ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ ಉದ್ಘಾಟನೆ
Team Udayavani, May 17, 2020, 2:35 PM IST
ಯಾದಗಿರಿ: ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ನಲ್ಲಿ ತಪಾಸಣೆ ವೇಳೆ ಲೋಪವಾಗದಂತೆ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.
ಯಾದಗಿರಿ ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದ ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದಲ್ಲಿ ಸ್ಥಾಪಿಸಿರುವ ಕೋವಿಡ್-19 ಟೆಸ್ಟ್ ಪೂರ್ವಭಾವಿಯಾಗಿ ನಡೆಸುವ ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ ಶನಿವಾರ ಉದ್ಘಾಟಿಸಿ ಮಾತನಾಡಿದರು. ನಂತರ ಟ್ರೂನ್ಯಾಟ್ ಟೆಸ್ಟ್ ಲ್ಯಾಬ್ ಪರಿಶೀಲಿಸಿದ ಸಚಿವರು, ಲ್ಯಾಬ್ ಕಾರ್ಯ ನಿರ್ವಹಣೆ ಕುರಿತಂತೆ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಶಂಕಿತ ವ್ಯಕ್ತಿಗಳ ಮಾದರಿಗಳನ್ನು ಕೋವಿಡ್-19 ಆರ್ಟಿಫಿಸಿಯಲ್ ಲ್ಯಾಬ್ಗಿಂತ ಮುಂಚೆ ಟ್ರೂನ್ಯಾಟ್ ಲ್ಯಾಬ್ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಇಲ್ಲಿ ನೆಗೆಟಿವ್ ವರದಿ ಬಂದರೆ ನೆಗೆಟಿವ್ ಎಂದು ಪರಿಗಣಿಸಲಾಗುವುದು. ಒಂದು ವೇಳೆ ಪಾಸಿಟಿವ್ ಬಂದರೆ ಅದನ್ನು ಆರ್ಟಿಫಿಸಿಯಲ್ ಲ್ಯಾಬ್ಗ ಕಳುಹಿಸಿ ಕೋವಿಡ್-19 ಟೆಸ್ಟ್ ನಡೆಸಲಾಗುವುದು. ನಂತರ ಬರುವ ವರದಿ ಪರಿಗಣಿಸಲಾಗುವುದು ಎಂದರು. ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ಎಸ್. ರೊಟ್ನಡಗಿ, ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ