ಜನರಿಗೆ ಗ್ಲಾಕೋಮಾ ಅರಿವು ಅಗತ್ಯ

ದೃಷ್ಟಿದೋಷದಿಂದ ಜೀವನ ಕತ್ತಲಾಗಿಸಲು ಬಿಡಬೇಡಿ ಕಣ್ಣಿನ ಪರೀಕ್ಷೆ ಮಾಡಿಸಿ ಕಾಳಜಿ ವಹಿಸಿ

Team Udayavani, Mar 12, 2020, 12:41 PM IST

12-March-8

ಯಾದಗಿರಿ: ಗ್ಲಾಕೋಮಾ ದೃಷ್ಟಿ ಕದಿಯುವ ಕಾಯಿಲೆಯಾಗಿದೆ. ಈ ಬಗ್ಗೆ ದೃಷ್ಟಿದೋಷ ಬರುವ ಮೊದಲೇ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿ ಡಾ|ಭಗವಂತ ಅನವಾರ ಹೇಳಿದರು.

ನಗರದ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯ, ಇಂಡಿಯನ್‌ ಮೆಡಿಕಲ್‌ ಅಸೋಷಿಯೇಶನ್‌ ಹಾಗೂ ರೆಡ್‌ ಕ್ರಾಸ್‌ ಘಟಕದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪಂಚೇಂದ್ರೀಯಗಳಲ್ಲಿ ಕಣ್ಣು ಬಹು ಮುಖ್ಯ ಅಂಗವಾಗಿದೆ. ಕಾರಣ ಪ್ರತಿಯೊಬ್ಬರೂ ಕಣ್ಣಿನ ಪರೀಕ್ಷೆ ಮಾಡಿಸಿ ಕಾಳಜಿ ವಹಿಸಬೇಕು. ದೃಷ್ಟಿದೋಷದಿಂದ ಜೀವನ ಕತ್ತಲಾಗಿಸಲು ಬಿಡಬಾರದು. ಯಾರೂ ಈ ಗ್ಲಾಕೋಮಾದಿಂದ ಬಳಲಬಾರದು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ಲಾಕೋಮಾ ರೋಗಿಗಳ ಜೊತೆ ಆರೋಗ್ಯ ಇಲಾಖೆ ಇದೆ. ಅವರು ಆರೋಗ್ಯದಿಂದ ಇರಲು ನಾವು ಶ್ರಮಿಸುತ್ತೇವೆ. ವಿದ್ಯಾರ್ಥಿಗಳು ಗ್ಲಾಕೋಮಾ ಬಗ್ಗೆ ಕುಟುಂಬದವರಿಗೆ ತಿಳಿಸಬೇಕು.

ಜತೆಗೆ ಅಕ್ಕ-ಪಕ್ಕದ ಮನೆಯವರಿಗೆ ಹಾಗೂ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು. ತಲೆನೋವು, ಕಣ್ಣು ಉಬ್ಬು ನೋವು, ಕಣ್ಣು ಕೆಂಪಾಗುವುದು, ದೃಷ್ಟಿ ಕಡೆಮೆಯಾಗುವಿಕೆ, ಬಣ್ಣ ಬದಲಾವಣೆ ಇವು ಗ್ಲಾಕೋಮಾದ ಲಕ್ಷಣಗಳಾಗಿವೆ ಎಂದು ವಿವರಿಸಿದರು. ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸರಾವ್‌ ದೊಡ್ಮನಿ ಮಾತನಾಡಿ, ಯಾವುದೇ ರೋಗ ಬರುವ ಮುಂಚಿತವಾಗಿ ಅಗತ್ಯ ಕ್ರಮ ಅನುಸರಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಗ್ಲಾಕೋಮಾದ ಬಗ್ಗೆ ವಿದ್ಯಾರ್ಥಿಗಳು ಇತರರಿಗೆ ತಿಳಿಹೇಳಬೇಕು. ಹೆಚ್ಚಾಗಿ ಮೊಬೈಲ್‌, ಟಿವಿ ನೋಡುವುದರಿಂದಲೂ ಕಣ್ಣಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಕಣ್ಣಿನ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದರೆ ಒಳಿತು ಎಂದು ಸಲಹೆ ನೀಡಿದರು.

ವಿಜಯಲಕ್ಷ್ಮೀ ಆಸ್ಪತ್ರೆ ನೇತ್ರತಜ್ಞ ಡಾ| ಸಮೀನಾ ನೀಲಕಂಠ ಸೈದಾಪುರ ಮಾತನಾಡಿ, ಗ್ಲಾಕೋಮಾ ರೋಗ ತಿಳಿಯದ ರೀತಿಯಲ್ಲಿ ಬಂದು ಕಣ್ಣಿನ ನರಗಳನ್ನು ನಿಶ್ಯಕ್ತಗೊಳಿಸಿ ದೃಷ್ಟಿ ದೋಷ ಕಡಿಮೆ ಮಾಡುತ್ತದೆ. ದೃಷ್ಟಿದೋಷ ಹುಟ್ಟಿನಿಂದ ವೃದ್ಧರವರೆಗೂ ಬರಬಹುದು. ಪ್ರತಿಯೊಬ್ಬರು ವರ್ಷಕ್ಕೊಮ್ಮೆ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ಈಗಾಗಲೇ ವಿಶ್ವದಲ್ಲೇ 1.2 ಮಿಲಿಯನ್‌ ಜನ ಗ್ಲಾಕೋಮಾದಿಂದ ಬಳಲುತ್ತಿದ್ದಾರೆ. ತಲೆನೋವು, ಒಂದೇ ಬಣ್ಣ ವಿವಿಧ ಬಣ್ಣಗಳ ರೀತಿಯಲ್ಲಿ ಕಾಣುವುದು, ಪದೇ ಪದೇ ಕಣ್ಣಿನ ಗ್ಲಾಸ್‌ ಬದಲಾಯಿಸುವುದರಿಂದ ಗ್ಲಾಕೋಮಾ ಬರುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ಹೇಳಿದರು.

ಐಎಂಎ ಜಿಲ್ಲಾಧ್ಯಕ್ಷ ಡಾ| ಸಿ.ಎಂ. ಪಾಟೀಲ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಇದ್ದರು. ಕಿರಿಯ ಆರೋಗ್ಯ ಸಹಾಯಕ ಶರಣಬಸಪ್ಪ ಹೊಸಮನಿ ಸ್ವಾಗತಿಸಿದರು. ಹಿರಿಯ ಆರೋಗ್ಯ ಸಹಾಯಕ ಮಹಿಪಾಲರೆಡ್ಡಿ ನಿರೂಪಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದಕುಮಾರ ವಂದಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.