ಯಾದಗಿರಿಯಲ್ಲಿ 28 ಬಸ್ಗಳ ಸಂಚಾರ: ದೊರೆಯದ ಸ್ಪಂದನೆ
Team Udayavani, May 20, 2020, 12:49 PM IST
ಸಾಂದರ್ಭಿಕ ಚಿತ್ರ
ಯಾದಗಿರಿ: ಗಡಿ ಜಿಲ್ಲೆಯಲ್ಲಿ ಮಂಗಳವಾರ ಒಟ್ಟು 28 ಬಸ್ ಸಂಚಾರ ಆರಂಭವಾಗಿದ್ದು, ಮೊದಲ ದಿನ ಪ್ರಯಾಣಿಕರಿಂದ ಪ್ರಯಾಣಕ್ಕೆ ನಿರೀಕ್ಷಿತ ಸ್ಪಂದನೆ ದೊರೆಯದಿರುವುದು ಕಂಡು ಬಂತು. 50ಕ್ಕೂ ಹೆಚ್ಚು ದಿನಗಳಿಂದ ಸಾರಿಗೆ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದರಿಂದ ಬಸ್ ನಿಲ್ದಾಣಗಳನ್ನು ಸೋಮವಾರ ಸಂಜೆಯೇ ಸ್ವತ್ಛಗೊಳಿಸಲಾಗಿತ್ತು.
ಪ್ರಯಾಣಿಕರು ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳು ಕಾಳಜಿ ವಹಿಸಿದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಫಲಕ ಅಳವಡಿಸಿದ್ದಾರೆ. ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯಾದಗಿರಿ ವಿಭಾಗದ ಬಸ್ಗಳು ರವಿವಾರ ಹೊರತುಪಡಿಸಿ ಪ್ರಥಮ ಹಂತದಲ್ಲಿ 100 ಬಸ್ (ಶೇ.30ರಷ್ಟು) ಕಾರ್ಯಾಚರಣೆ ಮಾಡಲಿವೆ. ಹಂತ ಹಂತವಾಗಿ ಹೆಚ್ಚಿನ ಸಾರಿಗೆ ಬಸ್ಗಳನ್ನು ಪುನಾರಂಭಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ನಿತ್ಯ ಬೆಳಗ್ಗೆ 7:00ರಿಂದ ಸಂಜೆ 7:00ರ ವರೆಗೆ ಅಥವಾ ನಿಗದಿತ ಸ್ಥಳ ತಲುಪುವವರೆಗೆ ಬಸ್ಗಳು ಕಾರ್ಯಾಚರಣೆ ಮಾಡಲಿವೆ. ಮೊದಲ ದಿನವಾದ ಮಂಗಳವಾರ ಸಂಜೆ 5:30ಕ್ಕೆ ಕೊನೆ ಬಸ್ ಜಿಲ್ಲಾ ವ್ಯಾಪ್ತಿಯಲ್ಲಿಯೇ ಸಂಚರಿಸಿದೆ. ಒಟ್ಟು 28 ಬಸ್ಗಳು ಜಿಲ್ಲೆಯಲ್ಲಿ ಕಾರ್ಯಾಚರಣೆ ಮಾಡಿವೆ. ಜಿಲ್ಲಾ ಕೇಂದ್ರದಿಂದ ಶಹಾಪುರ, ಸುರಪುರ, ಗುರುಮಠಕಲ್, ಕಲಬುರಗಿ, ಸೇಡಂಗೆ ಸಂಚಾರ ಆರಂಭಿಸಲಾಗಿತ್ತು. ಇನ್ನು ರಾಯಚೂರು, ವಿಜಯಪುರ, ಹುಬ್ಬಳ್ಳಿ, ದಾವಣಗೆರೆ, ಧಾರವಾಡದ ವರೆಗೆ ಬಸ್ ಸಂಚಾರ ಬುಧವಾರ ಆರಂಭವಾಗುವ ಸಾಧ್ಯತೆಗಳಿವೆ.ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ. ಒಂದು ವೇಳೆ ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾದರೆ ಅಂತರ ಜಿಲ್ಲಾ ಪ್ರಯಾಣ ಅನುಮಾನ ಎನ್ನಲಾಗುತ್ತಿದೆ.ರಾಜ್ಯ ರಾಜಧಾನಿ ಬೆಂಗಳೂರಿಗೆ ಮೇ 20ರಿಂದ ಯಾದಗಿರಿ, ಶಹಾಪುರ ಹಾಗೂ ಸುರಪುರದಿಂದ ಬೆಳಗ್ಗೆ 7:00ರಿಂದ ಬಸ್ ಸಂಚಾರ ಆರಂಭವಾಗಲಿದ್ದು, ಅಂತರ ಜಿಲ್ಲೆಗೆ ಪ್ರಯಾಣಿಸುವ ಜನರ ಬೇಡಿಕೆ ಮೇಲೆ ಸಂಚಾರ ನಿರ್ಧಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ