ಯಾದಗಿರಿ: 117 ಮಂದಿಗೆ ಸೋಂಕು
Team Udayavani, Jul 22, 2020, 9:41 AM IST
ಯಾದಗಿರಿ: ಜಿಲ್ಲಾ ಕೇಂದ್ರ ಸೇರಿದಂತೆ ಹಲವು ಗ್ರಾಮೀಣ ಕೋವಿಡ್ ಸೋಂಕು ವ್ಯಾಪಿಸಿದ್ದು, ಮಂಗಳವಾರ 117 ಜನರಲ್ಲಿ ಪಾಸಿಟಿವ್ ದೃಢವಾಗಿದ್ದು, ಸೋಂಕಿತರ ಸಂಖ್ಯೆ 1713ಕ್ಕೇರಿಕೆಯಾಗಿದೆ.
ಜಿಲ್ಲೆಯಲ್ಲಿ ಸೋಂಕಿನ ಸಂಪರ್ಕದ ಮೂಲವೇ ಪತ್ತೆಯಾಗದ ಜನರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ಹರಡುತ್ತಿದೆ. ವಡಗೇರಾ ಸಮುದಾಯ ಆಸ್ಪತ್ರೆಯ ಮೂರು ಸಿಬ್ಬಂದಿ 35, 24, 40 ವರ್ಷದ ಪುರುಷ ಪಿ-72467, ಪಿ-72573, ಪಿ-72574 ಅಲ್ಲದೇ ರಾಜನಕೊಳ್ಳೂರ ಪಿಎಚ್ಸಿಯ 55 ವರ್ಷದ ಪುರುಷ ಪಿ-72755, ಚಾಮನಾಳ ಪಿಎಚ್ಸಿಯ 25 ವರ್ಷದ ಮಹಿಳೆ ಪಿ-73276 ಸೇರಿದಂತೆ ಪೊಲೀಸ್ ಸಿಬ್ಬಂದಿ 35 ವರ್ಷದ ಪುರುಷ ಪಿ-73439 ಅಲ್ಲದೇ ಯಾದಗಿರಿ ನಗರದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.
8 ವರ್ಷದ ಬಾಲಕಿ ಪಿ-72942 ಸೇರಿ 26 ವರ್ಷದ ಮಹಿಳೆ ಪಿ-69283, 54 ವರ್ಷದ ಮಹಿಳೆ ಪಿ-71287, 40 ವರ್ಷದ ಪುರುಷ ಪಿ-71292, 20 ವರ್ಷದ ಪುರುಷ ಪಿ-71293, 50 ವರ್ಷದ ಪುರುಷ ಪಿ-71325, 45 ವರ್ಷದ ಪುರುಷ ಪಿ-71452, 40 ವರ್ಷದ ಪುರುಷ ಪಿ-71453, 26 ವರ್ಷದ ಮಹಿಳೆ ಪಿ-71454 ಸೇರಿದಂತೆ ಒಟ್ಟು 84 ಪುರುಷರು ಮತ್ತು 33 ಮಹಿಳೆಯರಿಗೆ ಸೋಂಕು ವಕ್ಕರಿಸಿದೆ. ಜಿಲ್ಲಾಡಳಿತ ಮಂಗಳವಾರ 174 ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳಿಸಿದ್ದು, 130 ಜನರ ವರದಿ ನೆಗೆಟಿವ್ ಬಂದಿದೆ.
ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 3,525 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 5,237 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ 131 ಕಂಟೈನ್ಮೆಂಟ್ ಝೋನ್ ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 98 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ 15, ಸುರಪುರ 44 ಜನ ಹಾಗೂ ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್ ನಲ್ಲಿ 50 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಜಿಲ್ಲೆಯ 1 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್ನಲ್ಲಿ ಒಟ್ಟು 10 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ