ಶ್ರಮಿಕ್ ರೈಲಿನಲ್ಲಿ ವಲಸಿಗರು ವಾಪಸ್
Team Udayavani, May 18, 2020, 5:22 PM IST
ಸಾಂದರ್ಭಿಕ ಚಿತ್ರ
ಯಾದಗಿರಿ: ಮಹಾರಾಷ್ಟ್ರದ ಸಿಂಧೂದುರ್ಗಾದಿಂದ ರಾಜ್ಯದ ಯಾದಗಿರಿ, ರಾಯಚೂರು, ಕಲಬುರಗಿ, ಬೀದರ, ವಿಜಯಪುರ, ಬಾಗಲಕೋಟ, ಕೊಪ್ಪಳ, ಶಿವಮೊಗ್ಗ, ಉಡುಪಿ, ರಾಮನಗರ ಹಾಗೂ ಉತ್ತರ ಕನ್ನಡದ 1400 ವಲಸೆ ಕಾರ್ಮಿಕರನ್ನು ಕರೆದುಕೊಂಡು ಶ್ರಮಿಕ ರೈಲು ಮಧ್ಯಾಹ್ನ 3:00ಕ್ಕೆ ನಗರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿತು.
ಎಲ್ಲ ಪ್ರಯಾಣಿಕರ ಹೆಸರು ಮತ್ತು ಇನ್ನಿತರ ವಿವರವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ನೋಂದಾಯಿಸಿಕೊಂಡು ವೈದ್ಯಕೀಯ ತಪಾಸಣೆ ಮಾಡಿದ ನಂತರ ಆಹಾರ, ನೀರು ನೀಡಿ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಗಳ ಮೂಲಕ ಅವರ ಗ್ರಾಮಗಳಿಗೆ ಕಳುಹಿಸಲಾಯಿತು.
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸಹಾಯಕ ಆಯುಕ್ತ ಶಂಕರ ಸೋಮನಾಳ, ಡಿಎಚ್ಒ ಎಂ.ಎಸ್. ಪಾಟೀಲ, ಟಿಎಚ್ಒ ಹಣಮಂತರೆಡ್ಡಿ ಮದ್ನಿ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಸಾರಿಗೆ ಸಂಸ್ಥೆ ವಿಭಾಗಾಧಿಕಾರಿ ಶ್ರೀಹರಿ ಬಾಬು, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ ಇದ್ದರು. ನಿಲ್ದಾಣದಲ್ಲಿ ಪೋಲಿಸ್ ಭದ್ರತೆ ಹೆಚ್ಚಾಗಿ ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ