ಯಾದಗಿರಿ: ಆಕಳು-ಎಮ್ಮೆ ಸಾವಿಗೆ ಕೇವಲ 10 ಸಾವಿರ

ಕಾಡು ಪ್ರಾಣಿಗಳ ಕುರಿತು ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಿ ಅಮಾಯಕರ ಪ್ರಾಣ ಕಾಪಾಡಬೇಕು.

Team Udayavani, Mar 17, 2021, 6:39 PM IST

Aranya

ಯಾದಗಿರಿ: ವನ್ಯ ಜೀವಿಗಳ ಉಪಟಳದಿಂದ ಬಲಿಯಾದ ಸಾಕು ಪ್ರಾಣಿಗಳ ಸಾವಿಗೆ ಅರಣ್ಯ ಇಲಾಖೆ ಬಿಡಿಗಾಸಿನ ಪರಿಹಾರ ನೀಡುತ್ತಿದೆ. ಇದು ರೈತಾಪಿ ವಲಯದಲ್ಲಿ ಅಸಮಾಧಾನ ಮೂಡಿಸಿದ್ದು, ಲಕ್ಷಾಂತರ ಬೆಲೆ ಬಾಳುವ ಪ್ರಾಣಿಗಳಿಗೆ ಕನಿಷ್ಟ ಪರಿಹಾರ ನೀಡಲಾಗುತ್ತಿದೆ. ಪರಿಹಾರ ಮೊತ್ತ ಹೆಚ್ಚಿಸಬೇಕು ಎನ್ನುವ ಕೂಗು ಕೇಳಿ ಬಂದಿದೆ.

ಪ್ರಸ್ತುತ ಸಾಕು ಪ್ರಾಣಿಗಳಾದ ಆಕಳು-ಎಮ್ಮೆ ಖರೀದಿಸಲು 50 ಸಾವಿರದಷ್ಟು ಹಣ ನೀಡಿ ಖರೀದಿಸಬೇಕಿರುವ ಅನಿವಾರ್ಯತೆಯಿದೆ. ಇದನ್ನು ಕಳೆದುಕೊಂಡ ರೈತ ಸಮುದಾಯಕ್ಕೆ ಇಲಾಖೆ ಬಿಡಿಗಾಸು ಪರಿಹಾರ ನೀಡುತ್ತಿದ್ದು, ಇದು ಯಾವ ನ್ಯಾಯ ಎನ್ನುತ್ತಿದೆ ರೈತ ಸಮೂಹ.

ಈಗಷ್ಟೇ ಬೇಸಿಗೆ ಕಾಲ ಆರಂಭವಾಗುತ್ತಿದ್ದು, ವನ್ಯಜೀವಿಗಳು ನಾಡಿನತ್ತ ಮುಖ ಮಾಡುವ ಆತಂಕ ಎದುರಾಗಿದೆ. ಬೆಳೆಯುತ್ತಿರುವ ನಗರೀಕರಣ, ಅರಣ್ಯ ನಾಶದಿಂದ ವನ್ಯಜೀವಿಗಳು ನಾಡಿನಲ್ಲಿ ಪ್ರತ್ಯಕ್ಷವಾಗುವುದಲ್ಲದೇ, ಮನುಷ್ಯ ಹಾಗೂ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಆಗಾಗ ನಡೆಯುವುದು ಸಾಮಾನ್ಯವಾಗಿದೆ.

ಜಿಲ್ಲೆಯ ಯಾದಗಿರಿ ತಾಲೂಕಿನ ವ್ಯಾಪ್ತಿಯಲ್ಲಿ 21038 ಹೆಕ್ಟೇರ್‌, ಸುರಪುರ 5145 ಹೆ. ಹಾಗೂ ಶಹಾಪುರದಲ್ಲಿ 2684 ಹೆ. ಅರಣ್ಯ ಪ್ರದೇಶ ಸೇರಿ ಜಿಲ್ಲೆಯಲ್ಲಿ ಒಟ್ಟು 28868 ಹೆಕ್ಟೇರ್‌ ಪ್ರದೇಶವಿದ್ದು, ಮೊಸಳೆ, ಚಿರತೆ, ತೋಳ ಹಾಗೂ ಕಾಡು ಹಂದಿ ದಾಳಿಯಾಗಿರುವ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ.

2019-20ರಲ್ಲಿ ಜಿಲ್ಲೆಯಲ್ಲಿ ಮೊಸಳೆ ದಾಳಿಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಕುರಿ, ಆಕಳು, ಎಮ್ಮೆ ಸೇರಿ 12 ಪ್ರಾಣಿಗಳು ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿರುವ ಪ್ರಕರಣ ನಡೆದಿದೆ. ವ್ಯಕ್ತಿ ಸಾವಿಗೆ 5 ಲಕ್ಷ, ಗಾಯಗೊಂಡವರಿಗೆ 30 ಸಾವಿರ, ಕುರಿಗೆ ತಲಾ 5 ಸಾವಿರ ಹಾಗೂ ಆಕಳು-ಎಮ್ಮೆಗೆ ತಲಾ 10 ಸಾವಿರ ಸೇರಿ 8.51ಲಕ್ಷ ಪರಿಹಾರ ನೀಡಲಾಗಿದೆ.

2020-21ರಲ್ಲಿ ಇತ್ತೀಚೆಗಷ್ಟೇ ಯಕ್ಷಿಂತಿಯಲ್ಲಿ ನದಿ ದಡದ ನಿಂತ ನೀರಿನಲ್ಲಿ ಕುರಿಗಳ ಮೈ ತೊಳೆಯುವ ವೇಳೆ ಕುರಿಗಾಹಿ ಲಕ್ಷ್ಮಣ ಶಾರದಹಳ್ಳಿ ಎನ್ನುವ ವ್ಯಕ್ತಿ ಮೊಸಳೆ ದಾಳಿಗೆ ಬಲಿಯಾಗಿದ್ದು, ಮಾನವರ ಮೇಲೆ 2 ಕಾಡು ಹಂದಿ ದಾಳಿ, 1 ಚಿರತೆ ದಾಳಿ, 2 ತೋಳ ಹಾಗೂ 2 ಮಂಗ ದಾಳಿಯಾದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇನ್ನು 21 ಕುರಿಗಳ ಮೇಲೆ ತೋಳ, ತಲಾ ಒಂದು ಆಕಳು ಮತ್ತು ಎಮ್ಮೆಯ ಮೇಲೆ ಮೊಸಳೆ ದಾಳಿಯಾಗಿದ್ದು, 3.85 ಲಕ್ಷ ರೂ. ಪರಿಹಾರ ನೀಡಲಾಗಿರುವ ಕುರಿತು ಇಲಾಖೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಅರಣ್ಯ ಇಲಾಖೆಯ ನಿಯಮದಂತೆ ಮಾನವರ ಮೇಲಿನ ವನ್ಯ ಜೀವಿ ದಾಳಿಯಿಂದ ಗಾಯಗೊಂಡರೆ 30 ಸಾವಿರ, ಸಾವನ್ನಪ್ಪಿದರೆ 7.50 ಲಕ್ಷ, ಆಕಳು-ಎಮ್ಮೆ ಸಾವಿಗೆ 10 ಸಾವಿರ, ಕುರಿಗೆ 5 ಸಾವಿರ ಪರಿಹಾರ ನೀಡಲಾಗುತ್ತಿದೆ. ಕಾಡು ಪ್ರಾಣಿ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಮಾಸಿಕ 2 ಸಾವಿರ ಮಾಶಾಸನ ಸೌಲಭ್ಯವೂ ವಿತರಣೆಯಾಗುತ್ತಿದೆ

ವನ್ಯ ಜೀವಿಗಳಿಂದ ಗಾಯಗೊಂಡ ಮತ್ತು ಸಾವನ್ನಪ್ಪಿದ ಸಾಕು ಪ್ರಾಣಿ ಮತ್ತು ಮಾನವರ ಸಾವಿನ ಪ್ರಕರಣಗಳಿಗೆ ಇಲಾಖೆಯಿಂದ ನಿಯಮದಂತೆ ಪರಿಹಾರ ವಿತರಿಸಲಾಗಿದೆ. ವನ್ಯ ಜೀವಿಗಳ ಕುರಿತು ಸಾರ್ವಜನಿಕರು ಜಾಗೃತರಾಗಿರಬೇಕು.
ಎಂ.ಎಲ್‌. ಬಾವಿಕಟ್ಟಿ,
ಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ಯಾದಗಿರಿ

ಅರಣ್ಯ ನಾಶದಿಂದ ಪ್ರಾಣಿಗಳು ನಾಡಿನತ್ತ ಬರುತ್ತಿವೆ. ಆಕಳು ಮತ್ತು ಎಮ್ಮೆಯ ಖರೀದಿಸಬೇಕಿದ್ದರೆ ಬೆಲೆ ಕನಿಷ್ಟ 50 ಸಾವಿರದಷ್ಟಿದೆ. ಇದಕ್ಕೆ ಇಲಾಖೆ ಕೇವಲ ಬಿಡಿಗಾಸು ಪರಿಹಾರ ನೀಡುವುದು ರೈತಾಪಿ ಜನರನ್ನು ನೋವಿನ ಮಧ್ಯೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಿದಂತಾಗುತ್ತದೆ. ಹಾಗಾಗಿ ಆಕಳು ಮತ್ತು ಎಮ್ಮೆಯ ಪರಿಹಾರವನ್ನು ಹೆಚ್ಚಿಸುವುದು ಸೂಕ್ತ. ಇಲಾಖೆಯವರು ಕಾಡು ಪ್ರಾಣಿಗಳ ಕುರಿತು ಫಲಕಗಳನ್ನು ಅಳವಡಿಸಿ ಜಾಗೃತಿ ಮೂಡಿಸಿ ಅಮಾಯಕರ ಪ್ರಾಣ ಕಾಪಾಡಬೇಕು.
ಮಲ್ಲಿಕಾರ್ಜುನ ಸತ್ಯಂಪೇಟ, ರೈತ ಮುಖಂಡ

ಅನಿಲ ಬಸೂದೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.