ದೀವಿ ಹಲಸು ಆದಾಯಕ್ಕೂ ಲೇಸು


Team Udayavani, Sep 20, 2020, 5:30 AM IST

breadfruit

ದೀವಿ ಹಲಸು. ಎಲ್ಲ ಉಷ್ಣ ವಲಯ ಪ್ರದೇಶಗಳಲ್ಲಿ ಬೆಳೆಯುವ ಬೆಳೆಯಿದು. ಮಲಯ ದ್ವೀಪ ಸಮೂಹಗಳ ಮೂಲ ಆಗಿದ್ದು, ಭಾರತದ ನಾನಾ ಭಾಗದಲ್ಲಿ ಇದನ್ನು ಕಾಣಬಹುದು. ವಿವಿಧ ಖಾದ್ಯ ತಯಾರಿಕೆಯಲ್ಲಿ ಬಳಸಲ್ಪಡುವ ದಿವಿ ಹಲಸಿಗೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆ ಇದೆ.

ಕರಾವಳಿ ಪ್ರಾಂತ್ಯದ ಮನೆಗಳ ಹಿತ್ತಿಲು ಅಥವಾ ತೋಟಗಳಲ್ಲಿ ಇದನ್ನು ನೋಡಬಹುದು. ತುಳು ಭಾಷೆಯಲ್ಲಿ ಜೀಗುಜ್ಜೆ ಅಥವಾ ದೀಗುಜ್ಜೆ ಎಂದು ಸಂಬೋಧಿಸುತ್ತಾರೆ. ದಕ್ಷಿಣ ಕನ್ನಡ, ಕಾರಾವರ, ಉತ್ತರ ಕರ್ನಾಟಕ, ಧಾರವಾಡಗಳಲ್ಲಿ ಇದು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತದೆ. ದೀಗುಜ್ಜೆಯಲ್ಲಿ ತೇವಾಂಶ, ಸಸಾರಾಜನಕ, ಮೇದಸ್ಸು, ಶರ್ಕರ, ನಾರು, ಖನಿಜ ಅಂಶಗಳಿವೆ. ಪೂರ್ಣವಾಗಿ ಬಲಿತಕಾಯಿ ಹಾಗೂ ಬೀಜಗಳನ್ನು ಬಳಸುತ್ತಾರೆ.

ಕಾಯಿಯಲ್ಲಿ ತಿರುಳಿನಲ್ಲಿ ಶೇ. 70 ರಷ್ಟು ತಿನ್ನಲು ಯೋಗ್ಯವಿರುತ್ತದೆ. ಬೇಯಿಸಿದ ಸಂದರ್ಭದಲ್ಲಿ ಸಾಮಾನ್ಯವಾಗಿ ಅಲೂಗಡ್ಡೆ ತರಹ ಇರುತ್ತದೆ. ಸಾರು, ಪಲ್ಯ, ಹುಳಿ ಮುಂತಾದ ತಯಾರಿಕೆಗೆ ಬಳಸಲಾಗುತ್ತದೆ. ದಿವಿ ಹಲಸು ಗಿಡದ ಬೆಳವಣಿಗೆಗೆ ನೀರು ಸುಲಭವಾಗಿ ಬಸಿದು ಹೋಗುವಂತಹ ಆಳವಾದ ಗೋಡು ಮಣ್ಣು ಉತ್ತಮ. ಇಲ್ಲಿ ಫಲವತ್ತತೆ ಅಂಶ ಅಧಿಕವಾಗಿದ್ದರೆ ಫಸಲು ಕೂಡ ಅಧಿಕ ದೊರೆಯುತ್ತದೆ.

ಬೆಳೆಯುವ ಬಗೆ
ಉಷ್ಣವಲಯದ ಬೆಳೆ ಆಗಿರುವುದರಿಂದ ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದ ತನಕವೂ ಸಾಗುವಳಿ ಮಾಡಲು ಸಾಧ್ಯವಿದೆ. ಬೆಚ್ಚಗಿನ ಹಾಗೂ ಕೆಳಮಟ್ಟದ ಪ್ರದೇಶದಲ್ಲಿ ಚೆನ್ನಾಗಿ ಬೆಳೆಯುತ್ತದೆ. 19 ರಿಂದ 30 ಸೆ.ಉಷ್ಣಾಂಶ, 200 ರಿಂದ 250 ಸೆಂ.ಮೀ. ಮಳೆ ಹಾಗೂ 70 ರಿಂದ 80 ಆರ್ದತೆ ಇರುವ ಪ್ರದೇಶಗಳಲ್ಲಿ ನಾಟಿಗೆ ಅನುಕೂಲಕರ. ಫಸಲಿನ ಹಿತದೃಷ್ಟಿಯಿಂದ ಶೀತ ಪ್ರದೇಶ ಮತ್ತು ಬೆಟ್ಟ ಗುಡ್ಡ ಪ್ರದೇಶಗಳು ಅಷ್ಟು ಸೂಕ್ತವಲ್ಲ ಎಂದೂ ತಜ್ಞರು ಅಭಿಪ್ರಾಯಪಡುತ್ತಾರೆ.

ಬೇಡಿಕೆ ಇದೆ
ಪದಾರ್ಥ ಹಾಗೂ ವಿವಿಧ ಖಾದ್ಯಗಳ ತಯಾರಿಕೆಗೆ ಜೀಗುಜ್ಜೆ ಹೆಚ್ಚಾಗಿ ಬಳಸ್ಪಡುವ ಕಾರಣ ಮಾರುಕಟ್ಟೆಗಳಲ್ಲಿ ಇದಕ್ಕೆ ಬೇಡಿಕೆಯೂ ಇದೆ. ಆದರೆ ದಕ್ಷಿಣ ಕನ್ನಡದಲ್ಲಿ ಇದನ್ನು ಆದಾಯದ ದೃಷ್ಟಿಯಿಂದ ಬೆಳೆಯುವುದು ಕಡಿಮೆ. ಮನೆ ಖರ್ಚಿಗೆ ಆದಿತು ಎಂಬ ಕಾರಣಕ್ಕೆ ಗಿಡ ನೆಡುತ್ತಾರೆ. ಇದನ್ನು ಉಪ ಬೆಳೆಯಾಗಿ ಬೆಳೆದರೆ ಒಂದಷ್ಟು ಆದಾಯವೂ ದೊರೆಯಬಹುದು. ತೋಟಗಾರಿಕಾ ಇಲಾಖೆಯಿಂದಲೂ ಈ ಸಸಿ ದೊರೆಯುವುದರಿಂದ ಉತ್ತಮ ಗುಣಮಟ್ಟದ ಗಿಡ ನಾಟಿ ಮಾಡಬಹುದು. ಅಡಿಕೆ, ತೆಂಗು, ರಬ್ಬರ್‌ ತೋಟ ಮಧ್ಯೆ ನಾಟಿ ಇದನ್ನು ಮಾಡುವಂತಹದಲ್ಲ. ದಿವಿ ಹಲಸು ರೆಂಬೆ, ಕೊಂಬೆ ಚಾಚಿಕೊಂಡು ಬೆಳೆಯುವ ಕಾರಣ, ವಿಸ್ತಾರವಾದ ಜಾಗವೂ ಬೇಕು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.