ಯಾದಗಿರಿಯಲ್ಲಿ ಎರಡಂಕಿ ಸೋಂಕಿತರು ಪತ್ತೆ!


Team Udayavani, Apr 12, 2021, 8:34 PM IST

ಸದವದ್

ಯಾದಗಿರಿ : ಕೊರೊನಾ ಎರಡನೇ ಅಲೆ ಜಿಲ್ಲೆಗೆ ವ್ಯಾಪಕವಾಗಿ ಕಾಡುತ್ತಿದ್ದು ನಿತ್ಯ ಎರಡಂಕಿಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ನೆರೆಯ ಕಲಬುರಗಿ, ಬೀದರ ಹಾಗೂ ಹೈದರಾಬಾದ್‌ಗೆ ಪ್ರಯಾಣಿಸಿದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು ಕಲಬುರಗಿಯಿಂದ ನಿತ್ಯ ಅಲೆದಾಡುವವರಲ್ಲಿಯೇ ಸೋಂಕು ಪತ್ತೆಯಾಗುವ ಮೂಲಕ ಜಿಲ್ಲೆಗೆ ಕಂಟಕ ಕಾಡುತ್ತಿದೆ. 2021ರ ಫೆಬ್ರವರಿ ಕೊನೆ ವಾರದಿಂದ ಸೋಂಕು ಒಂದಂಕಿಯಲ್ಲಿ ಪತ್ತೆಯಾಗಿ ಮಾ.6ರಂದು 16 ಜನರಲ್ಲಿ ಸೋಂಕು ಪತ್ತೆಯಾಗಿತ್ತು.

ಜಿಲ್ಲೆಯಲ್ಲಿ 120 ಸಕ್ರಿಯ ಪ್ರಕರಣಗಳಿದ್ದು, 13 ಜನರು ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 9 ಜನರು ಗುಣಮುಖರಾಗಿದ್ದಾರೆ. 107 ಜನರು ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಮೊದಲನೇ ಅಲೆಯಲ್ಲಿ ಜಿಲ್ಲೆಗೆ ಮಹಾರಾಷ್ಟ್ರ, ಗುಜರಾತ ಹಾಗೂ ತೆಲಂಗಾಣಕ್ಕೆ ಪ್ರಯಾಣಿಸಿದವರಿಂದ ಸೋಂಕು ಹರಡಲು ಆರಂಭಿಸಿತ್ತು. ಕಳೆದ ವರ್ಷ ಮಾರ್ಚ್‌ ವೇಳೆ ಜಿಲ್ಲೆಯಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಸುಮಾರು 70 ಜನರು ವಿದೇಶಗಳಿಂದ ಹಿಂತಿರುಗಿದ್ದರಿಂದ ಅವರಿಗೆ ಎರಡು ಅವಧಿಗೆ ಮನೆಯಲ್ಲಿಯೇ ಇರಿಸಲಾಗಿತ್ತು.

ಆದರೆ ಸೋಂಕು ದೃಢಪಟ್ಟಿರಲಿಲ್ಲ. 2020ರ ಮೇ 12ರಂದು ಮೊದಲು ಗುಜರಾತ್‌ ಮೂಲದಿಂದ ಆಗಮಿಸಿದ್ದ ಸುರಪುರ ಮೂಲದ ಪಿ-867, ಪಿ-868ರಲ್ಲಿ ಸೋಂಕು ದೃಢಪಟ್ಟಿತ್ತು. ಆಗಿನ ಜಿಲ್ಲಾ  ಧಿಕಾರಿ ಎಂ. ಕೂರ್ಮಾರಾವ್‌ ಸೇರಿದಂತೆ ಅಧಿ ಕಾರಿಗಳು ಕೊರೊನಾ ನಿಯಂತ್ರಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ವಹಿಸಿ ಜ್ವರ ತಪಾಸಣೆ ಕೇಂದ್ರ, ಕ್ವಾರಂಟೈನ್‌ ಕೇಂದ್ರ ಆರಂಭಿಸಿ ಹೊರಗಿನಿಂದ ಬಂದ ಜನರನ್ನು ಪ್ರತ್ಯೇಕವಾಗಿರಿಸುವ ಕಾರ್ಯ ಮಾಡಿ ಕೊರೊನಾ ಕಟ್ಟಿ ಹಾಕಲು ಸಾಕಷ್ಟು ಶ್ರಮಿಸಿದ್ದರು.

ಪ್ರಸ್ತುತ ಆರೋಗ್ಯ ಇಲಾಖೆ ಅಧಿ ಕಾರಿಗಳ ಪ್ರಕಾರ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಅಡೆತಡೆಗಳಿಲ್ಲ. ಸಮರ್ಪಕ ಹಾಸಿಗೆ ವ್ಯವಸ್ಥೆ, ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ 17 ವೆಂಟಿಲೇಟರ್‌, 15 ಐಸಿಯು ಸೇರಿದಂತೆ 300 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆಯಿದ್ದು, ಇದರಲ್ಲಿ 150 ಬೆಡ್‌ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೀಸಲಿರಿಸಲಾಗಿದೆ.

ಜಿಲ್ಲೆಯ ಕೇವಲ ಒಂದೇ ಒಂದು ಶಹಾಪುರದ ಸ್ಪಂದನಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ 15 ಬೆಡ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಸೋಂಕು ಪತ್ತೆಯಾದರೆ ಕಲಬುರಗಿಯಿಂದ ನೆರವು ಪಡೆಯಲು ಆರೋಗ್ಯ ಇಲಾಖೆ ಚಿಂತನೆಯಲ್ಲಿದೆ. ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಜಿಲ್ಲೆಯಲ್ಲಿ ಮಾಸ್ಕ್ ಧರಿಸದವವರಿಗೆ ದಂಡ ವಿ ಧಿಸಿ ಜಾಗೃತಿ ಮೂಡಿಸಲಾಗುತ್ತಿದ್ದು, ಆರೋಗ್ಯ ಇಲಾಖೆ ಈಗಾಗಲೇ ನೆರೆ ಜಿಲ್ಲೆ ಮತ್ತು ರಾಜ್ಯಗಳಿಂದ ಆಗಮಿಸುವವರಿಗೆ ಕಡ್ಡಾಯವಾಗಿ ಬಸ್‌ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಕೊರೊನಾ ಪರೀಕ್ಷೆಗೆ ಗಂಟಲು ದ್ರವ ಮಾದರಿ ಪಡೆದು ವಿವಿರವಾದ ಮಾಹಿತಿ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ| ಇಂದುಮತಿ ಕಾಮಶೆಟ್ಟಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.