Yadagiri; ಟೆಂಡರ್ ವಿಳಂಬ ಸಲ್ಲದು: ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಎಚ್ಚರಿಕೆ

ಬರ ನಿರ್ವಹಣೆ ಹಾಗೂ ನಗರೋತ್ಥಾನ ಯೋಜನಯಡಿಯ ಪ್ರಗತಿ ಪರಿಶೀಲನಾ ಸಭೆ

Team Udayavani, Sep 20, 2023, 7:01 PM IST

1-wwwewqe

ಯಾದಗಿರಿ: ಯಾವುದೇ ಕಾಮಗಾರಿ ಇರಲಿ, ಇಲಾಖವಾರು ಕರೆಯಬೇಕಾದ ಟೆಂಡರ್ ವಿಳಂಬ ಮಾಡಬೇಡಿ, ಪರಿಶೀಲಿಸಿ ಬೇಗನೆ ಕಾಮಗಾರಿ ಟೆಂಡರ್ ಕರೆಯಿರಿ, ಅಧಿಕಾರಿಗಳು ತಮ್ಮ ನಡುವೆ ಪತ್ರ ವ್ಯವಹಾರದ ಮೂಲಕ ಸಂಪರ್ಕಿಸುವುದಕ್ಕಿಂತ ನೇರ ಮಾತುಕತೆ ಮೂಲಕ ಮಾಹಿತಿ ಪಡೆದುಕೊಳ್ಳಿ ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ನಗರೋತ್ಥಾನ ಯೋಜನಯಡಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ಸಚಿವ ದರ್ಶನಾಪುರ ಮಾತನಾಡಿದರು. ಟೆಂಬರ್ ಪ್ರಕ್ರಿಯೆಯಲ್ಲಿ ತಡವಾಗಬಾರದು, ಟೆಂಡರ್ ಕರೆಯುವುದೇ ವಿಳಂಬವಾದರೆ ಇನ್ನೂ ಕಾಮಗಾರಿ ಆರಂಭಿಸುವುದು ಯಾವಾಗ, ಪ್ರಗತಿ ಹೊಂದುವುದು ಹೇಗೆ ಎಂದು ಅಧಿಕಾರಿಗಳಿಗೆ ಸಚಿವ ದರ್ಶನಾಪುರ ಖಡಕ್ಕಾಗಿ ಹೇಳಿದರು.

ಜಿಲ್ಲೆಯಲ್ಲಿ 410 ಶುದ್ಧ ಕುಡಿಯುವ ನೀರಿನ ಘಟಕಗಳ ಪೈಕಿ,214 ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು,50 ಘಟಕಗಳು ಸಂಪೂರ್ಣ ಹಾಳಾಗಿವೆ. ಬಾಕಿ ಉಳಿದ ದುರಸ್ತಿ ಇರುವ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ 2.70 ಕೋ.ರೂಗಳ ಅನುದಾನ ಕೋರಿ, ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಈ ಅನುದಾನ ಲಭ್ಯವಾಗುವ ವರೆಗೆ ಆಯಾ ತಾಲೂಕು ಪಂಚಾಯಿತಿ ಗಳ ವ್ಯಾಪ್ತಿಯಲ್ಲಿ ಶೇ.10 ರಷ್ಟು ಅನುದಾನವನ್ನು ಕಾಯ್ದಿರಿಸಿ, ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ,ಹಾಗೂ ನಿರ್ವಹಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನಗರೋತ್ತಾನ ಯೋಜನೆ ಹಂತ-3 ಹಾಗೂ ಹಂತ-4 ರ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಟೆಂಡರ್ ಪ್ರಕ್ರಿಯೆಗಳನ್ನು ತಕ್ಷಣ ತೀವ್ರಗೊಳಿಸಿ ಇರುವ ಅನುದಾನ ಸಮರ್ಪಕ ಬಳಕೆಯಾಗಬೇಕು. ಚರಂಡಿ, ರಸ್ತೆ ಹಾಗೂ ಕಟ್ಟಡ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು.

ಜಿಲ್ಲೆಯಲ್ಲಿ ಎಲ್ಲೂ ಸಹ ಕುಡಿಯುವ ನೀರಿನ ಸಮಸ್ಯೆ ಕಂಡುಬರಬಾರದು ಎನ್ನುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ ಮತ್ತು ಪ್ರತಿ ಗ್ರಾಮಕ್ಕು ವಿವಿಧ ಯೋಜನೆಗಳ ಮೂಲಕ ಕುಡಿಯುವ ನೀರು ತಲುಪಿಸುವ ಕಾರ್ಯ ಸರ್ಕಾರ ಮತ್ತು ಜಿಲ್ಲಾಡಳಿತದಿಂದು ನೆರವೇರುತ್ತದೆ ಬರ ಪರಿಹಾರ ಕಾಮಗಾರಿ ರಾಜ್ಯ ಸರ್ಕಾರದ ಸೂಚನೆಯಂತೆ ಮತ್ತು ಮುಖ್ಯಂತ್ರಿಗಳ ಸಲಹೆಯೊಂದಿಗೆ ಜಿಲ್ಲೆಯಲ್ಲಿ ಸೂಕ್ತ ಪರಿಹಾರ ರೈತರಿಗೆ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ, ಈಗಾಗಲೇ ಘೋಷಿಸಿರುವ ತಾಲೂಕು ಕೇಂದ್ರಗಳಲ್ಲಿ ಬರ ಪರಿಹಾರ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ. ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಗಳು, ಗರಿಮಾ ಪನ್ವಾರ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಬರ, ನಗರೋತ್ತಾನ, ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ವಿವಿದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜನತಾ ದರ್ಶನ
ರಾಜ್ಯ ಸರ್ಕಾರವು ಸಾರ್ವಜನಿಕರ ಕುಂದುಕೊರತೆಗಳನ್ನು ಹೆಚ್ಚಿನ ರೀತಿಯಲ್ಲಿ ಪರಿಹರಿಸಲು ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲು ನಿರ್ದೇಶನ ನೀಡಿದೆ. ಅದರಂತೆ ಬರುವ ಸೆಪ್ಟೆಂಬರ್.25 ರಂದು ಯಾದಗಿರಿಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ನಂತರ ಪ್ರತಿ 15 ದಿನಗಳಿಗೊಮ್ಮೆ ವಿವಿಧ ತಾಲೂಕುಗಳಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವರು ತಿಳಿಸಿದರು

ಪ್ರತಿ ಗ್ರಾಮಕ್ಕು ಶುದ್ಧ ಕುಡಿಯುವ ನೀರು ದೊರಕಿಸುವ ಸದುದ್ದೇಶ ನಮ್ಮದಾಗಿದೆ, ಜಿಲ್ಲೆಯಲ್ಲಿ ಎಲ್ಲೂ ಸಹ ನೀರಿನ ಸಮಸ್ಯೆ ಕಂಡುಬರಬಾರದು ಎನ್ನುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.