ಮುದ್ನಾಳ ಅಭಿಮಾನಿ ಬಳಗದಿಂದ ಸೋಂಕಿತರಿಗೆ ಅನ್ನ-ನೀರು
Team Udayavani, May 9, 2021, 9:42 PM IST
ಯಾದಗಿರಿ: ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಭಿಮಾನಿ ಬಳಗದಿಂದ ಕೊರೊನಾ ಪೀಡಿತರು ಹಾಗೂ ಅವರ ಆರೈಕೆ ಮಾಡುವವರಿಗೆ ಆಹಾರ, ನೀರು ಒದಗಿಸುವ ಕಾರ್ಯ ನಡೆಯುತ್ತಿದ್ದು, ಶನಿವಾರ ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಎಂ.ಕಲಾಲ್ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಆಹಾರ ಮತ್ತು ನೀರು ವಿತರಿಸಿದರು.
ಸ್ವತಃ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಅವರು ನಗರದ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಆಹಾರ ತಯಾರಿಕೆಯಲ್ಲಿ ನಿರತರಾಗಿದ್ದ ಕಾರ್ಯಕರ್ತರನ್ನು ಭೇಟಿಯಾಗಿ ವೀಕ್ಷಿಸಿದರು.
ಅಗತ್ಯವಿರುವ ಜನರಿಗೆ ಆಹಾರ ಮತ್ತು ನೀರು ತಲುಪಿಸಲು ಶ್ರಮಿಸುತ್ತಿರುವ ಕಾರ್ಯಕರ್ತರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ಸೋಮನಾಥ ಜೈನ್, ಭೀಮನಗೌಡ ಕ್ಯಾತನಾಳ, ಮಹಾದೇವಪ್ಪ ಯಲ್ಸತ್ತಿ, ಹನುಮಾನದಾಸ ಮುಂದಡ, ಸಿದ್ದಪ್ಪಗೌಡ ಕಾಳಬೆಳಗುಂದಿ, ಹಣಮಂತರೆಡ್ಡಿ ಮುದ್ನಾಳ, ರಾಚನಗೌಡ ಮುದ್ನಾಳ, ಚಂದ್ರು ಗೋಗಿ, ಮಲ್ಲಣ್ಣಗೌಡ ಮಾಲಿ ಪಾಟೀಲ್ ಹತ್ತಿಕುಣಿ, ಮಾರುತಿ ಕಲಾಲ್, ಅಯ್ಯಣ್ಣ ಹುಂಡೇಕಾರ್, ರಮಾದೇವಿ ಕಾವಲಿ, ಪರವಿನ್ ಬೇಗಂ, ಚಂದ್ರಕಲಾ, ಸುನಿತಾ ಚವ್ಹಾಣ, ರವಿ ಮುದ್ನಾಳ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ