ಯಾದಗಿರಿ ಒಂದು ವಾರ ಲಾಕ್ಡೌನ್ ಘೋಷಣೆ
Team Udayavani, Jul 15, 2020, 11:39 AM IST
ಯಾದಗಿರಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಮಹಾಮಾರಿ ಕೋವಿಡ್ ಆತಂಕ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಕೊನೆಗೂ ಜು.15ರ ರಾತ್ರಿ 8ರಿಂದ 22ರ ರಾತ್ರಿ 8 ಗಂಟೆಯ ವರೆಗೆ ಲಾಕ್ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಅವ ಧಿಯಲ್ಲಿ ಜಿಲ್ಲಾದ್ಯಂತ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ದಿನಬಳಕೆ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಪೆಟ್ರೋಲ್ ಪಂಪ್ ಹಾಗೂ ಇನ್ನಿತರ ಅವಶ್ಯಕ ಅಂಗಡಿಗಳು ಅಲ್ಲದೇ ಕೃಷಿ ಹಾಗೂ ತೋಟಗಾರಿಕೆಗೆ ಸಂಬಂಧಿಸಿದ ರಸಗೊಬ್ಬರ, ಯಂತ್ರೋಪಕರಣ, ಬಿಡಿಭಾಗದ ಅಂಗಡಿಗಳು ತೆರೆದಿರುತ್ತವೆ. ಬ್ಯಾಂಕ್, ಅಂಚೆ ಕಚೇರಿ, ಬಿಎಸ್ಎನ್ಎಲ್ ಕಚೇರಿ ಕಾರ್ಯನಿರ್ವಹಣೆ, ಆಸ್ಪತ್ರೆ, ಔಷ ಧಿ, ಪಶು ಆಸ್ಪತ್ರೆ, ಇತ್ಯಾದಿ ತುರ್ತು ಸೇವೆಗಳಿಗೆ ಆದೇಶ ಅನ್ವಯವಾಗಲ್ಲ. ಯಾವುದೇ ಸಭೆ, ಸಮಾರಂಭ, ಜಾತ್ರೆ, ಸಂತೆಗೆ ನಿರ್ಬಂಧಿ ಸಲಾಗಿದೆ. ಎಲ್ಲ ತರಹದ ಆಹಾರ ಧಾನ್ಯಗಳ ಸಂಸ್ಕರಣ ಘಟಕ, ಕಾರ್ಖಾನೆಗಳಿಗೆ ಆದೇಶ ಅನ್ವಯವಾಗುವುದಿಲ್ಲ.ಬಾರ್, ರೆಸ್ಟೋರೆಂಟ್, ಲಿಕ್ಕರ್ ಔಟ್ ಲೆಟ್, ಹೋಟೆಲ್, ಬಟ್ಟೆ ಅಂಗಡಿ, ಬಂಗಾರದ ಅಂಗಡಿ ಹಾಗೂ ಖಾನಾವಾಳಿ, ಪಾನ್ ಶಾಪ್, ಟೀ ಸ್ಟಾಲ್ಗಳನ್ನು ತೆರೆಯುವುದನ್ನು ನಿಷೇಧಿಸಲಾಗಿದ್ದು ಕೇವಲ (ಪಾರ್ಸಲ್ ಮತ್ತು ಹೋಂ ಡೆಲಿವರಿಗೆ ಅವಕಾಶವಿದೆ). ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಸಂಚಾರಕ್ಕೆ ಅಗತ್ಯ ಮತ್ತು ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ವೇಳೆ ನಿರ್ಬಂಧಿಸಲಾಗಿದೆ.
ಇನ್ನು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದ್ದು ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದುಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ