ಸ್ನಾನ-ಮೇವು ಸಂಗ್ರಹಕ್ಕೆ ಶೌಚಾಲಯ ಬಳಕೆ!

ಗ್ರಾಮಸ್ಥರ ಮನಸ್ಥಿತಿ ಮಾತ್ರ ಬದಲಾಗಿಲ್ಲ ಬಯಲಿಗೆ ತೆರಳುವ ರೂಢಿ ಬಿಟ್ಟಿಲ್ಲ ಜನ ಜಾಗೃತಿ ಅವಶ್ಯ

Team Udayavani, Mar 14, 2020, 12:28 PM IST

14-March-8

ಯಾದಗಿರಿ: ಜಿಲ್ಲಾ ಕೇಂದ್ರದ ಸಮೀಪವಿರುವ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಸಾವಿರಾಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದ್ದರೂ ಬಳಕೆ ಮಾತ್ರ ಬೆರಳಣಿಕೆಯಷ್ಟಿದ್ದು, ಮಕ್ಕಳು ಸಹ ಚೆಂಬು ಹಿಡಿದು ಶೌಚಕ್ಕೆ ಬಯಲಿಗೆ ಹೋಗುವುದನ್ನು ಇಲ್ಲಿ ಕಾಣಬಹುದಾಗಿದೆ.

ತಾಲೂಕಿನ ಮುಂಡರಗಿ ಗ್ರಾ.ಪಂ ವ್ಯಾಪ್ತಿಯ ಮುಂಡರಗಿ, ಬೆಳಗೇರಿ, ಅಶೋಕನಗರ ತಾಂಡಾ, ಕುರಕುಂಬಳ ತಾಂಡಾ, ಶಕ್ರಾನಾಯಕ ತಾಂಡಾಗಳಲ್ಲಿ ಒಟ್ಟು 1700 ಕುಟುಂಬಗಳು ವಾಸವಾಗಿವೆ. 10 ಸಾವಿರದಷ್ಟು ಜನಸಂಖ್ಯೆಯಿದೆ. ಚೆಕ್‌ ಮೂಲಕ ಪಾವತಿ ಮತ್ತು ಫಲಾನುಭವಿಗಳಿಗೆ ನೇರ ಪಾವತಿ ಸೇರಿ ಒಟ್ಟು 1258 ವೈಯಕ್ತಿಕ ಶೌಚಾಲಯಗಳು ನಿರ್ಮಾಣವಾಗಿವೆ.

ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡ ಬಹುತೇಕರು ಬಳಕೆ ಮಾಡದೇ ಶೌಚಕ್ಕೆ ಬಯಲಿಗೆ ತೆರಳುವುದನ್ನೇ ರೂಢಿ ಮಾಡಿಕೊಂಡಿದ್ದಾರೆ. ಅದೇಕೋ ಏನೋ ತಮ್ಮ ಗ್ರಾಮದ ಸ್ವಚ್ಛತೆಗಾಗಿ ಪ್ರಮುಖ ಪಾತ್ರ ವಹಿಸುವ ಶೌಚಾಲಯ ಬಳಕೆ ಕುರಿತು ಗ್ರಾಮಸ್ಥರಲ್ಲಿ ಅರಿವೇ ಜನರಲ್ಲಿ ಸಾಮಾನ್ಯ ಜ್ಞಾನವೇ ಇಲ್ಲ.

ಬಹುತೇಕ ಜನರು ಹಲವಾರು ನೆಪ ಹೇಳುತ್ತ ಶೌಚಾಲಯ ಬಳಕೆಯಿಂದ ದೂರ ಉಳಿಯುತ್ತಿದ್ದಾರೆ. ನೀರಿನ ಸಮಸ್ಯೆ, ಮನೆ ಮುಂದೆಯೇ ಶೌಚಾಲಯಕ್ಕೆ ತೆರಳುವುದರಿಂದ ದುರ್ವಾಸನೆ ಬೀರುತ್ತದೆ. ಹೀಗಾಗಿ ಬಳಸುತ್ತಿಲ್ಲ ಎನ್ನುವ ಮಾತನ್ನು ಕೆಲವರು ಹೇಳುತ್ತಾರೆ. ಇನ್ನು ಕೆಲವು ಕಡೆ ಅವೈಜ್ಞಾನಿಕವಾಗಿ ಶೌಚಾಲಯದ ಗುಂಡಿ ನಿರ್ಮಿಸಿದ್ದರಿಂದ ನೆರೆ ಹೊರೆಯವರು ಆಕ್ಷೇಪ ಮಾಡುತ್ತಿದ್ದಾರೆ. ಹೀಗಾಗಿ ಶೌಚಾಲಯಗಳು ಬಳಕೆಯಾಗುತ್ತಿಲ್ಲ.

ಕೆಲವರಂತೂ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ದನಗಳ ಮೇವು ಸಂಗ್ರಹ, ಕೋಳಿ ಸಾಕುವುದು, ಸ್ನಾನಕ್ಕಾಗಿ ಈ ಶೌಚಾಲಯಗಳನ್ನು ಬಳಸುತ್ತಿದ್ದಾರೆ. ಸರ್ಕಾರ ಸ್ವಚ್ಛ ಭಾರತ ಅಭಿಯಾನದಡಿ ಬಯಲು ಮುಕ್ತ ದೇಶ ಮಾಡಲು ಹೊರಟಿದೆ. ಆದರೆ, ರಾಜ್ಯದ ಗ್ರಾಮೀಣ ಭಾಗದ ಜನರ ಮನಸ್ಥಿತಿ ಮಾತ್ರ ಬದಲಾಗಿಲ್ಲ. ಸರ್ಕಾರ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುತ್ತಿದೆ. ಮೇಲಧಿಕಾರಿಗಳ ಒತ್ತಡದಿಂದ ಕೆಳ ಹಂತದ ಅಧಿಕಾರಿಗಳು ಶೌಚಾಲಯಗಳನ್ನು ನಿರ್ಮಿಸುವಲ್ಲಿ ಶ್ರಮಿಸುತ್ತಿದ್ದಾರೆ. ಆದರೆ ಬಳಸಬೇಕಿರುವ ಜನರು ಮಾತ್ರ ಮನಸ್ಸು ಮಾಡದಿರುವುದು ವಿಪರ್ಯಾಸವೇ ಸರಿ.

ಅಧಿಕಾರಿಗಳು ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುವುದು ಅಗತ್ಯವಾಗಿದೆ. ಬಯಲಿನಲ್ಲಿ ಶೌಚಕ್ಕೆ ಹೋಗುವುದರಿಂದ ಪರಿಸರ, ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳನ್ನು ತಿಳಿಸಿ, ಗ್ರಾಮೀಣ ಜನರು ಶೌಚಾಲಯ ಬಳಸುವಂತೆ ಅವರ ಮನಸ್ಥಿತಿ ಬದಲಾಯಿಸುವುದು ಮುಖ್ಯವಾಗಿದೆ.

ಶೌಚಾಲಯಗಳ ವಿವರ
2013-14ರಲ್ಲಿ 58, 14-15ರಲ್ಲಿ 03, 15-16ರಲ್ಲಿ 31, 16-17ರಲ್ಲಿ 291, 17-18ರಲ್ಲಿ 275 ಹಾಗೂ 18-19ರಲ್ಲಿ 487 ವೈಯಕ್ತಿಕ ಶೌಚಾಲಯಗಳು ನಿರ್ಮಾಣವಾಗಿದೆ. ಅಲ್ಲದೇ 2018-19ರಲ್ಲಿ ಬಿಟ್ಟು ಹೋಗಿದ್ದ 113 ಕುಟುಂಬಗಳಿಗೆ ಸೌಕರ್ಯ ಒದಗಿಸಲಾಗಿದ್ದು, ಒಟ್ಟು 1258 ಶೌಚಾಲಯ ನಿರ್ಮಾಣವಾಗಿದೆ.

ಮಾದರಿ ಕುಟುಂಬ
ಗ್ರಾಮದಲ್ಲಿ ಬಸವರಾಜ ಮುಂಡರಗಿ ಅವರ ಕುಟುಂಬ ಸುಮಾರು ಏಳು ವರ್ಷಗಳ ಹಿಂದೆಯೇ ಗ್ರಾ.ಪಂ ಪ್ರೋತ್ಸಾಹಧನ ಪಡೆದು, ತಾವು ಒಂದಿಷ್ಟು ಹಣವನ್ನು ಖರ್ಚು ಮಾಡಿ ವ್ಯವಸ್ಥಿತ ಶೌಚಾಲಯ ನಿರ್ಮಿಸಿಕೊಂಡಿದ್ದು ಮಾದರಿಯಾಗಿದೆ.

2013-14ಕ್ಕೆ ಹೋಲಿಸಿದರೆ ಶೌಚಾಲಯ ಬಳಕೆಯಲ್ಲಿ ಬದಲಾವಣೆ ಆಗುತ್ತಿದೆ. ಜನರು ಯಾವ ರೀತಿ ಮೊಬೈಲ್‌ ಬಳಕೆ ರೂಢಿ ಮಾಡಿಕೊಂಡಿದ್ದಾರೋ ಹಾಗೆಯೇ ಶೌಚಾಲಯ ಬಳಕೆ ಮಾಡಬೇಕು. ಶೌಚಾಲಯ ಬಳಕೆಗೆ ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ. ಜನರ ಮನೋಭಾವ ಬದಲಾಗಬೇಕು.
ಭೀಮರಾಯ, ಪಿಡಿಒ

ನಾವು ಶೌಚಾಲಯ ನಿರ್ಮಿಸಿಕೊಂಡು ಏಳು ವರ್ಷಗಳಾದವು. ಮನೆಯವರೆಲ್ಲ ಬಳಸುತ್ತಿದ್ದೇವೆ. ಇದೇ ರೀತಿ ಶೌಚಾಲಯ ನಿರ್ಮಿಸಿಕೊಂಡ ಪ್ರತಿಯೊಬ್ಬರು ಬಳಸಿದರೆ ಒಳ್ಳೆಯದು.
ಬಸವರಾಜ,
ಮುಂಡರಗಿ ಸಿವಾಸಿ

ಫಲಾನುಭವಿಗಳೊಂದಿಗೆ ಕರಾರು ಒಪ್ಪಂದ
ಶೌಚಾಲಯ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ನೇರವಾಗಿ ಹಂತ ಹಂತವಾಗಿ ಹಣ ಜಮಾ ಆಗುವುದರಿಂದ ಜನರು ಶೌಚಾಲಯ ನಿರ್ಮಾಣಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಈ ಹಿಂದೆಯೇ ಜಿಲ್ಲೆಯಲ್ಲಿ ಫಲಾನುಭವಿ ಹಾಗೂ ಗುತ್ತಿಗೆದಾರರನ್ನು ಹುಡುಕಿ ಕರಾರು ಒಪ್ಪಂದ ಮಾಡಿ ಶೌಚಾಲಯಗಳ ನಿರ್ಮಾಣ ಮಾಡಲಾಗುತ್ತಿದೆ .

„ಅನೀಲ ಬಸೂದೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.