ಮಹಾನ್‌ ಪುರುಷರ ಆದರ್ಶ ಪಾಲಿಸಿ

ಸನ್ಮಾರ್ಗ ತೋರಿದ ಶರಣರುಮಡಿವಾಳ ಮಾಚಿದೇವ ತತ್ವ-ಸಿದ್ಧಾಂತ ಆಲಿಸಿದರೆ ಸಾಲದು, ಮೈಗೂಡಿಸಿಕೊಳ್ಳಿ: ಶಾಸಕ ಮುದ್ನಾಳ

Team Udayavani, Feb 2, 2020, 1:51 PM IST

2-Febraury-16

ಯಾದಗಿರಿ: 12ನೇ ಶತಮಾನದ ಸಾಮಾಜಿಕ ವ್ಯವಸ್ಥೆಯಲ್ಲಿ ಮೂಢನಂಬಿಕೆ, ತಾರತಮ್ಯ ಹಾಗೂ ಧಾರ್ಮಿಕ ಅಂಧ ಆಚರಣೆಗಳನ್ನು ಖಂಡಿಸಿ, ತಮ್ಮ ವಚನಗಳಲ್ಲಿ ಸಮಾಜವನ್ನು ತಿದ್ದುವ ಮೂಲಕ ಸನ್ಮಾರ್ಗ ತೋರಿದ ಶರಣರಲ್ಲಿ ಮಡಿವಾಳ ಮಾಚಿದೇವರು ಪ್ರಮುಖರಾಗಿದ್ದಾರೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಶನಿವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಡಿವಾಳ ಮಾಚಿದೇವರು ಬಸವಣ್ಣನವರ ತತ್ವ-ಸಿದ್ಧಾಂತದಿಂದ ಪ್ರಭಾವಿತರಾಗಿ ಕಲ್ಯಾಣಕ್ಕೆ ಬಂದು ನೆಲೆಸಿದರು. ಎಲ್ಲಾ ಜಾತಿ, ಮತಗಳು ಒಂದೇ. ನಾವೆಲ್ಲರೂ ಒಂದಾಗಿರಬೇಕು ಎಂದು ಸಾರಿದರು. ಆದ್ದರಿಂದ ಮಡಿವಾಳ ಮಾಚಿದೇವರ ತತ್ವ, ಸಿದ್ಧಾಂತಗಳನ್ನು ಆಲಿಸಿದರೆ ಸಾಲದು, ಮೈಗೂಡಿಸಿಕೊಂಡು ಪಾಲಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ ಮಾತನಾಡಿ, 12ನೇ ಶತಮಾನದಲ್ಲಿ ಶರಣರು ನಡೆಸಿದ ವಚನ ಚಳವಳಿ ಇಡೀ ದೇಶವೇ ಕರ್ನಾಟಕದತ್ತ ನೋಡುವಂತೆ ಮಾಡಿತು. ಮಡಿವಾಳ ಮಾಚಿದೇವರು ಶರಣರ ಬಟ್ಟೆಗಳನ್ನು ಮಡಿ ಮಾಡುವ ಕಾರ್ಯ ಬಹಳ ನಿಷ್ಠೆಯಿಂದ ಮಾಡುತ್ತಿದ್ದರು. ಕಾರ್ಯ ಯಾವುದಾದರೇನು ಮನಸ್ಸು ಶುದ್ಧವಾಗಿಟ್ಟುಕೊಂಡು ಎಲ್ಲರೂ ತಮ್ಮ ಕಾಯಕ ಮಾಡುತ್ತಿರಬೇಕು ಎಂದು ಹೇಳಿದ ಮಾಚಿದೇವರ ಕಾಯಕ ನಿಷ್ಠೆಯನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಅಂದಾಗ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ತಿಳಿಸಿದರು.

ಯಾಮರೆಡ್ಡಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಭೀಮರಾಯ ಲಿಂಗೇರಿ ಉಪನ್ಯಾಸ ನೀಡಿ, ಮಡಿವಾಳ ಮಾಚಿದೇವರು ತುಳಿತಕ್ಕೆ ಒಳಗಾದ ಸಮಾಜವನ್ನು ತಮ್ಮ ವಚನಗಳ ಮೂಲಕ ತಿದ್ದಿದರು. 12ನೇ ಶತಮಾನದ ಕ್ರಾಂತಿಕಾರಿ ಶರಣರಾದ ಇವರು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರಹಿಪ್ಪರಗಿಯ ಪರ್ವತಯ್ಯ ಮತ್ತು ಸುಜ್ಞಾನಮ್ಮ ದಂಪತಿಗೆ 1120-30ರ ಸುಮಾರಿನಲ್ಲಿ ಜನಿಸಿದರು ಎಂಬುದಾಗಿ ಇತಿಹಾಸದಿಂದ ತಿಳಿದು ಬರುತ್ತದೆ ಎಂದರು.

ವಚನಗಳ ರಕ್ಷಕ ಮಡಿವಾಳ ಮಾಚಿದೇವರು ಅನುಭವ ಮಂಟಪಕ್ಕೆ ಬರುವ ಶರಣರನ್ನು ಬರಮಾಡಿಕೊಳ್ಳುವ ಕಾಯಕವು ಇಂದಿನ ವಿದೇಶಾಂಗ, ರಕ್ಷಣಾ ಸಚಿವರ ಕಾಯಕದಂತೆ ಇತ್ತು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ತತ್ವವನ್ನು ವಚನ ಚಳವಳಿ ಮೂಲಕ ತಿಳಿಸಿದರು. ಅಂತಹ ಶರಣರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್‌, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಸರೆಡ್ಡಿಗೌಡ ಪಾಟೀಲ ಅನಪುರ, ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಡಿವಾಳಪ್ಪ ಬಿಜಾಸ್ಪೂರ, ಮಹಾದೇವಪ್ಪ ಯಲಸತ್ತಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಮತ್ತು ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.