ದೋರನಹಳ್ಳಿ ಮಹಾಂತ ಶಿವಾಚಾರ್ಯರು ಹೃದಯಾಘಾತದಿಂದ ನಿಧನ
ಬೆಂಗಳೂರಿನಿಂದ ಬರುವಾಗ ಹೃದಯಾಘಾತ ; ಹಿರೇಮಠದ ಮುಂದೆ ಭಕ್ತರ ಆಕ್ರಂದನ
Team Udayavani, Jan 12, 2023, 8:12 AM IST
ಶಹಾಪುರ: ತಾಲೂಕಿನ ದೋರನಹಳ್ಳಿ ಗ್ರಾಮದ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು.
ಮುಂದಿನ ತಿಂಗಳು ಅವರ 25ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮ ಹಿನ್ನೆಲೆ ಗಣ್ಯರಿಗೆ ಆಮಂತ್ರಣ ನೀಡಲು ಬೆಂಗಳೂರಿಗೆ ತೆರಳಿದ್ದರು. ಎಲ್ಲರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಿ ವಾಪಾಸ್ ಆಗುವ ವೇಳೆ ರೈಲು ನಿಲ್ದಾಣದಲ್ಲಿಯೇ ಶ್ರೀಗಳಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣಕ್ಕೆ ಪ್ರಥಮ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ ಎನ್ನಲಾಗಿದೆ.
ಕೂಡಲೇ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯಿತು. ಆದರೆ ಅಷ್ಟೊತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎನ್ನಲಾಗಿದೆ.
ಶ್ರೀಗಳ ಅಗಲಿಕೆಯಿಂದ ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಭಕ್ತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಶ್ರೀಗಳು ಇನ್ನಿಲ್ಲಎಂಬ ಸುದ್ದಿ ತಿಳಿದ ಭಕ್ತರು ಗ್ರಾಮದ ಹಿರೇಮಠ ಮುಂದೆ ಜಮಾವಣೆಗೊಂಡಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಶ್ರೀಗಳ ಅಗಲಿಕೆಯಿಂದ ಭಕ್ತಾಧಿಗಳು ಕಂಗಾಲಾಗಿದ್ದಾರೆ.
ರೈಲು ನಿಲ್ದಾಣದಲ್ಲಿ ಅವರ ಜೊತೆ ಭಕ್ತರಾದ ರಾಯಪ್ಪಗೌಡ ದರ್ಶನಾಪುರ ಮತ್ತು ಷಣ್ಮುಖಪ್ಪ ಕಕ್ಕೇರಿ ಇದ್ದರು. ಶ್ರೀಗಳಿಗೆ ಹೃದಯಾಘಾತ ಆಗಿರುವುದನ್ನು ಕಂಡು ಪರದಾಡಿದ್ದಾರೆ. ಪ್ರಥಮ ಚಿಕಿತ್ಸೆಗೆ ಮುಂದಾದರೂ ಯಾವುದೇ ಪ್ರಯೋಜನವಾಗದೆ ಕಂಗಾಲಾಗಿ ಕಂಬನಿ ಮಿಡಿದಿದ್ದಾರೆ. ವಿಷಯ ತಿಳಿದ ಕೂಡಲೇ ರಾತ್ರಿಯಿಂದಲೇ ಸಾವಿರಾರು ಭಕ್ತರು ಮಠದತ್ತ ಧಾವಿಸಿದ್ದು, ಆಕ್ರಂದನ ಮುಗಿಲು ಮುಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?