ಘಾಗ್ರಾ, ಲೆಹೆಂಗಾ, ಚುಂದರ್‌

ಆಹಿರ್‌ ಎಂಬ ಇನ್ನೊಂದು ಹರಿಯಾಣದ ಮುಖ್ಯ ಪಂಗಡದಲ್ಲಿ ಸ್ತ್ರೀಯರು ಅಂಗಿಯಾ ಲೆಹಂಗಾ ಹಾಗೂ ಚುಂದರ್‌ ಧರಿಸುತ್ತಾರೆ

Team Udayavani, Oct 25, 2020, 9:10 AM IST

ಘಾಗ್ರಾ, ಲೆಹೆಂಗಾ, ಚುಂದರ್‌

ಹರಿಯಾಣ ರಾಜ್ಯವು ಭಾರತದ ಸಿರಿವಂತ ರಾಜ್ಯಗಳಲ್ಲಿ ಒಂದು. ಅಂತೆಯೇ ಸಾಂಸ್ಕೃತಿಕ ವಾಗಿಯೂ ಸಿರಿವಂತವಾಗಿರುವ ಈ ರಾಜ್ಯದ ಉಡುಗೆ- ತೊಡುಗೆಯೂ ತನ್ನದೇ ಆದ ವೈಶಿಷ್ಟ್ಯಹೊಂದಿದೆ. ಹರಿಯಾಣದ ಮುಖ್ಯ ಒಂದು ಪಂಗಡವಾಗಿರುವ ಜಾಟ್‌ ಜನಾಂಗದ ಸಮುದಾಯದಲ್ಲಿ ಮಹಿಳೆಯರು ದಾಮನ್‌ ಎಂಬ ಹೆಸರಿನ ಘಾಗ್ರಾದಂತಹ ತೊಡುಗೆಯನ್ನು ಧರಿಸುತ್ತಾರೆ. ಘಾಗ್ರಾದಲ್ಲಿ ವೈಶಿಷ್ಟ್ಯವಿರುವಂತೆ ಹಲವು ವಿನ್ಯಾಸಗಳನ್ನೂ, ಗಾಢ ರಂಗುಗಳಿಂದಲೂ ದಾಮನ್‌ ಅಲಂಕರಿಸ್ಪಟ್ಟಿರುತ್ತದೆ. ತುದಿಯ ಭಾಗದಲ್ಲಿ ಅಂದದ ಜರಿಯ ಅಂಚನ್ನೂ ಹೊಂದಿರುತ್ತದೆ.

ಇದರ ಮೇಲೆ ಧರಿಸುವ ಕುಪ್ಪಸವು ಶರ್ಟ್‌ನ ರೀತಿಯಲ್ಲಿ ಉದ್ದದ ನಿಲುವಂಗಿ ಯಂತಿದ್ದು ಅದರ ಮೇಲೆ ಬಣ್ಣ ಬಣ್ಣದ ಓಢನಿ ತೊಡುತ್ತಾರೆ. ಓಢನಿಗೆ ಈ ಪ್ರದೇಶದ ಜನರು ಚುಂದರ್‌ ಎಂದು ಕರೆಯು ತ್ತಾರೆ. ಇದನ್ನೂ ಸಹ ಪ್ರಾದೇಶಿಕ ವೈಶಿಷ್ಟ್ಯ ಗಳೊಂದಿಗೆ ವಿಶೇಷ ರೀತಿಯಲ್ಲಿ ವಿನ್ಯಾಸ ಮಾಡಲಾಗಿ ರುತ್ತದೆ. ಚುಂದರ್‌ನ ಒಂದು ಭಾಗ ಸೊಂಟದ ಸುತ್ತು ಸುತ್ತಿದ್ದು, ತದನಂತರ ಹೆಗಲು ಹಾಗೂ ತಲೆಯ ಭಾಗವನ್ನು ಸುತ್ತಿ ಮೇಲ್‌ವಸ್ತ್ರದಂತೆ ಧರಿಸುತ್ತಾರೆ.

ಆಹಿರ್‌ ಎಂಬ ಇನ್ನೊಂದು ಹರಿಯಾಣದ ಮುಖ್ಯ ಪಂಗಡದಲ್ಲಿ ಸ್ತ್ರೀಯರು ಅಂಗಿಯಾ ಲೆಹಂಗಾ ಹಾಗೂ ಚುಂದರ್‌ ಧರಿಸುತ್ತಾರೆ.

“ಅಂಗಿಯಾ’ದ ವಿಶೇಷವೆಂದರೆ ಇದು ಕುಪ್ಪಸದಂತೆ ವಿನ್ಯಾಸಮಾಡಲಾಗಿದ್ದರೂ ಉದ್ದವಾಗಿದ್ದು ಅಂದವಾದ ವಿನ್ಯಾಸ ಹೊಂದಿರುತ್ತದೆ. ಇದರ ಸುತ್ತ ಓಢನಿ ಸುತ್ತಿಕೊಳ್ಳುವುದು ಸಾಮಾನ್ಯ.

ಹರಿಯಾಣದ ಮಹಿಳೆಯರ ಸಾಂಪ್ರದಾಯಿಕ ಉಡುಗೆಗೆ ವಿಶೇಷ ಮೆರುಗು ನೀಡುವುದು ಭಾರತೀಯ ಶೈಲಿಯ ಪಾದರಕ್ಷೆ! ಈ ಸಾಂಪ್ರದಾಯಿಕ ಪಾದರಕ್ಷೆಗೆ “ಜುಟ್ಟಿ’ ಎಂದು ಕರೆಯುತ್ತಾರೆ.

ಹರಿಯಾಣದ ಮಹಿಳೆಯರು ಅಧಿಕವಾಗಿ ಕೃಷಿಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಈ ಬಗೆಯ ಸಾಂಪ್ರದಾಯಿಕ ವಸ್ತ್ರವಿನ್ಯಾಸ ಆರಾಮದಾ ಯಕವಾಗಿರುತ್ತದೆ. ಹರಿಯಾಣದ ಅಗರ್‌ವಾಲ್‌ ಪಂಗಡದ ಮಹಿಳೆಯರು ಸೀರೆಯನ್ನು ಅಧಿಕ ಉಡುತ್ತಾರೆ.

ಹರಿಯಾಣದ ವಧು
ವಧುವಿನ ಸಾಂಪ್ರದಾಯಿಕ ತೊಡುಗೆಯೂ ಇತ್ತೀಚಿನ ದಶಕಗಳಲ್ಲಿ ವೈವಿಧ್ಯತೆಯೊಂದಿಗೆ ಜನಪ್ರಿಯತೆಯನ್ನು ಪಡೆದುಕೊಂಡಿದೆ.

“ಥೇಲ್‌’ ಎಂದು ಕರೆಯಲಾಗುವ ಉದ್ದದ ನಿಲುವಂಗಿ (ಶರ್ಟ್‌ನಂತಿರುವ)ವನ್ನು ಮದುವೆಯ ದಿನ ವಿಶೇಷವಾಗಿ ಅಲಂಕರಿಸಿ ವಧುವಿಗೆ ತೊಡಿಸಲಾಗುತ್ತದೆ. ಘಾಗ್ರಾದಂತಿರುವ ಉಡುಗೆಗೆ “ಘಾಗ್ರಾ’ ಎಂದು ಕರೆಯಲಾಗುತ್ತದೆ. ಥೇಲ್‌ನೊಂದಿಗೆ ಘಾಗ್ರಾವನ್ನು ತೊಟ್ಟ ಅಲಂಕೃತ ವಧುವು ವೈಭಯುತ ಕಸೂತಿ ಹಾಗೂ ಜರಿಯ ವಿನ್ಯಾಸಗಳನ್ನು ಹೊಂದಿರುವ ಓಢನಿಯನ್ನು ತೊಡುತ್ತಾರೆ.

ಅಂತೆಯೇ ಗಾಢ ರಂಗಿನ, ವೈಭವಯುತ ವಿನ್ಯಾಸದ ಲೆಹಂಗಾ ಹಾಗೂ ಅಂಗಿಯಾ ಕೂಡ ಹರಿಯಾಣದ ವಧುವಿನ ಸಾಂಪ್ರದಾಯಿಕ ತೊಡುಗೆಯಾಗಿದೆ. ಕೆಲವು ವರ್ಗಗಳಲ್ಲಿ ಸೀರೆಯೂ ಸಾಂಪ್ರದಾಯಿಕ ತೊಡುಗೆಯಾಗಿದೆ. ಹೀಗೆ ಹರಿಯಾಣದ ಸಾಂಪ್ರದಾಯಿಕ ವಧುವಿನ ಉಡುಗೆ- ತೊಡುಗೆಯೂ ಮಹತ್ವಪೂರ್ಣ ವೈವಿಧ್ಯತೆ ಪಡೆದುಕೊಂಡಿದೆ.

ಈ ಸಾಂಪ್ರದಾಯಿಕ ಉಡುಗೆಗೆ ತನ್ನದೇ ಆದ “ಹರಿಯಾಣೀ’ ಸೊಬಗನ್ನು ನೀಡುವುದು ಸಾಂಪ್ರದಾಯಿಕ ಆಭರಣಗಳ ಶೃಂಗಾರ! ಕತ್ಲಾ ಎಂದು ಕರೆಯುವ ಕುತ್ತಿಗೆಯ ಆಭರಣ, ಬೋರ್ಲಾ ಎನ್ನುವ ವಿಶೇಷ ವಿನ್ಯಾಸದ ಕೂದಲಿನ ಆಭರಣ, “ನಾಥ್‌’ ಎಂಬ ವಿಶೇಷ ಮೂಗಿನ ನತ್ತು, ಹನ್‌ಸಿಲ್‌ ಎಂಬ ಸಾಂಪ್ರದಾಯಿಕ ಬಳೆಗಳು- ಇವು ಹರಿಯಾಣದ ಸಾಂಪ್ರದಾಯಿಕ ಉಡುಗೆಯೊಂದಿಗೆ ವಧುವು ತೊಡುವ ಸಾಂಪ್ರದಾಯಿಕ ಆಭರಣವಾಗಿದೆ.

ಇಂದು ಹರಿಯಾಣದ ಮಹಿಳೆಯರ ಸಾಂಪ್ರದಾಯಿಕ ತೊಡುಗೆ ತನ್ನ ಆಕರ್ಷಣೆಯಿಂದಾಗಿ ಕೇವಲ ಹರಿಯಾಣದ ಪ್ರದೇಶವಷ್ಟೇ ಸೀಮಿತವಾಗದೆ ಭಾರತದ ಎಲ್ಲೆಡೆಯೂ ಪ್ರಪಂಚದ ಹಲವೆಡೆಯೂ ಧರಿಸಲ್ಪಡುವ ತೊಡುಗೆಯಾಗಿದೆ! “ವಿಶ್ವಗ್ರಾಮ’ ಅಥವಾ “ಗ್ಲೋಬಲ್‌ ವಿಲೇಜ್‌’ನ ಪರಿಣಾಮ ಸ್ವರೂಪೀ ಆಧುನಿಕತೆಗೆ ಹರಿಯಾಣದ ಉಡುಗೆ-ತೊಡುಗೆಯ ಸಾಂಪ್ರದಾಯಿಕ ಜನಪ್ರಿಯತೆಯನ್ನು ಸಮೀಕರಿಸಬಹುದಷ್ಟೇ!

ಅನುರಾಧಾ ಕಾಮತ್‌

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.