ್ನು ಆನ್ಲೈನ್ನಲ್ಲಿ ನೋಂದಣಿ ಮಾಡುತ್ತಿದ್ದು, ಮುಂಬರುವ ಒಂದು ವಾರದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಆರ್ ಅಧಿಕಾರಿಗಳಿಗೆ ಗಡುವು ನೀಡಿದರು. ಶನಿವಾರ ನಗರದ ಜಿಲ್ಲಾಧಿಕಾರಿ
ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಇತರೆ ಇಲಾಖೆಗಳ ಅಧಿ ಕಾರಿಗಳ ಸಭೆಯಲ್ಲಿಅವರು ಮಾತನಾಡಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಈ ನಷ್ಟಕ್ಕೆ ಸಂಬಂ ಧಿಸಿದಂತೆ ರೈತರ ಮಾಹಿತಿಯನ್ನು ಪರಿಹಾರ ಆನ್ಲೈನ್ ನಲ್ಲಿ ದಾಖಲಿಸಬೇಕು. ಅದನ್ನು ಮುಂದಿನವಾರದೊಳಗೆ ಪೂರ್ಣಗೊಳಿಸಬೇಕು, ಗ್ರಾಮಲೆಕ್ಕಾಧಿ ಕಾರಿಗಳ ಪರಿಹಾರ ಲಾಗ್ಇನ್ನಲ್ಲಿಬಾಕಿ ಉಳಿದಿರುವ ರೈತರ ಮಾಹಿತಿಯನ್ನು ಕೂಡಲೇ ಪರಿಶೀಲಿಸಿ ಅನುಮೋದನೆನೀಡುವಂತೆ ಎಲ್ಲಾ ಗ್ರಾಮ ಲೆಕ್ಕಾ ಧಿಕಾರಿಗಳಿಗೆಇಂದೇ ನಿರ್ದೇಶನ ನೀಡುವಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಸೂಚಿಸಿದರು.
ವಡಗೇರಾ ತಾಲೂಕಿನ ಶಿವನೂರು, ಶಹಾಪುರದ ಅಣಬಿ ಮತ್ತು ರೋಜಾಗ್ರಾಮಗಳ ಸ್ಥಳಾಂತರಕ್ಕೆ ಸೂಕ್ತ ಜಮೀನು ಗುರುತಿಸಿ ವರದಿ ನೀಡಬೇಕು. ಆನೂರು ಕೆ ಗ್ರಾಮಸ್ಥರಿಗೆ ಹಕ್ಕು ಪತ್ರಗಳನ್ನು ಶೀಘ್ರದಲ್ಲೇ ವಿತರಿಸುವಂತೆ ತಹಶೀಲ್ದಾರರಿಗೆ ತಿಳಿಸಿದರು. ಲೋಕೋಪಯೋಗಿ ಇಲಾಖೆ, ಪಂಚಾಯತ್ರಾಜ್ ಇಲಾಖೆಗಳು ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಸಂಬಂಧಿ ಸಿದಂತೆ ತೆಗೆದುಕೊಂಡಿರುವ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಗಳನ್ನಾಗಿ ಮಾಡಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್, ಸಹಾಯಕ ಆಯುಕ್ತಶಂಕರ ಗೌಡ ಸೋಮನಾಳ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ,ಗುರುಮಠಕಲ್ ತಹಶೀಲ್ದಾರ್ ಸಂಗಮೇಶ್ಜಿಡಗೆ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಪಂಚಾಯತ್ ರಾಜ್ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು