ಯಾದಗಿರಿ: ಮತ್ತೆ 7 ಜನರಿಗೆ ಸೋಂಕು
Team Udayavani, Jul 3, 2020, 9:07 AM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಗುರುವಾರ ಜಿಲ್ಲೆಯಲ್ಲಿ ಮತ್ತೆ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 956ಕ್ಕೆ ತಲುಪಿದೆ. ಆತಂಕಕಾರಿ ವಿಚಾರವೆಂದರೆ ಇಂದು ಸೋಂಕು ದೃಢಪಟ್ಟ 5 ಜನರ ಸೋಂಕಿನ ಸಂಪರ್ಕದ ಮೂಲವೇ ಪತ್ತೆಯಾಗಿಲ್ಲ.
ತೆಲಂಗಾಣದ ಹೈದರಾಬಾದ್ ಮೂಲದ ನಂಟು ಹೊಂದಿರುವ ಶಹಾಪುರ ತಾಲೂಕಿನ ನಾಯ್ಕಲ್ ಗ್ರಾಮದ 22 ವರ್ಷದ ಮಹಿಳೆ (ಪಿ-16826), ಹಾಲಭಾವಿಯ 60 ವರ್ಷದ ಮಹಿಳೆ (ಪಿ-16828) ಮಹಾರಾಷ್ಟ್ರದಿಂದ ಹಿಂತಿರುಗಿದ್ದಾರೆ. ಇವರನ್ನು ಹೊರತುಪಡಿಸಿ ಐದು ಜನ ತಾಲೂಕಿನ ಹತ್ತಿಕುಣಿ ಗ್ರಾಮದ 45 ವರ್ಷದ ಪುರುಷ (ಪಿ-16827), ಹೊನಗೇರಾ ಮೂಲದ ಯಾದಗಿರಿಯ ಬಸವೇಶ್ವರ ನಗರದ 16 ವರ್ಷದ ಯುವಕ (ಪಿ-16829) ಮತ್ತು 55 ವರ್ಷದ ಮಹಿಳೆ (ಪಿ-16830), ಗುರುಮಠಕಲ್ ತಾಲೂಕಿನ ಎಜೆಟಿ ಕಾಲೋನಿಯ 45 ವರ್ಷದ ಮಹಿಳೆ (ಪಿ-16831) ಹಾಗೂ ಯಾದಗಿರಿ ತಾಲೂಕಿನ ಕೂಡ್ಲೂರನ 30 ವರ್ಷದ ಪುರುಷ (ಪಿ-16832)ಗೆ ಸೋಂಕು ದೃಢವಾಗಿದ್ದು ಇವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಈವರೆಗೆ 854 ಸೋಂಕಿತರು ಗುಣಮುಖವಾಗಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಗುರುವಾರ ಹೊಸದಾಗಿ 296 ಜನರ ಮಾದರಿ ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 967 ಜನರ ವರದಿ ಬರಬೇಕಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದ 1805 ಜನ, ದ್ವಿತೀಯ ಸಂಪರ್ಕದ 3069 ಜನರನ್ನು ಪ್ರತ್ಯೇಕವಾಗಿರಿಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 24417 ಜನರ ವರದಿ ನೆಗೆಟಿವ್ ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!