ಅಧಿಕಾರಿಗಳ ನಿಷ್ಕಾಳಜಿಗೆ ಶಾಸಕರು ಗರಂ

ಮೀನುಗಾರ ಕುಟುಂಬಗಳಿಗೆ ಇಲಾಖೆಯಿಂದಲೇ ಲೈಸನ್ಸ್‌ ನೀಡಿಆರೋಗ್ಯ ಇಲಾಖೆ ಸುಧಾರಣೆಗೆ ಸೂಚನೆ

Team Udayavani, Jan 25, 2020, 4:00 PM IST

25-January-17

ಯಾದಗಿರಿ: ತಾಲೂಕಿನಲ್ಲಿ ಮೀನುಗಾರರಿಗೆ ಲೈಸನ್ಸ್‌ ಇಲ್ಲದಿರುವುದರಿಂದ ಸರ್ಕಾರದಿಂದ ನೀಡಲಾಗಿದ್ದ 95 ಮನೆಗಳು ವಾಪಸ್‌ ಹೋಗಿವೆ. ಇದಕ್ಕೆ ಯಾರು ಹೊಣೆ ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಮೀನುಗಾರಿಗೆ ಇಲಾಖೆ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ನಗರದ ತಾಪಂ ಕಚೇರಿಯಲ್ಲಿ ನಡೆದ ತ್ತೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕರು, ತಾಲೂಕಿನಲ್ಲಿ ಮೀನುಗಾರರ ಕುಟುಂಬಗಳಿವೆ. ಆದರೆ ಅವರ ಬಳಿ ಲೈಸನ್ಸ್‌ ಇಲ್ಲದಿರುವುದರಿಂದ ಸರ್ಕಾರಿ ಸೌಕರ್ಯ ಪಡೆಯಲಾಗಲಿಲ್ಲ ಎಂದು ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಮೀನುಗಾರಿಕೆ ಇಲಾಖೆ ಅಧಿಕಾರಿ ಮಹೇಶ, ಮೀನುಗಾರರ ಸಹಕಾರ ಸಂಘವಿದೆ. ಅವರು ಲೈಸನ್ಸ್‌ ನೀಡುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು. ಇಲಾಖೆ ಇರುವುದು ಏತಕ್ಕೆ? ಮೀನುಗಾರರ ಕುಟುಂಬಗಳಿಗೆ ಇಲಾಖೆಯಿಂದಲೇ ಲೈಸನ್ಸ್‌ ನೀಡಬೇಕು ಎಂದು ತಾಕೀತು ಮಾಡಿದರು.

ಮೀನು ಸಾಕಾಣಿಗೆ ಟೆಂಡರ್‌ ಕುರಿತು ಮಾಹಿತಿ ಪಡೆದ ಶಾಸಕರು, ಪ್ರತಿ ವರ್ಷಕ್ಕೊಮ್ಮೆ ಟೆಂಡರ್‌ ಕರೆಯಬೇಕು. ಐದು ವರ್ಷಗಳವರೆಗೆ ನವೀಕರಣ ಮಾಡುವ ನಿಯಮವಿದೆಯೇ ಎಂದು ಪ್ರಶ್ನಿಸಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವಂತೆ ಸೂಚಿಸಿದರು.
ಬಳಿಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲಿಸಿದ ಶಾಸಕರು, ತಮ್ಮ ಕ್ಷೇತ್ರದಲ್ಲಿ ಎಷ್ಟು ಜನರು ಆಯುಷ್ಮಾನ್‌ ಕಾರ್ಡ್‌ ಮಾಡಿಸಿಕೊಂಡಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ|ಹಣಮಂತರೆಡ್ಡಿ ಅವರಿಗೆ ಮಾಹಿತಿ ಕೇಳಿದರು.

ಅಧಿಕಾರಿ ಆಯುಷ್ಮಾನ್‌ ಕಾರ್ಡ್‌ ಫಲಾನುಭವಿಗಳ ಅಂಕಿ ಅಂಶ ನೀಡುವಲ್ಲಿ ವಿಫಲವಾದರು. ಅದಕ್ಕೆ ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಆರೋಗ್ಯ ಇಲಾಖೆ ಬಗ್ಗೆ ಸಾಕಷ್ಟು ದೂರುಗಳಿವೆ. ಸುಧಾರಿಸಿಕೊಂಡು ಕಾಳಜಿಯಿಂದ ಕೆಲಸ ಮಾಡುವಂತೆ ತಾಕೀತು ಮಾಡಿದರು. ಮಹಿಳೆಯರ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆಯಲ್ಲಿ ಯಾದಗಿರಿ ಶೇ.51 ಸಾಧನೆಯಾಗಿದೆ. ಕಡಿಮೆ ಏಕೆ ಎಂಬ ಪ್ರಶ್ನಿಗೆ ಉತ್ತರಿಸಿದ ಅಧಿಕಾರಿ ತಾಲೂಕಿನಲ್ಲಿ ಒಬ್ಬರೇ ಶಶ÷ ಚಿಕಿತ್ಸಕರು ಇರುವುದರಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ ಎಂದು ವಿವರಿಸಿದರು.

ತೋಟಗಾರಿಕೆ ಇಲಾಖೆ ಪ್ರಗತಿ ಪರಿಶೀಲಿಸಿ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅರ್ಹ ಫಲಾನುಭವಿಗಳಿಗೆ ಸೌಕರ್ಯ ಒದಗಿಸಲು ಸೂಚಿಸಿದರು. ಇಲಾಖೆ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ನೀಡದಿರುವುದರಿಂದ ಎಲ್ಲವನ್ನೂ ನಾವೇ ಕೇಳಿದ ಮೇಲೆಯೇ ಹೇಳುತ್ತಿದ್ದೀರಿ, ಯೋಜನೆಗಳ ಬಗ್ಗೆ ಏಕೆ ಮಾಹಿತಿ ಕೊಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ನಾವು ರಾಜಕಾರಣಿಗಳು, ನೀವೂ ರಾಜಕೀಯ ಮಾಡೋದು ಸರಿಯಲ್ಲ ಎಂದರು. ಬೇಸಿಗೆ ಕಾಲ ಸಮೀಪಿಸುತ್ತಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮವಹಿಸಿ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು.

ಲೋಕೋಪಯೋಗಿ ಇಲಾಖೆ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕು, ಟೆಂಡರ್‌ ಕಡಿಮೆ ಮೊತ್ತಕ್ಕೆ ಹಾಕಿದ್ದಾರೆ ಎಂದು ಸುಮ್ಮನಿರಬಾರದು. ಕಾಮಗಾರಿ ಹೇಗೆ ಮಾಡಿದ್ದಾರೆ ಎನ್ನುವುದು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚಿಸಿದರು.

ಅರಣ್ಯ ಇಲಾಖೆ ಮತ್ತು ಸಮಾಜಿಕ ಅರಣ್ಯ ಇಲಾಖೆಯಿಂದ ಎಲ್ಲಿ ಸಸಿ ನೆಡುವ ಕಾರ್ಯವಾಗಿದೆ? ಸೋಲಾರ್‌ ಅಳವಡಿಕೆ ಎಲ್ಲಿಲ್ಲೆ ಅಗಿದೆ? ಸಿಲಿಂಡರ್‌ ವಿತರಣೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು. ಪಶುಪಾಲನಾ, ಕೃಷಿ, ಶಿಕ್ಷಣ, ಜೆಸ್ಕಾಂ, ಶಿಶು ಅಭಿವೃದ್ಧಿ ಯೋಜನೆ ಹೇಗೆ ಹಲವು ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ತಾಪಂ ಅಧ್ಯಕ್ಷೆ ಭೀಮವ್ವ ಎಂ. ಅಚ್ಚೋಲಾ, ತಾಪಂ ಅಧಿಕಾರಿ ಬಸವರಾಜ ಎಸ್‌. ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.