ಯಾದಗಿರಿಯಲ್ಲಿ ಸಮುದಾಯಕ್ಕೆ ಹರಡಿಲ್ಲ ಕೋವಿಡ್
Team Udayavani, Jun 14, 2020, 6:05 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಯಾದಗಿರಿ: ಯಾದಗಿರಿಯಲ್ಲಿ 735 ಮಂದಿಗೆ ಸೋಂಕು ತಗುಲಿದ್ದು, ಒಬ್ಬರಲ್ಲೂ ರೋಗ ಲಕ್ಷಣವಿಲ್ಲ. ಜಿಲ್ಲೆಯಲ್ಲಿ ಇಲ್ಲಿ ಸಮುದಾಯಕ್ಕೆ ಸೋಂಕು ಹರಡಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಸ್ಪಷ್ಟಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದಗಿರಿಯಲ್ಲಿ ಕೊರೊನಾ ಪರೀಕ್ಷಾ ವರದಿಗಳು ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳ ಜತೆ ಮಾತನಾಡಿದ್ದು, 24 ಇಲ್ಲವೇ 36 ತಾಸಿನೊಳಗೆ ವರದಿ ನೀಡಲು ಆದೇಶಿಸಲಾಗಿದೆ.
ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಇಲ್ಲದ್ದರಿಂದ ಬೇರೆ ಕಡೆ ಅವಲಂಬಿಸಬೇಕಿದೆ. ಇನ್ನು ಒಂದು ವಾರದಲ್ಲಿ ಲ್ಯಾಬ್ ಆರಂಭಿಸಲಾಗುವುದು ಎಂದರು. ಯಾದಗಿರಿ ಮತ್ತು ಉಡುಪಿಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ. ಮಹಾರಾಷ್ಟ್ರದಿಂದ ಆಗಮಿಸಿದವರಲ್ಲೇ ಹೆಚ್ಚು ಸೋಂಕು ಕಂಡುಬರುತ್ತಿದೆ. ಶೇ.95 ಸೋಂಕಿತರಲ್ಲಿ ರೋಗ ಲಕ್ಷಣಗಳಿಲ್ಲ. ರಾಜ್ಯದಲ್ಲಿ 164 (ಶೇ.5) ಸೋಂಕಿತರಿಗೆ ಮಾತ್ರ ರೋಗದ ಲಕ್ಷಣಗಳಿವೆ ಎಂದರು.
ಲಾಕ್ಡೌನ್ ಮುಂದುವರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸೋಂಕು ನಿಯಂತ್ರಣಕ್ಕೆ ತರಲು ಸರ್ಕಾರ ಲಾಕ್ಡೌನ್ ಘೋಷಿಸಿತ್ತು. ಜೀವ ಉಳಿಸಿಯಾಗಿದೆ. ಈಗ ಜೀವದ ಜತೆಗೆ ಜೀವನವೂ ಸಹಜ ಸ್ಥಿತಿಗೆ ಬರಬೇಕಿದೆ. ಸಾಮಾಜಿಕ ಅಂತರ ಕಾಪಾಡಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!