ಡಿಸ್ಚಾರ್ಜ್ ಹಂತದಲ್ಲಿದ್ದ ಯುವ ಅಧಿಕಾರಿ ಕೋವಿಡ್ ನಿಂದ ಸಾವು
Team Udayavani, May 17, 2021, 6:56 PM IST
ಬೀದರ : ಇಲ್ಲಿನ ಭೂ ಕಂದಾಯ ವಿಭಾಗದ ಸಹಾಯಕ ನಿರ್ದೇಶಕರಾಗಿದ್ದ 32 ವರ್ಷದ ಅಧಿಕಾರಿ ರವಿಕುಮಾರ ಕೋವಿಡ್ ಗೆ ಬಲಿಯಾಗಿದ್ದಾರೆ.
ಚಿಕಿತ್ಸೆಯಿಂದ ಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಹಂತಕ್ಕೆ ಬಂದ ವೇಳೆ ದಿಢೀರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಯುವ ಅಧಿಕಾರಿ ಸಾವನ್ನಪ್ಪಿದ್ದಾರೆ.
ಮೂಲತಃ ಮೈಸೂರಿನವರಾಗಿರುವ ರವಿಕುಮಾರ ಕಳೆದ ನಾಲ್ಕು ವರ್ಷಗಳಿಂದ ಇಲ್ಲಿನ ಡಿಸಿ ಕಚೇರಿಯ ಭೂ ಕಂದಾಯ ವಿಭಾಗದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು.
ಕೋವಿಡ್ ಸೋಂಕು ಹಿನ್ನಲೆ ಒಂದು ವಾರದಿಂದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲಾಧಿಕಾರಿಗಳು ರವಿಕುಮಾರ ಅವರ ಸೂಕ್ತ ಚಿಕಿತ್ಸೆಗಾಗಿ ವಿಶೇಷ ಕಾಳಜಿ ವಹಿಸಿದ್ದರಾದರೂ ಯಾವುದೇ ಫಲ ನೀಡಲಿಲ್ಲ.
ಕೊರೊನಾದಿಂದ ಚೇತರಿಸಿಕೊಂಡಿದ್ದರಿಂದ ಅವರ ಆಕ್ಸಿಜನ್ ಸಹ ತೆಗೆಯಲಾಗಿತ್ತು. ಆದರೆ, ರವಿವಾರ ಬೆಳಗ್ಗೆ ಅವರ ಆರೋಗ್ಯದಲ್ಲಿ ಬದಲಾವಣೆ ಆಗಿದ್ದು, ಮೆದುಳಿನಲ್ಲಿ ರಕ್ತ ಕ್ಲಾಟ್(ಬ್ರೇನ್ ಬ್ಲಡ್ ಕ್ಲಾಟ್) ಆಗಿ ಕೋಮಾಗೆ ಜಾರಿದ್ದರು. ವೈದ್ಯ ಸಿಬ್ಬಂದಿ ಸಾಕಷ್ಟು ಪ್ರಯತ್ನ ಪಟ್ಟರು ಚಿಕಿತ್ಸೆ ಫಲಿಸದೇ ರಾತ್ರಿ ಕೊನೆಯುಸಿರೆಳೆದ್ದಾರೆ. ಮೃತ ರವಿಕುಮಾರ ಅವರ ಮೃತದೇಹವನ್ನು ಅಂಬುಲೆನ್ಸ್ ಮೂಲಕ ಮೈಸೂರಿಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ
MUST WATCH
ಹೊಸ ಸೇರ್ಪಡೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?