ರೈತರಿಗೆ ಧೈರ್ಯ ತುಂಬಿದ ಶಾಸಕ ಮುದ್ನಾಳ
Team Udayavani, Apr 19, 2020, 7:07 PM IST
ಯಾದಗಿರಿ: ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ವಡಗೇರಾ ವ್ಯಾಪ್ತಿಯಲ್ಲಿ ಹಾಳಾದ ಭತ್ತದ ಬೆಳೆ ವೀಕ್ಷಿಸಿದರು.
ಯಾದಗಿರಿ: ಮಳೆಗಾಲದಲ್ಲಿ ಪ್ರವಾಹದಿಂದ ಕೃಷ್ಣ ಹಾಗೂ ಭೀಮಾ ನದಿ ತೀರದ ಗ್ರಾಮಗಳ ರೈತರ ಭತ್ತದ ಬೆಳೆ ಹಾನಿಯಾಯಿತು. ಈಗ ಅಕಾಲಿಕ ಸುರಿದ ಆಲೆಕಲ್ಲು ಮಳೆಯೂ ಅವಾಂತರ ಸೃಷ್ಟಿಸಿದ್ದು, ರೈತರು ಆತಂಕಕ್ಕೊಳಗಾಗಬಾರದು ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.
ಜಿಲ್ಲೆಯ ಯಾದಗಿರಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ವಡಗೇರಾ ತಾಲೂಕಿನ ಅನಕಸುಗೂರು, ಗೊಂದೆನೂರ, ತುಮಕೂರ, ಕುರಿಹಾಳ, ಕೊಂಕಲ್, ಚನ್ನೂರ, ಐಕೂರ ಗ್ರಾಮಗಳಿಗೆ ಭೇಟಿ ನೀಡಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ರೈತರ ಭತ್ತದ ಬೆಳೆ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಮಳೆ, ಗಾಳಿಯಿಂದ ಅಪಾರ ಪ್ರಮಾಣದಲ್ಲಿ ಭತ್ತದ ಬೆಳೆ ನಾಶವಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಈಗಾಗಲೇ ನಾಶವಾದ ಭತ್ತದ ಬೆಳೆ ಸರ್ವೆ ಮಾಡಿ ಜಿಲ್ಲಾಡಳತಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು.
ಬಿಜೆಪಿ ಮುಖಂಡರಾದ ಶ್ರೀನಿವಾಸರೆಡ್ಡಿ ಪಾಟೀಲ ಚನ್ನೂರ, ಖಂಡಪ್ಪ ದಾಸನ್, ಸಿದ್ದಣಗೌಡ ಕಾಡಂನೋರ, ಶಾಂತಪ್ಪ ಗೊಂದೆನೂರ, ಶರಣಗೌಡ ಐಕೂರ, ಅಮೀನರೆಡ್ಡಿ ಕೊಂಕಲ್, ಅಮ್ಮನಗೌಡ ಅನಕಸುಗೂರು, ಬಸವರಾಜಪ್ಪಗೌಡ ಚಿಕ್ಕಬೂದುರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು