ಮಕ್ಕಳಿಗೆ ಕಡ್ದಾಯ ಲಸಿಕೆ ಹಾಕಿಸಿ
ಯಾವೊಬ್ಬ ಮಗುವೂ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಲು ನಿರ್ದೇಶನ
Team Udayavani, Jan 20, 2020, 1:31 PM IST
ಯಾದಗಿರಿ: ಪ್ರತಿಯೊಬ್ಬರು ಪೋಲಿಯೋ ಲಿಸಿಕೆ ಹಾಕಿಸಿ ಮಕ್ಕಳನ್ನು ಮಹಾಮಾರಿ ಪೋಲಿಯೋದಿಂದ ರಕ್ಷಿಸಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.
ನಗರದ ಸ್ಟೇಷ್ನ ಏರಿಯಾದ ಅಂಬಾಭವಾನಿ ಮಂದಿರ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವತಿಯಿಂದ ರವಿವಾರ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆರೋಗ್ಯ ದೃಷ್ಟಿಯಿಂದ ಲಸಿಕೆ ಹಾಕಿಸಿಕೊಳ್ಳುವುದು ಅವಶ್ಯಕವಾಗಿದೆ. ಎಲ್ಲ ತಾಯಂದಿರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಪೋಷಕರು ನಿರ್ಲಕ್ಷಿಸದೆ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ತಮ್ಮ ಹತ್ತಿರದ ಬೂತ್ ಗಳಿಗೆ ತೆರಳಿ ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸಲೇಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋಮ ಲಸಿಕೆ ಹಾಕಿಸಬೇಕು. ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು ಸೇರಿದಂತೆ ಕಳೆದ ಬಾರಿ ಪಲ್ಸ್ ಪೋಲಿಯೋದಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಯಾರೊಬ್ಬ ಮಗುವೂ ಲಸಿಕೆಯಿಂದ ವಂಚಿತವಾಗಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಪೋಲಿಯೋ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಮತ್ತು ಸಂಘ ಸಂಸ್ಥೆಗಳ ಪಾತ್ರ ಮಹತ್ತರವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ನಗರಸಭೆ ಸದಸ್ಯೆ ಜಯಮ್ಮ ಸುರೇಶ ಮಡ್ಡಿ, ಚಂದ್ರಕಲಾ ಚಂದ್ರಕಾಂತ ಮಡ್ಡಿ, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಂ.ಎಸ್. ಪಾಟೀಲ, ಆರ್ಸಿಎಎಚ್ಓ ಡಾ| ಲಕ್ಷ್ಮೀಕಾಂತ, ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಅಧಿಕಾರಿ ಡಾ| ಭಗವಂತ ಅನವಾರ, ತಾಲೂಕು ಆರೋಗ್ಯ ಅಧಿಕಾರಿ ಡಾ| ಹಣಮಂತರೆಡ್ಡಿ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ಡಾ| ನೂಮಾನ್, ಶಂಕರ ಬಿರಾದಾರ, ಮಹಿಪಾಲರೆಡ್ಡಿ, ಸಿದ್ದರಾಮರೆಡ್ಡಿ ಸೇರಿದಂತೆ ಅಂಗವಾಡಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ