ಮದರಂಗಿಯಲ್ಲಿ ಮೂಡಿಬಂತು ವಿಜ್ಞಾನದ ಕಂಪು!


Team Udayavani, May 13, 2021, 10:23 PM IST

13-15

ಸಿರಿಗೆರೆ: ಹಲವು ವೈವಿಧ್ಯಮಯ ಶೈಕ್ಷಣಿಕ ಚಟುವಟಿಕೆಗಳಿಂದ ಗಮನ ಸೆಳೆಯುತ್ತಿರುವ ಸಿರಿಗೆರೆ ಸಮೀಪದ ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿನಿಯರು ಈಗ ಮತ್ತೂಮ್ಮೆ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಮೆಹಂದಿ ಬಳಸುವ ಮೂಲಕ ತಮ್ಮ ಪಠ್ಯದಲ್ಲಿರುವ ಹಲವು ವಿಜ್ಞಾನದ ಚಿತ್ರಗಳನ್ನು ತಮ್ಮ ಕೈ ಮೇಲೆ ಅರಳಿಸಿಕೊಂಡು ವಿಜ್ಞಾನದ ಕಂಪುನ್ನು ಮೂಡಿಸಿದ್ದಾರೆ.

ಕೋವಿಡ್‌ ಎರಡನೇ ಅಲೆಯ ತೀವ್ರತೆಯಿಂದ ಶಾಲಾ ಕಾಲೇಜುಗಳು ಬಂದ್‌ ಆಗಿವೆ. ಆದರೂ ಮುಂದೆ ಬರಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಎದುರಿಸುವ ತವಕ ವಿದ್ಯಾರ್ಥಿಗಳಲ್ಲಿ ಇದ್ದೇ ಇದೆ. ಶಾಲೆಯೂ ಇಲ್ಲ, ಪಾಠವೂ ಇಲ್ಲ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಜಡತ್ವ ಬೆಳೆಯಬಾರದು ಎಂಬ ಉದ್ದೇಶದಿಂದ ಕಡ್ಲೆàಗುದ್ದು ಶಾಲೆಯಲ್ಲಿ ಹಲವು ಶೈಕ್ಷಣಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಇವುಗಳು ಮುಂದೆ ಬರುವ ಪರೀಕ್ಷೆಗೆ ಸಹಾಯಕವಾಗಲಿ ಎಂಬ ಉದ್ದೇಶದಿಂದ ಈ ಚಟುವಟಿಕೆ ಆರಂಭವಾಗಿದೆ.

ಈ ನಿಟ್ಟಿನಲ್ಲಿ ಮಕ್ಕಳಿಗೆ, ಅದರಲ್ಲೂ ಶಾಲಾ ಹೆಣ್ಣು ಮಕ್ಕಳಿಗೆ ಮೆಹಂದಿ ಎಂದರೆ ತುಂಬಾ ಇಷ್ಟ. ಮೆಹಂದಿಯಲ್ಲಿ ಏಕೆ ವಿಜ್ಞಾನ ಪಠ್ಯಕ್ಕೆ ಸಂಬಂಧಿಸಿದ ಹಲವು ಚಿತ್ರಗಳನ್ನು ಮೂಡಿಸುವಂತಹ ಕೆಲಸ ಮಾಡಬಾರದು ಎಂಬ ಆಲೋಚನೆ ಬಂದದ್ದೇ ತಡ, ಶಾಲಾ ಶಿಕ್ಷಕರು ಇಂತಹದೊಂದು ಕಾರ್ಯಕ್ಕೆ ಕೈಹಾಕಿದರು. ಮದರಂಗಿ ಬಳಸಿಕೊಂಡು ತಮಗಿಷ್ಟವಾದ ವಿಜ್ಞಾನ ಚಿತ್ರಗಳನ್ನು ತಮ್ಮ ಕೈಗಳ ಮೇಲೆ ಚಿತ್ರರೂಪದಲ್ಲಿ ಬಿಡಿಸಲು ಸೂಚಿಸಲಾಯಿತು. ವಿದ್ಯಾರ್ಥಿನಿಯರು ತುಂಬಾ ಉತ್ಸುಕತೆಯಿಂದ ಮೆಹಂದಿಯಲ್ಲಿ ವಿಜ್ಞಾನ ಚಿತ್ರಗಳನ್ನು ಅರಳಿಸಿದ ಶಾಲಾ ಶಿಕ್ಷಕರು ಹುಬ್ಬೇರಿಸುವಂತೆ ಮಾಡಿದ್ದಾರೆ.

ಪೋಷಕರು ತಮ್ಮ ಮಕ್ಕಳ ಕೈಗಳಲ್ಲಿ ವೈವಿಧ್ಯಮಯ ವಿಜ್ಞಾನದ ಚಿತ್ರಗಳನ್ನು ನೋಡಿ ಖುಷಿ ಪಟ್ಟಿದ್ದಾರೆ. ಇದರಿಂದ ವಿನೂತನವಾದ ರೀತಿಯಲ್ಲಿ ಈ ಶಾಲೆಯ ಶಿಕ್ಷಕರು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿದಂತಾಗಿದೆ. “ಮೆಹಂದಿ ಎಂದರೆ ನನಗೆ ತುಂಬಾ ಇಷ್ಟ. ಹಾಗಾಗಿ ಅಂದಚಂದಕ್ಕೆ ಕೈಮೇಲೆ ಮದರಂಗಿಯಿಂದ ಚಿತ್ರ ಬಿಡಿಸಿಕೊಳ್ಳುತ್ತಿದೆ. ನಮ್ಮ ಶಾಲೆಯಲ್ಲಿ ವಿಜ್ಞಾನ ಚಿತ್ರ ಬಿಡಿಸುವ ಕಾರ್ಯಕ್ರಮ ಇರಿಸಿಕೊಂಡಾಗ ಇನ್ನಿಲ್ಲದ ಸಂತೋಷವಾಯಿತು. ಇದನ್ನು ಸದುಪಯೋಗ ಮಾಡಿಕೊಂಡು ನನ್ನ ಎರಡೂ ಕೈಗಳ ಮೇಲೆ ಪಠ್ಯಕ್ರಮದ ಚಿತ್ರಗಳನ್ನು ಬಿಡಿಸಿಕೊಂಡಿದ್ದೇನೆ’ ಎನ್ನುತ್ತಾಳೆ 10ನೇ ತರಗತಿಯ ವಿದ್ಯಾರ್ಥಿನಿ ಸೃಷ್ಟಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ವಿಷಯದಲ್ಲಿ 16 ಅಂಕಗಳನ್ನು ಚಿತ್ರಗಳಿಗೆ ನಿಗದಿಗೊಳಿಸಲಾಗಿದೆ.

ಚಿತ್ರಗಳನ್ನು ಈ ರೀತಿಯಾಗಿ ಮಕ್ಕಳು ಆಸಕ್ತಿಯಿಂದ ಕಲಿತರೆ 16 ಅಂಕಗಳನ್ನು ಸುಲಭವಾಗಿ ಗಳಿಸಬಹುದು. ಹಾಗಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಅವರಿಗಿಷ್ಟವಾದ ವಿಜ್ಞಾನ ಚಿತ್ರಗಳನ್ನು ಮೆಹಂದಿಯಲ್ಲಿ ಬರೆಯಲು ತಿಳಿಸಲಾಗಿತ್ತು. ಎಲ್ಲ ವಿದ್ಯಾರ್ಥಿಗಳು ತುಂಬಾ ಸಂತೋಷದಿಂದ ಚಿತ್ರಗಳನ್ನು ಬರೆದಿದ್ದಾರೆ’ ಎಂದು ಶಾಲೆಯ ಮುಖ್ಯ ಶಿಕ್ಷಕರಾದ ಮಹೇಶ್‌ ತಿಳಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.