ಮನೆಮನದೊಳಗಿನ ಸುಂದರ ಜಗತ್ತಿನ ಅರಿವಿರಲಿ

ಕಾಡುಗಳಲ್ಲಿರುವ ಹಣ್ಣುಗಳನ್ನು ಅಪರೂಪದ ವಸ್ತುವಿನಂತೆ ನೋಡಿದರೇ ಆಹಾ, ಎಂತಹ ಸುಂದರ ಅನುಭೂತಿ.

Team Udayavani, Jul 21, 2021, 3:32 PM IST

ಮನೆಮನದೊಳಗಿನ ಸುಂದರ ಜಗತ್ತಿನ ಅರಿವಿರಲಿ

ಮನಸು ಕಿಟಕಿಯಾದರೆ ತಲೆ ಬೆಳಕಂತೆ, ಹೃದಯ ಮಾತಿಗಿಳಿದರೆ ಕಿವಿ ಕೇಳುಗನಂತೆ… ಈಗ ಯಾಕೆ ಈ ಮಾತು ಅಂತಿದ್ದೀರಾ ? ಕೊರೊನಾ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ನಮಗೂ ಈಗ ವರ್ಕ್‌ ಫ್ರಮ್‌ ಹೋಮ್‌ ಮಾಡಿ ಅಭ್ಯಾಸ ಆಗಿದೆ. ಎಷ್ಟೋ ಜನ ಮನೆಯನ್ನೇ ಆಫೀಸು ಮಾಡಿಕೊಂಡಿದ್ದಾರೆ. ಮುಂದೆ ಮತ್ತೆ ಮಾಮೂಲಿಯ ಜಗತ್ತಿಗೆ ಹೋಗಲೇಬೇಕು.

ಆದರೆ ಯೋಚಿಸಿ, ಮನೆಯಲ್ಲಿ ಇದ್ದಾಗ ನಮ್ಮ ಮನೆಯ ಹಿರಿಯರು, ಕೆಲಸದವರು, ನೆರೆಹೊರೆಯವರನ್ನು ಮಾತನಾಡಿಸಿದಾಗ ನಾವು ಹೇಳುವ ಕೆಲವು ಸಂಗತಿಗಳನ್ನು ಕೇಳಿ ಹೌದಾ ! ಎಂದು ಆಶ್ಚರ್ಯದಿಂದ ಕೇಳಿದಾಗ, ಅಲ್ಲೇ ಇರುವ ನಮ್ಮವರು ಹೆಮ್ಮೆಯಿಂದ ನಮ್ಮತ್ತ ಒಮ್ಮೆ ನೋಡಲಿಲ್ಲವೇ ? ಮೊನ್ನೆ ಹೀಗೆ ವಾಟ್ಸಪ್‌ನಲ್ಲಿ ಒಂದು ಜೋಕ್‌ ಹರಿದಾಡುತ್ತಿತ್ತು. ವರ್ಕ್‌ ಫ್ರಮ್‌ ಹೋಮ್‌ ಬಿಟ್ಟು ಹೋಮ್‌ ವರ್ಕ್‌ ಕೊಟ್ಟರೆ ಒಳ್ಳೆಯದಿತ್ತು ಅಂತ.

ನಿಜವೇ ಅಲ್ವಾ ? ಗೊಂದಲಗಳ ಗೂಡಾದ ಮೆದುಳಿಗೆ ಒಂದು ಕಪ್‌ ಚಹಾ ತಂದು ಕೊಡುವ ಅಮ್ಮನ ಕೈ, ಮಕ್ಕಳು ಅವರವರೇ ಮಾತಾನಾಡಿಕೊಳ್ಳುವ ಮಾತುಗಳು ನಮ್ಮನ್ನು ಒಂದು ಕ್ಷಣದ ಚಿಂತೆಗೆ ದೂಡಿರುವುದು ಸುಳ್ಳಲ್ಲ. ಬದುಕು ಹಾಗೆ…ಎಣಿಸಿದಂತೆ ಹೋಗದಿದ್ದರೇ ನಾವೇ ಅಲ್ಲಿಗೆ ಹೋಗಬೇಕಾಗುತ್ತದೆ. ಈಗ ನಮಗೆ ಬಂದ ಪರಿಸ್ಥಿತಿ ಇದೆ. ಒಂದು ಹಂತದ ಮೇಲೇರಿ ನಿಂತು ಕೆಳಗೆ ನೋಡಿದಾಗ ಜೀವನ ಇಲ್ಲಿಯೇ ಚಂದವೆಂದು ಕಾಣುತ್ತದೆ. ಅದೇ ಇನ್ನೊಂದು ಮೆಟ್ಟಿಲೇರಿ ನೋಡಿದಾಗ ಮೊದಲಿನ ಸ್ಟೆಪ್‌ಗಿಂತ ಕೊನೆಯದೇ ಬೆಸ್ಟ್ ಅನಿಸುತ್ತದೆ.

ಅದೇ ವ್ಯತಿರಿಕ್ತ ಪರಿಣಾಮ ಬೀರಿದರೇ ಈಗನಿಸುವುದಿಲ್ಲವೇ ಮೊದಲಿನ ಕರೊನಾ ಲಾಕ್‌ಡೌನ್‌ ಒಳ್ಳೆಯದಿತ್ತು. ಈಗಿನಂತೆ ಅನಿಶ್ಚಿತತೆ ಇರಲಿಲ್ಲ. ಸ್ವಭಾವಜನ್ಯ ಮೆಂಟಾಲಿಟಿ ಇದು. ನೆಗೆಟಿವ್‌ ತೆಗೆದು ಒಂದಿಷ್ಟು ಪಾಸಿಟಿವ್‌ ಅಂಶಗಳಿಂದ ಈ ಕೊರೊನಾ ತೆಗೆದುಕೊಂಡು ನೋಡಿದರೆ ಆರ್ಥಿಕ ಹೊಡೆತ ಬಿಟ್ಟರೆ ಹಲವಾರು ವರ್ಷಗಳಿಂದ ಕಡಿದು ಹೋದ ಸಂಬಂಧಗಳು, ಸ್ನೇಹಿತರು, ಹೊಸ ಸಂಬಂಧ ಸಿಕ್ಕಲಿಲ್ಲವೇ? ಭಾರತೀಯ ಸಂಸ್ಕೃತಿ ಅದನ್ನೇ ಹೇಳುತ್ತಿದೆ, ಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ ಮಾತುಗಳು ಇವೇ.

ಯುದ್ಧ ನಡೆಯುತ್ತಿದ್ದಾಗ, ಅರ್ಜುನ ತನ್ನವರನ್ನೇ ಕೊಲ್ಲಬೇಕಲ್ಲವೇ ಎಂಬ ಭಾವನೆಯಿಂದ ತನ್ನ ತೊಳಲಾಟ ಹೇಳಿದಾಗ ಕೃಷ್ಣ ಅರ್ಜುನ ನಿನ್ನ ತೊಳಲಾಟ ಸರಿ, ಆದರೆ ಒಳ್ಳೆಯದು ಜಗತ್ತಿಗೆ ಆಗುತ್ತದೆ ಅಂದಾಗ ನಿನ್ನ ಕರ್ತವ್ಯ ನೀನು ಮಾಡಲೇಬೇಕು. ಇದನ್ನು ನಾವು ಕೊರೊನಾದಿಂದ ಮಾನಸಿಕ ಒತ್ತಡದಿಂದ ಜರ್ಜರಿತವಾದವರಿಗೆ ಹೀಗೆ ಹೇಳಿದರೇ…ಇಷ್ಟು ವರ್ಷ ಹೇಗೋ ಹಣ, ಹುದ್ದೆ, ಆರ್ಥಿಕ ಸಫ‌ಲತೆ ಅಂತೆಲ್ಲ ಹೋಗಿ ಆಗಿದೆ. ಈಗ ನಮಗೊಂದು ಅವಕಾಶ ದೇವರು ಒದಗಿಸಿದ್ದಾನೆ.

ಮನೆಯವರೊಂದಿಗೆ ಕುಳಿತುಕೋ, ಮಾತಾನಾಡು, ನಗಿಸು, ನಗೆಯಾಡು, ಬಾಲ್ಯದ ತುಣುಕುಗಳನ್ನು, ಹಳೆ ಮನೆಯ ವಿನ್ಯಾಸವನ್ನು, ನಮ್ಮೂರಿನ ರಸ್ತೆಗಳನ್ನು, ಕಾಡುಗಳಲ್ಲಿರುವ ಹಣ್ಣುಗಳನ್ನು ಅಪರೂಪದ ವಸ್ತುವಿನಂತೆ ನೋಡಿದರೇ ಆಹಾ, ಎಂತಹ ಸುಂದರ ಅನುಭೂತಿ.

ಯಾರೋ ಒಬ್ಬ ಹೇಳಿದ್ದ ಅಂತೆ ಇದ್ದಾಗ ಏನೂ ಪ್ರಾಮುಖ್ಯತೆ ಪಡೆಯದ ವಸ್ತು ಇಲ್ಲದಿರುವಾಗ ಕಾಡುತ್ತದೆ. ನಿಜವೇ ಅಲ್ಲವೇ, ಈಗಲೂ ಕಾಲ ಮಿಂಚಿಲ್ಲ. ಮನೆಯಲ್ಲಿ ಕೆಲಸ ಮಾಡಿದರೂ ನಿಂತಲ್ಲಿ, ಕೂತಲ್ಲಿ, ಕೆಲಸವೇ ಕಾಡಿದರೂ ಮೊದಲು ನೀವು ಮಾಡುವುದು ಮನೆಯ ಹಿರಿಯರನ್ನು,ಮುಳ್ಳು ತುಂಬಿದ ರಸ್ತೆಗಳಲ್ಲಿ ಹೋಗಿ ಬರುವ ಅವರ ಕಾಲುಗಳನ್ನು. ನಿರ್ಜೀವ ರಸ್ತೆಗಳು ಅವರ ಪಾಲಿಗೆ ಹೇಗೆ ಸಜೀವ ವಸ್ತು ಆಯ್ತು ಎಂಬುದು ಅರ್ಥ ಆದಾಗ, ನಮಗೆ ಕುಟುಂಬದಿಂದ
ಜೀವನ ಮಾನಸಿಕ ಸದೃಢತೆ ಕೊಡುತ್ತದೆ ಎಂಬ ಅಂಶ ತಿಳಿಯುತ್ತದೆ.

ಹಲವರಲ್ಲಿ ಕುಟುಂಬ ಅಥವಾ ಪರಿವಾರ ಚಿಕ್ಕದಿದ್ದರೇ ಏನು ಮಾಡುವುದು? ಆಲೋಚನೆ ಬಂದರೇ ! ಸಿಂಪಲ್‌ ಅಕ್ಕಪಕ್ಕದವರನ್ನು, ಸಂತೆಯಲ್ಲಿ ಸಿಕ್ಕಿದವರನ್ನು ಮಾತಾನಾಡಿಸಿ. ಒಬ್ಬ ರಸ್ತೆ ಗುಡಿಸುವವನನ್ನು ಮಾತಾಡಿಸಿದರೇ ಒಂದು ಕಥೆ ತಿಳಿಯುತ್ತದೆ. ಇದರಿಂದ ನಮ್ಮ ಮಾನಸಿಕ ಒತ್ತಡ ಕಡಿಮೆ ಆಗಿ, ಕುಟುಂಬ ಸಣ್ಣದಿದ್ದರೂ ತೃಪ್ತವಾದ ಭಾವನೆ ನಮ್ಮೊಳಗೆ ಮೂಡುತ್ತದೆ.ಒಬ್ಬರ ಆಗಮನ ಇನ್ನೊಬ್ಬರ ನಿರ್ಗಮನಕ್ಕೆ ಕಾರಣವಾಗಿರುತ್ತದೆ. ಅರಿತರೇ ಜೀವನ ಸುಲಭ,
ಸರಳವಾಗಿರುತ್ತದೆ ಮಾತ್ರವಲ್ಲ ಸಂಭ್ರಮವನ್ನು ಕೊಡುತ್ತದೆ.
– ಶಾರದಾ ಭಟ್‌

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.