ಹೋಳಿ ಶುಭಾಶಯದ ಜತೆ ಗೋಮುಖಾಸನದ ಪ್ರಯೋಜನ ತಿಳಿಸಿದ ನಟಿ ಮಲೈಕಾ


Team Udayavani, Mar 29, 2021, 5:00 PM IST

Actress

ಆರೋಗ್ಯಯುತ ಜೀವನಕ್ಕೆ ಯೋಗಾಸನ ಬಹುಮುಖ್ಯ. ಕೆಲವು ದೈಹಿಕ ತೊಂದರೆಗಳಿರಬಹುದು,ಇಲ್ಲವೆ ಮಾನಸಿಕ ಒತ್ತಡಗಳಿರಬಹುದು.ಇವುಗಳನ್ನು ನಿವಾರಿಸಿಕೊಳ್ಳಲು ಯೋಗಾಸನ ಒಳ್ಳೆಯ ಮಾರ್ಗ. ಪ್ರತಿ ದಿನ ಮುಂಜಾನೆ ವಿವಿಧ ಆಸನಗಳನ್ನು ಮಾಡುವುದರ ಮೂಲಕ ಸದೃಢ ಆರೋಗ್ಯ ಹಾಗೂ ಸ್ವಾಸ್ಥ್ಯ ಮನಸ್ಸು ನಮ್ಮದಾಗಿಸಿಕೊಳ್ಳಬಹುದು.

ಬಾಲಿವುಡ್ ನಟಿ ಮಲೈಕಾ ಅರೋರಾ ಯೋಗಾಸನದ ಪ್ರಾಮುಖ್ಯತೆ ಕುರಿತು ಹೇಳಿದ್ದಾರೆ.ಸೋಮವಾರ ತನ್ನ ಅಭಿಮಾನಿಗಳಿಗೆ ಇನ್‍ಸ್ಟಾಗ್ರಾಂ ಪೋಸ್ಟ್ ಮೂಲಕ ಗೋಮುಖಾಸನ ಮಾಡುವ ವಿಧಾನದ ಬಗ್ಗೆ ಹೇಳಿಕೊಂಡಿದ್ದಾರೆ. ಸ್ವತಃ ತಾವೇ ಗೋಮುಖಾಸನ ಮಾಡಿ, ಅವುಗಳ ಫೋಟೊ ಹಂಚಿಕೊಂಡಿದ್ದಾರೆ.

ಅಭ್ಯಾಸ ಮಾಡುವುದು ಹೇಗೆ?

ಮೊದಲಿಗೆ ಕಾಲುಗಳನ್ನು ನೇರವಾಗಿ ಚಾಚಿ ಮ್ಯಾಟ್ ಮೇಲೆ ಕುಳಿತುಕೊಳ್ಳಿ.

ನಿಮ್ಮ  ಬಲಗಾಲಿನ ಕೆಳಗೆ ಎಡಗಾಲನ್ನು ಮಡಚಿ.

ಎಡ ಪಾದವನ್ನು ಬಲ ಸೊಂಟದ ಹತ್ತಿರ ಇರಿಸಿ.

ಬಲ ಮೊಣಕಾಲನ್ನು ಮಡಚಿ ಎಡ ಮೊಣಕಾಲಿನ ಮೇಲೆ ಇರಸಿ. ಒಂದರ ಮೇಲೊಂದು ಮೊಣಕಾಲು ಇರುವಂತೆ ನೋಡಿಕೊಳ್ಳಿ.

ನಿಮ್ಮ ಬಲಗಾಲಿನ ಪಾದವನ್ನು ಎಡಗಾಲಿನ ಸೊಂಟದ ಬಳಿ ಇರಲಿ

ಈಗ, ನಿಮ್ಮ  ಬಲ ಮೊಣಕೈನ್ನು ಬೆನ್ನಿನ ಹಿಂದೆ ತೆಗೆದುಕೊಂಡು ನಿಮ್ಮ ಮೊಣಕೈಯನ್ನು ಬಗ್ಗಿಸಿ. ನಿಮ್ಮ ಕೈಯನ್ನು ಭುಜಗಳ ಕಡೆಗೆ ತಲುಪಲು ಪ್ರಯತ್ನಿಸಿ.

ನಿಮ್ಮ ಎಡಗೈಯನ್ನು ತಲೆಯ ಮೇಲಿಂದ ತನ್ನಿ. ಮೊಣಕೈಯನ್ನು ಬಗ್ಗಿಸಿ ಮತ್ತು ಎರಡೂ ಕೈಗಳ ಬೆರಳುಗಳನ್ನು ಬೆಸೆಯಲು ಪ್ರಯತ್ನಿಸಿ.

ಈ ಭಂಗಿಯನ್ನು ಕನಿಷ್ಠ 30 ಸೆಕೆಂಡುಗಳ ಕಾಲ ಹಿಡಿದುಕೊಳ್ಳಿ. ಕೆಲವು ಸೆಕೆಂಡುಗಳ ಕಾಲ ವಿಶ್ರಾಂತಿ ಪಡೆದು ಇದನ್ನೇ ಇನ್ನೊಂದು ಬದಿಗೆ ನಿರ್ವಹಿಸಿ.

ಗೋಮುಖಾಸನದ ಪ್ರಯೋಜನಗಳು :

ಎದೆಯು ವಿಶಾಲವಾಗಿ ಹಿಗ್ಗಲು ಸಹಕಾರಿ.

ಬೆನ್ನನ್ನು ನೇರವಾಗಿ ನಿಲ್ಲಿಸುತ್ತದೆ. ಬೆನ್ನಿನ ಸೆಳೆತ ನಿವಾರಿಸುತ್ತದೆ.

ಹೆಗಲಿನ ಕೀಲುಗಳ ಸರಳವಾದ ಚಲನೆಗೆ ನೆರವಾಗುವುದು.

ಕಾಲುಗಳಲ್ಲಿನ ಪೆಡಸುತನವನ್ನು ತೊಡೆದು, ಮಾಂಸಖಂಡಗಳು ಸ್ಥಿತಿಸ್ಥಾಪಕತ್ವ ಪಡೆಯುತ್ತವೆ.

ಗೋಮುಖಾಸನ ಯೋಗದ ವಿಧಾನ ಹಾಗೂ ಅದರಿಂದಾಗು ಪ್ರಯೋಜನಗಳ ಬಗ್ಗೆ ತಿಳಿಸಿರುವ ನಟಿ ಮಲೈಕಾ, ತನ್ನ ಅಭಿಮಾನಿಗಳಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಹಾಗೂ ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈ ಬಣ್ಣದ ಹಬ್ಬ ಎಲ್ಲರ ಬದುಕಿನಲ್ಲಿ ಸಂತಸ ಮತ್ತು ಪ್ರೀತಿ ತರಲಿ. ನಾವು ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದ್ದೇವೆ. ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡು,ಖುಷಿಯಿಂದ ಹಾಗೂ ಎಚ್ಚರಿಕೆಯಿಂದ ಹೋಳಿ ಹುಣ್ಣಿಮೆ ಆಚರಿಸಿ ಎಂದಿದ್ದಾರೆ.

ಟಾಪ್ ನ್ಯೂಸ್

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.