ರೋಗ ನಿರೋಧಕ ಯೋಗ


Team Udayavani, Dec 5, 2020, 1:10 PM IST

ರೋಗ ನಿರೋಧಕ ಯೋಗ

ಹೆಸರೇ ತಿಳಿಸುವಂತೆ ಈ ಭಂಗಿಯಲ್ಲಿ ದೇಹ ಮಗುವಿನಂತೆ ಕಾಣುತ್ತದೆ. ಎದೆಯಲ್ಲಿ ಕಟ್ಟಿ ಕೊಂಡಿದ್ದ ಕಫ‌ ಕರಗಲು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಆಸನ ಅತ್ಯುತ್ತಮ. ಇದರಿಂದ ಶ್ವಾಸಕೋಶದ ಆರೋಗ್ಯವೂ ವೃದ್ಧಿಯಾಗುತ್ತದೆ. ನೆಲದ ಮೇಲೆ ಹಿಮ್ಮಡಿಗಳ ಮೇಲೆ ನಿಂತು ಎರಡೂ ಮೊಣಕಾಲುಗಳನ್ನು ಪರಸ್ಪರ ತಾಗಿಸಿಕೊಳ್ಳಬೇಕು. ನಿಧಾನವಾಗಿ ಬಾಗುತ್ತಾ ಉಸಿರನ್ನು ಬಿಡಬೇಕು. ಹಣೆಯನ್ನು ನೆಲಕ್ಕೆ ತಾಗಿಸಿ, ಎರಡೂ ಕೈಗಳನ್ನು ಪಕ್ಕಕ್ಕೆ ಚಾಚಿ ಹಸ್ತಗಳು ನೆಲಕ್ಕೆ ಸಮಾನಾಂತರವಾಗಿರುವಂತೆ ಮಾಡಬೇಕು. ಇಲ್ಲಿ ನಿಮ್ಮ ಉಸಿರಾಟವನ್ನು ಆದಷ್ಟೂ ದೀರ್ಘ‌ವಾಗಿಸಿ ಒಂದು ನಿಮಿಷವಾದರೂ ಇರಬೇಕು.

ಈ ಆಸನದಿಂದ ಹೃದಯದ ಬಡಿತ ಹೆಚ್ಚಾಗುತ್ತದೆ. ರಕ್ತ ಪರಿಚಲನೆ ಉತ್ತಮಗೊಳ್ಳುತ್ತದೆ. ಇದರಿಂದ ಪ್ರತೀ ಜೀವಕೋಶಕ್ಕೂ ಉತ್ತಮ ಪ್ರಮಾಣದ ಆಮ್ಲಜನಕ ದೊರಕುತ್ತದೆ ಮತ್ತು ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ. ನೆಲದ ಮೇಲೆ ಬೆನ್ನು ಕೆಳಗಿರುವಂತೆ ಮಲಗಬೇಕು. ಮೊಣಕಾಲುಗಳನ್ನು ಮಡಚಿ ಪಾದಗಳನ್ನು ಹಿಂದಕ್ಕೆ ತರಬೇಕು. ಪಾದಗಳು ಪರಸ್ಪರ ಸಮಾನಾಂತರವಾಗಿರಬೇಕು. ಸೊಂಟವನ್ನು ಮೇಲಕ್ಕೆ ಎತ್ತುತ್ತಾ ಬೆನ್ನನ್ನು ಮೇಲೇಳುವಂತೆ ಮಾಡಬೇಕು. ಇಡಿಯ ದೇಹ ಮೇಲೆ ಹೋದಂತೆ ಕೈಗಳನ್ನು ಮುಂದೆ ಚಾಚಿ ಪಾದಗಳನ್ನು ಹಿಡಿದುಕೊಳ್ಳಬೇಕು. ಸ್ವಲ್ಪ ಕಾಲ ಇದೇ ಭಂಗಿಯಲ್ಲಿದ್ದು ಪೂರ್ಣ ಉಸಿರು ಎಳೆದುಕೊಂಡು ಉಸಿರು ಕಟ್ಟಿ ಬಳಿಕ ನಿಧಾನವಾಗಿ ಉಸಿರು ಬಿಡುತ್ತಾ ಮೊದಲ ಸ್ಥಾನಕ್ಕೆ ಬನ್ನಿ.

ಬೆನ್ನು ಹಿಮ್ಮುಖವಾಗಿ ಬಗ್ಗುವ ಮೂಲಕ ಬೆನ್ನುಮೂಳೆಗೆ ಹೆಚ್ಚಿನ ಸೆಳೆತ ನೀಡುತ್ತದೆ. ಈ ಸೆಳೆತ ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ನಮ್ಮ ರೋಗ ನಿರೋಧಕ ಶಕ್ತಿಯಲ್ಲಿ ಈ ಬಿಳಿ ರಕ್ತ ಕಣಗಳು ಪ್ರಮುಖ ಪಾತ್ರ ವಹಿಸುತ್ತವೆ. ನೆಲದ ಮೇಲೆ ಬೆನ್ನು ಕೆಳಗಿರುವಂತೆ ಮಲಗಿ ಎರಡೂ ಕೈಗಳನ್ನು ಪಕ್ಕಕ್ಕೆ ಚಾಚಬೇಕು. ನಿಧಾನವಾಗಿ ಎರಡೂ ಕಾಲುಗಳನ್ನು ಮೇಲಕ್ಕೆತ್ತುತ್ತಾ ಪಾದಗಳು ನೆಲಕ್ಕೆ ಲಂಬವಾಗಿರುವಂತೆ ನೋಡಿಕೊಳ್ಳಿ. ಬಳಿಕ ಎರಡೂ ಕಾಲುಗಳನ್ನೂ ಹಿಂದಕ್ಕೆ ತಂದು ಪಾದಗಳ ಹೆಬ್ಬೆರಳುಗಳು ಹಣೆಯ ಮೇಲೆ ಬರುವಷ್ಟು ಮುಂದಕ್ಕೆ ತನ್ನಿ. ಕಾಲುಗಳನ್ನು ನೆಲಕ್ಕೆ ತಾಗಿಸಬಾರದು. ಅನಂತರ ಬೆನ್ನ ಹಿಂದೆ ಎರಡೂ ಕೈಗಳ ಬೆರಳುಗಳನ್ನು ಪರಸ್ಪರ ಜೋಡಿಸಬೇಕು. ಅದಾದ ಬಳಿಕ ಕಾಲುಗಳನ್ನು ಇನ್ನೂ ಹಿಂದಕ್ಕೆ ತಂದು ತಲೆಯಿಂದ ಆದಷ್ಟು ದೂರದಲ್ಲಿ ನೆಲಕ್ಕೆ ತಾಗಿಸಿ. ಕೈಗಳು ನೆಟ್ಟಗಿದ್ದು ಕಾಲುಗಳನ್ನು ಎಷ್ಟು ಸಾಧ್ಯವೋ ಅಷ್ಟೂ ದೂರದಲ್ಲಿ ಇರುವಂತೆ ನೋಡಿಕೊಳ್ಳಬೇಕು.

ಪ್ರಾಣಾಯಾಮ

ಈ ಪ್ರಾಣಾಯಾಮವನ್ನು ಅನುಲೋಮ- ವಿಲೋಮ ಪ್ರಾಣಾಯಾಮ ಎಂದೂ ಕರೆಯ ಲಾಗುತ್ತದೆ. ಇದನ್ನು ಮಾಡಲು ಮೊದಲು ಸುಖಾಸನದಲ್ಲಿ ಕುಳಿತುಕೊಳ್ಳಬೇಕು. ಆನಂತರ ಕಣ್ಣುಗಳನ್ನು ಮುಚ್ಚಿ, ನಿಧಾನಕ್ಕೆ ಉಸಿರು ಬಿಡಬೇಕು. ಎಡ ಕೈಯನ್ನು ಜ್ಞಾನ ಮುದ್ರೆಯಲ್ಲಿ ಹಿಡಿದು, ಬಲಗೈಯ ತೋರು ಬೆರಳು ಮತ್ತು ಮಧ್ಯದ ಬೆರಳನ್ನು ಮಡಚಿದ ಬಳಿಕ ಬಲ ಮೂಗನ್ನು ಮುಚ್ಚಿ ಎಡ ಮೂಗಿನಿಂದ ಉಸಿರು ಎಳೆದು ಬಲಭಾಗದ ಮೂಗಿನಲ್ಲಿ ನಿಧಾನಕ್ಕೆ ಬಿಡಬೇಕು.

ಬಳಿಕ ಬಲ ಭಾಗದ ಮೂಗಿನಿಂದ ಉಸಿರು ತೆಗೆದು ಎಡ ಭಾಗದ ಮೂಗಿನಲ್ಲಿ ಬಿಡಿ. ಈ ರೀತಿ 9 ಬಾರಿ ಮಾಡಿ. 9ನೇ ಸುತ್ತಿನಲ್ಲಿ ಎಡ ಭಾಗದಿಂದ ಉಸಿರನ್ನು ನಿಧಾನಕ್ಕೆ ಬಿಟ್ಟು ಹಾಗೇ ಧ್ಯಾನ ಸ್ಥಿತಿಯಲ್ಲಿ ಕುಳಿತುಕೊಳ್ಳಿ, ಕಣ್ಣಿನ ರೆಪ್ಪೆಗಳನ್ನು ಕೂಡಲೇ ತೆರೆಯಬೇಡಿ. ಕೈಗಳನ್ನು ಒಂದಕ್ಕೊಂದು ಉಜ್ಜುವಾಗ ಏರ್ಪಡುವ ಬಿಸಿಯನ್ನು ಕಣ್ಣಿನ ಮೇಲೆ ಇಡಬೇಕು. ಇದರಿಂದ ಆಮ್ಲಜನಕ ಹೆಚ್ಚಾಗಿ ದೇಹವನ್ನು ಸೇರುವುದರಿಂದ ದೇಹದಲ್ಲಿನ ಕಶ್ಮಲಗಳು ಹೊರ ಹೋಗುತ್ತವೆ.

ಪ್ರಾಣಾಯಾಮಕ್ಕೆ ಪೂರಕ, ಕುಂಭಕ ಮತ್ತು ರೇಚಕಗಳೆಂದು ಮೂರು ಕ್ರಿಯೆಗಳಿವೆ. ವಾಯುವನ್ನು ಮೂಗಿನ ಮೂಲಕ ಒಳಗೆ ತೆಗೆದು ಕೊಳ್ಳುವುದಕ್ಕೆ ಪೂರಕವೆಂದೂ ಹಾಗೆ ತೆಗೆದುಕೊಂಡ ವಾಯುವನ್ನು ಒಳಗೇ ತಡೆಹಿಡಿಯುವುದಕ್ಕೆ ಕುಂಭಕವೆಂದೂ ಆನಂತರ ಅದನ್ನು ಹೊರಗೆ ಬಿಡುವುದಕ್ಕೆ ರೇಚಕವೆಂದೂ ಕರೆಯಲಾಗುತ್ತದೆ. ಉಚ್ಛಾಸ ಮಾಡಿದ ವಾಯುವನ್ನು ಶ್ವಾಸಕೋಶಗಳೊಳಗೆ ತಡೆದು ನಿಲ್ಲಿಸುವುದು ಒಂದು ಬಗೆಯ ಕುಂಭಕ.

ಕುಂಭಕದಲ್ಲಿ ಸೂರ್ಯಭೇದನ, ಉಜ್ಜಾಯೀ, ಸೀತ್ಕಾರೀ, ಸೀತಲೀ, ಭಸ್ತ್ರಿಕಾ, ಭ್ರಾಮರೀ, ಮೂರ್ಛಾ ಮತ್ತು ಪ್ಲಾವಿನೀ ಎಂಬುದಾಗಿ 8 ಬಗೆಗಳಿವೆ. ಈ ಮೂರು ಕ್ರಿಯೆಗಳೂ ಒಟ್ಟಿಗೆ ಸೇರಿ ಒಂದು ಪ್ರಾಣಾ ಯಾಮವಾಗುತ್ತದೆ. ಉದಾಹರಣೆಗೆ 4 ಸೆಕೆಂಡುಗಳ ಕಾಲ ಶ್ವಾಸವನ್ನು ಒಳಗೆ ತೆಗೆದುಕೊಂಡು ಹದಿನಾರು ಸೆಕೆಂಡುಗಳ ಕಾಲ ಕುಂಭಕ ಮಾಡಿ ಆಮೇಲೆ ಎಂಟು ಸೆಕೆಂಡುಗಳ ಕಾಲ ನಿಧಾನವಾಗಿ ರೇಚಕ ಮಾಡಿದರೆ ಅಲ್ಲಿಗೆ ಒಂದು ಪ್ರಾಣಾಯಾಮ ಮಾಡಿದಂತಾ ಯಿತು. ಇದೇ ಅತಿ ಕಡಿಮೆ ಕಾಲ ತೆಗೆದುಕೊಳ್ಳುವುದು ಕನಿಷ್ಠ ಪ್ರಾಣಾಯಾಮ. ಈ ಕಾಲವನ್ನು ಎಂಟು, ಮೂವತ್ತೆರಡು ಮತ್ತು ಹದಿನಾರು ಸೆಕೆಂಡುಗಳಿಗೆ ಪರಿಮಿತಗೊಳಿಸಿದರೆ ಉತ್ತಮ ಪ್ರಾಣಾಯಾಮವಾಗುವುದು.

– ಗೋಪಾಲಕೃಷ್ಣ ದೇಲಂಪಾಡಿ, ಯೋಗ ಗುರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.