ಸದ್ಯಕ್ಕಿಲ್ಲ ಬೂಸ್ಟರ್ ಡೋಸ್: ಕೇಂದ್ರ ಸರ್ಕಾರ
ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದಿರಬೇಕು.
Team Udayavani, Sep 17, 2021, 2:50 PM IST
ನವದೆಹಲಿ: ಕೊರೊನಾ ಲಸಿಕೆಯ ಮೂರನೇ ಡೋಸ್ ನೀಡುವ ಬಗ್ಗೆ ಕೇಂದ್ರ, ವೈಜ್ಞಾನಿಕ ಮತ್ತು ಆರೋಗ್ಯದ ದೃಷ್ಟಿಯಿಂದ ಯಾವುದೇ ಚಿಂತನೆ ನಡೆಸಿಲ್ಲ. 2 ಡೋಸ್ ಲಸಿಕೆ ನೀಡುವುದೇ ಆದ್ಯತೆಯಾಗಿರುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನವದೆಹಲಿಯಲ್ಲಿ ಮಾತನಾಡಿದ ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್, “ಲಸಿ ಕೆಯ ಎರಡೂ ಡೋಸ್ ಪಡೆಯುವುದು ಅಗತ್ಯ. ಅದರಲ್ಲಿ ಬದಲಾವಣೆ ಇಲ್ಲ. 3ನೇ ಡೋಸ್ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ’ ಎಂದಿದ್ದಾರೆ. ಹಬ್ಬಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದಿರಬೇಕು.ಅಕ್ಟೋಬರ್ ಮತ್ತು ನವೆಂಬರ್ ನಿರ್ಣಾಯಕವಾಗಲಿವೆ. ಲಸಿಕೆ ನೀಡುವಿಕೆ ಹೆಚ್ಚಾಗಬೇಕು, ಮುನ್ನೆಚ್ಚರಿಕಾ ಕ್ರಮಗಳ ಪಾಲನೆಯಾಗಬೇಕು ಎಂದು ಎಚ್ಚರಿಸಿದ್ದಾರೆ.
ಶೇ. 70 ಜನರಲಿ ರೋಗನಿರೋಧಕ ಶಕ್ತಿ
ಗಣೇಶೋತ್ಸವ ಮತ್ತು ಸಂಭವನೀಯ ಕೊರೊನಾ ಮೂರನೇ ಅಲೆ ಹಿನ್ನೆಲೆ ಸರಕಾರ ಮತ್ತು ಮನಪಾ ಆಡಳಿತ ಆತಂಕದಲ್ಲಿರುವಾಗ ಇದೀಗ ಬಂದಿರುವ ಸಮೀಕ್ಷೆ ಯೊಂದು ನಿಟ್ಟುಸಿರು ಬಿಡುವಂತಾ ಗಿದೆ. ಮುಂಬಯಿ ಯಲ್ಲಿ ಶೇ.70ರಿಂದ 80ರಷ್ಟು ನಾಗರಿಕರಲ್ಲಿ ರೋಗನಿರೋಧಕ ಶಕ್ತಿ ಅಭಿವೃದ್ಧಿಯಾಗಿದೆ ಎಂಬ ಅಂಕಿ ಅಂಶಗಳು ಸೀರೋ ಸಮೀಕ್ಷೆಯಿಂದ ತಿಳಿದು ಬಂದಿವೆ.
ಮುಂಬಯಿ ಮುನ್ಸಿಪಲ್ ಕಾರ್ಪೊರೇಶನ್ (ಬಿಎಂಸಿ) ವತಿಯಿಂದ ನಗರದಲ್ಲಿ ಐದನೇ ಸೀರೋ ಸಮೀಕ್ಷೆಯನ್ನು ನಡೆಸಿದೆ. 24 ವಾರ್ಡ್ ಗಳಿಂದ 8,000 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಲಸಿಕೆ ಪಡೆದವರು ಮತ್ತು ಲಸಿಕೆ ಪಡೆಯದ ನಾಗರಿಕರನ್ನು ಒಳಗೊಂಡಿದೆ. ಚಿಕ್ಕ ಮಕ್ಕಳನ್ನು ಈ ಸಮೀಕ್ಷೆಯಲ್ಲಿ ಸೇರಿಸಲಾಗಿಲ್ಲ. ಸಮೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿಗಳ ಪೈಕಿ ಶೇ. 70ರಿಂದ 80ರಷ್ಟು ನಾಗರಿಕರು ರೋಗನಿರೋಧಕ ಶಕ್ತಿ ಹೊಂದಿದ್ದಾರೆ ಎಂದು ಕಂಡುಬಂದಿದೆ. ಈ ವಿವರವಾದ ವರದಿಯನು ಮುಂಬಯಿ ಮುನ್ಸಿಪಲ್ ಕಾರ್ಪೊರೇಷನ್ ಸದ್ಯದಲ್ಲೇ ಹೊರಡಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು
Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್ ಮೊರೆಹೋಗಿ
World Kidney Day: ಹಿಮೋಡಯಾಲಿಸಿಸ್: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?
Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ