21ರಿಂದ ಕಾನೂನು ಸಾಕ್ಷರತಾ ರಥ ಸಂಚಾರ: ಶಿವನಗೌಡ


Team Udayavani, Jan 19, 2020, 3:33 PM IST

19-January-17

ಯಾದಗಿರಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 4 ದಿನಗಳಂತೆ ಜ.21ರಿಂದ ಫೆ.7ರ ವರೆಗೆ ಸಂಚರಿಸಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವನಗೌಡ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಸಂಚಾರಿ ವಾಹನ ಜಿಲ್ಲೆಯಲ್ಲಿ ಸಂಚರಿಸುವ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಯಾದಗಿರಿ ತಾಲೂಕಿನಲ್ಲಿ ಜ.21ರಿಂದ 24ರ ವರೆಗೆ ಸಾಕ್ಷರತಾ ರಥ ಸಂಚರಿಸಲಿದೆ. ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಿ ಗ್ರಾಮಾಂತರ ಪ್ರದೇಶದ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಾಹನ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದೆ. ದಿನಕ್ಕೆ ಮೂರು ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು ತಮ್ಮ ಇಲಾಖೆ ಯೋಜನೆ ಪ್ರಚಾರ ಮಾಡಬೇಕು ಎಂದು ಸೂಚಿಸಿದರು. ಕಾರ್ಯಕ್ರಮಗಳಲ್ಲಿ ಜನನ ಮರಣ ನೋಂದಣಿ, ಮಕ್ಕಳ ಹಕ್ಕುಗಳು, ಕಡ್ಡಾಯ ಶಿಕ್ಷಣದ ಹಕ್ಕು, ಉತ್ತರಾ ಧಿಕಾರತ್ವ, ಗ್ರಾಪಂ ಆಸ್ತಿ ಸಂರಕ್ಷಣೆ, ಬಾಲ ಕಾರ್ಮಿಕ ಪದ್ಧತಿ ಮತ್ತು ಬಾಲ್ಯ ವಿವಾಹ ನಿಷೇಧ, ವಿಕಲಚೇತನರ ಕಾಯ್ದೆ, ಹಿರಿಯ ನಾಗರಿಕರ ಕಾಯ್ದೆ ಸೇರಿದಂತೆ ಮುಂತಾದ ವಿಷಯಗಳ ಕುರಿತು ಉಪನ್ಯಾಸ ನೀಡಬೇಕು ಎಂದು ಹೇಳಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನಾಮದೇವ ಕೆ. ಸಾಲಮಂಟಪಿ, ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಸಿವಿಲ್‌ ನ್ಯಾಯಾಧೀಶ ಲೋಕೇಶ್‌ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಸ್ಮೀತಾ ಮಾಲಗಾಂವೆ ಉಪಸ್ಥಿತರಿದ್ದರು.

ಡಿವೈಎಸ್‌ಪಿ ಯು. ಶರಣಪ್ಪ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯರಾದ ಸಿ.ಎಸ್‌. ಮಾಲಿಪಾಟೀಲ್‌, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.