ಹೊಟ್ಟೆಪಾಡಿಗೆ ಮಹಾನಗರಕ್ಕೆ ಗುಳೆ!

ಕೈತುಂಬ ಕೆಲಸವೂ ಇಲ್ಲ, ಕೂಲಿಯೂ ಇಲ್ಲ | ತುತ್ತಿನ ಚೀಲ ತುಂಬಿಸಿಕೊಳ್ಳ ಲು ಸಾಹಸ

Team Udayavani, Sep 9, 2020, 4:17 PM IST

ಹೊಟ್ಟೆಪಾಡಿಗೆ ಮಹಾನಗರಕ್ಕೆ ಗುಳೆ!

ಸಾಂದರ್ಭಿಕ ಚಿತ್ರ

ಯಾದಗಿರಿ: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕೋವಿಡ್ ಅಟ್ಟಹಾಸದಮಧ್ಯೆಯೇ ಗಡಿ ಜಿಲ್ಲೆ ಯಾದಗಿರಿಯಿಂದ ಜನರು ಕೂಲಿ ಕೆಲಸ ಅರಿಸಿ ನಿತ್ಯ ಐದು ನೂರಕ್ಕೂ ಹೆಚ್ಚು ಜನ ಗುಳೆ ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಕೋವಿಡ್ ಆತಂಕ ಮತ್ತು ಕೆಲಸಗಳಿಲ್ಲದೇ ಬೆಂಗಳೂರು, ಪುಣೆ, ಹೈದರಾಬಾದ್‌, ಮುಂಬೈಯಿಂದ ಜಿಲ್ಲೆಗೆ ಸುಮಾರು 40 ಸಾವಿರದಷ್ಟು ಜನರು ಮರಳಿ ಗ್ರಾಮಗಳಿಗೆ ಸೇರಿದ್ದರು. ಪಡಿತರ ಚೀಟಿದಾರರಿಗೆ ಸರ್ಕಾರ ಉಚಿತ ಪಡಿತರ ಧಾನ್ಯಗಳನ್ನೇನೋ ನೀಡುತ್ತಿದೆ. ಆದರೆ ಕೈಯಲ್ಲಿ ಕೆಲಸವೂ ಇಲ್ಲ,ಸಮರ್ಪಕ ಕೂಲಿಯೂ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಗ್ರಾಮಗಳಿಂದ ಮತ್ತೆ ಮಹಾನಗರಗಳತ್ತ ಜನ ಮುಖ ಮಾಡುತ್ತಿದ್ದಾರೆ.

ಕೋವಿಡ್ ವೈರಸ್‌ ರುದ್ರನರ್ತನ ಮುಂದುವರಿಸಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4 ಲಕ್ಷ ದಾಟಿದೆ. ಬೆಂಗಳೂರು ವ್ಯಾಪ್ತಿಯಲ್ಲಿಯೇನಿತ್ಯ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿದ್ದುಇದ್ಯಾವುದನ್ನು ಲೆಕ್ಕಿಸದ ಜನರು ತುತ್ತಿನ ಚೀಲ ತುಂಬಿಸಿಕೊಳ್ಳಲು ಪ್ರಾಣವನ್ನೇ ಪಣಕ್ಕಿಡುವ ಸಾಹಸಕ್ಕೆ ಕೈ ಹಾಕಿದ್ದಾರೆ.

ಪ್ರಸ್ತುತ ರೈಲು ಸಂಚಾರ ವಿರಳವಾಗಿದ್ದು, ಸುಮಾರು ಒಂದು ತಿಂಗಳಿನಿಂದ ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳ ಮೂಲಕ ಜನರು ತಮ್ಮ ಚಿಕ್ಕ ಮಕ್ಕಳೊಂದಿಗೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಜಿಲ್ಲೆಯಿಂದ ನಿತ್ಯ ಅಂದಾಜು 20ರಿಂದ 22 ವಾಹನಗಳು ಸಂಚರಿಸುತ್ತಿರುವ ಕುರಿತು ಸಾರಿಗೆ ಮೂಲಗಳಿಂದ ತಿಳಿದು ಬಂದಿದೆ. ಗ್ರಾಮೀಣ ಜನರು ಸ್ಥಳೀಯವಾಗಿಯೇ ಇದ್ದು ಕೆಲಸ ಮಾಡಲು ಖಾತ್ರಿ ಯೋಜನೆಯಡಿ ಮಾನವ ದಿನ ಸೃಷ್ಟಿಸಿ ಕೆಲಸ ನೀಡಲು ಸರ್ಕಾರ ಸಾಕಷ್ಟು ಪ್ರಯತ್ನಿಸುತ್ತಿದೆ. ಜಿಲ್ಲಾಡಳಿತದ ಉನ್ನತ ಅಧಿಕಾರಿಗಳೂ ಗ್ರಾಮೀಣ ಜನರಿಗೆ ಇದ್ದಲ್ಲಿಯೇ ಕೆಲಸ ಕಲ್ಪಿಸಿ ಅನುಕೂಲ ಮಾಡುತ್ತಿದ್ದೇವೆ ಎನ್ನುತ್ತಾರೆ. ಆದರೆ ಜನರು ಮಾತ್ರ ತಮಗೆ ಕೆಲಸ ಸಿಗುತ್ತಿಲ್ಲ ಎಂದು ಕೋವಿಡ್ ಸಂಕಷ್ಟದಲ್ಲಿಯೂ ಕೆಲಸ ಅರಿಸಿ ಗುಳೆ ಹೋಗುತ್ತಿರುವುದು ತಪ್ಪಿಲ್ಲ.

ಖಾತ್ರಿಯಲ್ಲಿ 18 ಲಕ್ಷ ಮಾನವ ದಿನ : ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವುದು, ಕಲ್ಯಾಣ ಪುನಶ್ಚೇತನ, ಬದು ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದೆ. ಸೆ.8ರ ವರೆಗೆ ಜಿಲ್ಲೆಯಲ್ಲಿ 18.38 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಿ ಕೆಲಸ ನೀಡಲಾಗಿದ್ದು, 13312 ಜನ ಇಂದು ಕೂಲಿ ಕೆಲಸ ನಿರ್ವಹಿಸಿದ್ದಾರೆ.

ಜಿಲ್ಲೆಯಲ್ಲಿ ಗ್ರಾಮೀಣ ಜನರಿಗೆ ಇಲ್ಲಿಯೇ ಕೆಲಸ ನೀಡಲು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ. ಕೊರೊನಾ ಹಬ್ಬುತ್ತಿರುವ ಕಾಲದಲ್ಲಿ ಜನರು ಊರಲ್ಲಿಯೇ ಇದ್ದು ಕೆಲಸಮಾಡಲು ಅನುಕೂಲವಿದೆ. ಗ್ರಾಮೀಣ ಭಾಗದಲ್ಲಿಸೂಕ್ತ ಜಾಗೃತಿ ಮೂಡಿಸಿ ಜನರಿಗೆ ಇಲ್ಲಿಯೇ ಉದ್ಯೋಗ ಕಲ್ಪಿಸುವ ಕುರಿತು ಅಗತ್ಯ ಕ್ರಮವಹಿಸುವ ಬಗ್ಗೆ ಜಿಪಂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. -ಡಾ. ರಾಗಪ್ರೀಯಾ ಆರ್‌. ಜಿಲ್ಲಾಧಿಕಾರಿ

ಇಲ್ಲಿದ್ದು ಏನ್‌ ಮಾಡೋದ್ರಿ,ಸರಿಯಾಗಿ ಕೂಲಿ ಸಿಗಲ್ಲ, ಬೆಂಗಳೂರಿನಲ್ಲಿ ದಿನಕ್ಕೆ 500ರಿಂದ 700 ಕೂಲಿ ಸಿಗುತ್ತದೆ. ಕೊರೊನಾ ಭಯವೂ ಇದೆ. ಆದರೆ ಹೊಟ್ಟೆ ಸುಮ್ಮನಿರಲ್ಲ ಅಲ್ವಾ, ಬೆಂಗಳೂರಿನಿಂದ ಬಂದು 3 ತಿಂಗಳಾಯಿತು. ಈಗ ಮತ್ತೆ ಕೆಲಸ ಸಿಗುವ ನಿರೀಕ್ಷೆಯಲ್ಲಿ ಹೊರಟಿದ್ದೇನೆ -ಬಸವರಾಜ, ಕೂಲಿ ಕಾರ್ಮಿಕ

 

-ಅನೀಲ ಬಸೂದೆ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.