ಕಲ್ಯಾಣದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ
Team Udayavani, Apr 19, 2021, 7:29 PM IST
ಶಶಿಕಾಂತ ಬಂಬುಳಗೆ
ಬೀದರ: ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಮುಗಿಯುತ್ತಿದ್ದಂತೆ ಈಗ ಸೋಲು-ಗೆಲುವಿನ ಲೆಕ್ಕಾಚಾರ ಶುರುವಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡುವೆಯೂ ಮತಗಳ ವಿಭಜನೆ ಲೆಕ್ಕದಲ್ಲಿ ಕಾಂಗ್ರೆಸ್ಗೆ ಲಾಭವಾಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಬಸವಣ್ಣನ ಕರ್ಮಭೂಮಿಯಲ್ಲಿ ಹಿಡಿತ ಸಾ ಧಿಸ ಬೇಕೆಂದು ಪಣ ತೊಟ್ಟು ಆಡಳಿತಾರೂಢ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್-ಜೆಡಿಎಸ್ ಚುನಾವಣೆ ಪ್ರಚಾರ ನಡೆಸಿವೆ.
ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್ನಿಂದ ಮಾಲಾ ನಾರಾಯಣರಾವ್, ಜೆಡಿಎಸ್ನಿಂದ ಸೈಯದ್ ಯಸ್ರಬ್ ಅಲಿ ಖಾದ್ರಿ, ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮತದಾನದ ಕೊನೆ ಹಂತದವರೆಗೂ ವೋಟಿನ ಬೇಟೆ ನಡೆಸಿದ್ದು, ಮತದಾರರು ಈಗ ಯಾರ ಕೈ ಹಿಡಿದಿದ್ದಾರೆ ಎಂಬ ಆಂತರಿಕ ಸಮೀಕ್ಷೆಯಲ್ಲಿ ತೊಡಗಿದ್ದಾರೆ. ಮತದಾನ ನಡೆದ ಮತಗಟ್ಟೆ ಕೇಂದ್ರಗಳ ಪಟ್ಟಿ ಹಿಡಿದಿರುವ ಮುಖಂಡರು ಗೆಲುವಿನ ಲೆಕ್ಕಾಚಾರ ನಡೆಸಿದ್ದಾರೆ.
ಬೂತ್ ಮಟ್ಟದಲ್ಲಿ ಜಾತಿವಾರು ಮತದಾರರ ಸಂಖ್ಯೆ, ಯಾವ ಪಕ್ಷಕ್ಕೆ ಬೆಂಬಲ ಸಿಕ್ಕಿದೆ ಎಂಬಿತ್ಯಾದಿ ಪ್ರಶ್ನೆ ಮುಂದಿಟ್ಟುಕೊಂಡು ಮಾಹಿತಿ ಕಲೆ ಹಾಕುತ್ತಿದ್ದಾರೆ. ತಮ್ಮ ಪಕ್ಷಗಳ ಆಂತರಿಕ ಸಮೀಕ್ಷೆ, ವರದಿ ನೋಡಿ ಕಾರ್ಯಕರ್ತರು ನಮ್ಮದೇ ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ಬೀಗುತ್ತಿದ್ದಾರೆ. ಆದರೆ ಇದಕ್ಕೆ ಸ್ಪಷ್ಟ ಉತ್ತರ ಮಾತ್ರ ಮೇ 2ರ ಫಲಿತಾಂಶದಂದೇ ಸಿಗಲಿದೆ. ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಶೇ.4 ಮತದಾನ (ಶೇ.61.49) ಕಡಿಮೆ ದಾಖಲಾಗಿದ್ದು, ಮತ ವಿಭಜನೆ ಸಾಧ್ಯತೆ ದಟ್ಟವಾಗಿದ್ದು, ಬಿಜೆಪಿಗೆ ಹೊಡೆತ ಬೀಳಬಹುದು ಎನ್ನಲಾಗುತ್ತಿದೆ.
ಬಿಜೆಪಿ ಸಾಂಪ್ರದಾಯಿಕ ಲಿಂಗಾಯತ ಮತ್ತು ಮರಾಠಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಸ್ಪರ್ಧೆಯಿಂದ ನಗರ ಪ್ರದೇಶದಲ್ಲಿ ಈ ಮತಗಳ ವಿಭಜನೆಯಾಗಿದೆ. ಗ್ರಾಮೀಣ ಭಾಗದಲ್ಲಿ ಈ ಸಮುದಾಯದ ಮತ ಪ್ರಮಾಣ ಈ ಬಾರಿ ಕಡಿಮೆಯಾಗಿದ್ದು, ಇದು ಬಿಜೆಪಿ ಮತಗಳ ಕುಸಿತಕ್ಕೆ ಕಾರಣವಾಗಬಹುದು. ಮಾಜಿ ಸಚಿವ ಪಿಜಿಆರ್ ಸಿಂಧ್ಯಾ “ಕೈ’ ಪರ ಪ್ರಚಾರ ಹಿನ್ನೆಲೆ ಪಕ್ಷಕ್ಕೆ ವರ ಆಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಕಾಂಗ್ರೆಸ್ ಮುಸ್ಲಿಂ ಸಮುದಾಯದ ಮತ ನೆಚ್ಚಿಕೊಂಡಿದೆ. ಆದರೆ ಜೆಡಿಎಸ್ನಿಂದ ಮುಸ್ಲಿಂ ಅಭ್ಯರ್ಥಿ ಸ್ಪರ್ಧೆಯಿಂದ “ಕೈ’ಗೆ ಹಿನ್ನಡೆಯಾಗಬಹುದು ಎಂಬ ಲೆಕ್ಕ ತಪ್ಪಿದಂತಿದೆ. ನಗರ ಪ್ರದೇಶದಲ್ಲಿ ಮುಸ್ಲಿಂ ವೋಟ್ ಗಳು ಜೆಡಿಎಸ್ನತ್ತ ಬಿದ್ದಿದ್ದರೂ ಹಳ್ಳಿಗಳಲ್ಲಿ ಕಾಂಗ್ರೆಸ್ ನತ್ತ ವಾಲಿದೆ. ಜತೆಗೆ ಕೋಲಿ-ಕಬ್ಬಲಿಗ ಮತಗಳು ಸಹ “ಕೈ’ ಹಿಡಿದಿವೆ ಎಂಬ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ