![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂ.
Team Udayavani, May 23, 2020, 12:52 PM IST
![23-May-08](https://www.udayavani.com/wp-content/uploads/2020/05/23-May-08-620x465.gif)
ಯಾದಗಿರಿ: ಜಿಲ್ಲೆಯ ಕಡೇಚೂರು- ಬಾಡಿಯಾಳ ಕೈಗಾರಿಕಾ ಪ್ರದೇಶದ ಎಸ್.ಬಿ ಪೈರಾಲೀಸಿಸ್ ಇಂಡಸ್ಟ್ರೀಸ್ನ ಬಾಯ್ಲರ್ ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಕಾರ್ಮಿಕರ ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಸರ್ಕಾರ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕಳೆದ ಮಾ.10ರಂದು ಹಳೆಯ ಟೈರ್ ಗಳಿಂದ ಎಣ್ಣೆ ತೆಗೆಯುವ ವೇಳೆ ಬಾಯ್ಲರ್ ಸ್ಫೋಟಗೊಂಡು 8 ಜನ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದವು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಗೊಂಡ ಎಂಟು ಜನರಲ್ಲಿ ಹುಸೇನ್ ಮತ್ತು ಆರೀಫ್ ಇಬ್ಬರು ವ್ಯಕ್ತಿಗಳು ಮೃತ ಪಟ್ಟಿದ್ದರು. ಸ್ಫೋಟದಲ್ಲಿ ಗಾಯಗೊಂಡಿರುವ ಗಾಯಾಳುಗಳ ವೈದ್ಯಕೀಯ ವೆಚ್ಚದ ಶೇ.50 ಕಾರ್ಖಾನೆ ಆಡಳಿತ ವರ್ಗ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯಿಂದ ಪಾವತಿ ಮಾಡಲಾಗುವುದು.
ಕಾರ್ಖಾನೆ ಆಡಳಿತ ವರ್ಗ ವೈದ್ಯಕೀಯ ವೆಚ್ಚ ಭರಿಸದಿದ್ದಲ್ಲಿ ಶೇ.100 ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯೇ ಭರಿಸಿ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪ್ರತಿಕ್ರಿಯಿಸಿ, ಬಾಯ್ಲರ್ ಸ್ಫೋಟದಲ್ಲಿ ಮೃತ ಹಾಗೂ ಗಾಯಾಳುಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಮಂಡಲ ಅಧಿವೇಶನದಲ್ಲಿ ಒತ್ತಾಯಿಸಲಾಗಿತ್ತು. ಇದೀಗ ಸರ್ಕಾರ ಮೃತರಿಗೆ 3ಲಕ್ಷ ಹಾಗೂ ಗಾಯಾಳುಗಳಿಗೆ ವೈದ್ಯಕೀಯ ವೆಚ್ಚ ನೀಡುವುದಾಗಿ ತಿಳಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.