ಚಿಕನ್‌ ಪಾಕ್ಸ್‌ ಸ್ವಚ್ಛತೆ ಪಾಲಿಸಿ, ಪಥ್ಯ ಅನುಸರಿಸಿ

ಆಳವಾದ ಕಲೆಗಳು ಉಳಿಯದ ಹಾಗೆ ಮಾಡಲು ಆದಷ್ಟು ಗುಳ್ಳೆಗಳನ್ನು ಉಗುರಿನಿಂದ ಮುಟ್ಟದೇ ಇರುವುದು ಒಳ್ಳೆಯದು

Team Udayavani, Aug 10, 2021, 3:28 PM IST

ಚಿಕನ್‌ ಪಾಕ್ಸ್‌ ಸ್ವಚ್ಛತೆ ಪಾಲಿಸಿ, ಪಥ್ಯ ಅನುಸರಿಸಿ

ಚಿಕನ್‌ ಪಾಕ್ಸ್‌ ಸಾಮಾನ್ಯವಾಗಿ ಬಾಲ್ಯದಲ್ಲಿ ಕಂಡು ಬರುವ ಒಂದು ವೈರಲ್‌ ಇನ್ಫೆಕ್ಷನ್‌. ಈ ಸೋಂಕು ಮೇಲ್ನೋಟದಲ್ಲಿ ಸಾಮಾನ್ಯವಾಗಿ ಕಂಡುಬಂದರೂ ನಾವು ಇದನ್ನು ನಿರ್ಲಕ್ಷಿಸುವಂತಿಲ್ಲ. ಇದು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಸರಿಯಾದ ಪಥ್ಯ ಹಾಗೂ ಜೀವನ ಪದ್ಧತಿ ಅನುಸರಿಸದಿದ್ದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ.

ಇದನ್ನೂ ಓದಿ:ಪಂಜಾಬ್‌ಗೆ ಪಾಕ್‌ ಡ್ರೋನ್‌ ಮೂಲಕ ಟಿಫಿನ್‌ ಬಾಕ್ಸ್‌ ಬಾಂಬ್‌?

ಕಾರಣಗಳು
ಚಿಕನ್‌ ಪಾಕ್ಸ್‌ ಸೋಂಕು ವಾರಿಸೆಲ್ಲಾ, ಜೋಸ್ಟರ್‌ ಎಂಬ ವೈರಸ್‌ನಿಂದ ಹರಡುತ್ತದೆ. ಉಸಿರಾಟದ ಮೂಲಕ, ಕಲುಷಿತ, ಅನಾರೋಗ್ಯಕರ ಆಹಾರ, ನೀರು ಸೇವನೆಯಿಂದ ಅಥವಾ ಚಿಕನ್‌ ಪಾಕ್ಸ್‌ ಇರುವ ವ್ಯಕ್ತಿಯ ನೇರ ಸಂಪರ್ಕದಿಂದ ಹರಡುತ್ತದೆ.

ಮುಖ್ಯವಾಗಿ ಈ ಸೋಂಕು ವೈರಸ್‌ ಗಾಳಿಯ ಮೂಲಕ ಹರಡುವುದರಿಂದ ಬರುತ್ತದೆ. ಚಿಕನ್‌ ಪಾಕ್ಸ್‌ ರೋಗಿಯ ಕಫ‌ ಅಥವಾ ಸೀನುವಾಗ ಹೊರಬೀಳುವ ಹನಿಗಳಿಂದ ಹರಡುತ್ತದೆ. ರೋಗ- ನಿರೋಧಕ ಶಕ್ತಿ ಕಡಿಮೆ ಇದ್ದವರಲ್ಲಿ ಹಾಗೂ ಮಕ್ಕಳಿಗೆ ಈ ರೋಗ ನಿರೋಧಕ ಚುಚ್ಚು ಮದ್ದು ಕೊಡಿಸದೇ ಇದ್ದಲ್ಲಿ ಚಿಕನ್‌ ಪಾಕ್ಸ್‌ ಬರುವ ಸಾಧ್ಯತೆ ಜಾಸ್ತಿ ಇರುತ್ತದೆ. ಈ ಕಾಯಿಲೆ ಇರುವ ವ್ಯಕ್ತಿಗೆ ಮುಖದ ಮೇಲೆ ಮತ್ತು ಶರೀರದ ಮೇಲೆ ಗುಳ್ಳೆಗಳು 5 ರಿಂದ 6 ದಿನಗಳವರೆಗೆ
ಹರಡುವ ಸಾಧ್ಯತೆ ಇದೆ.

ಸೋಂಕು ಹರಡುವ ಕಾಲ
ಕೆಲವು ಕಾಯಿಲೆಗಳು ನಿರ್ದಿಷ್ಟ ಸಮಯ ಅಥವಾ ಋತುಗಳಲ್ಲಿ ಪ್ರಮುಖವಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಗಳ ಸಂದರ್ಭದಲ್ಲಿ ಅಂದರೆ ಚಳಿಗಾಲ ಮತ್ತು ವಸಂತಕಾಲದಲ್ಲಿ ಕಂಡುಬರುತ್ತದೆ.

ಜ್ವರ, ಶೀತ, ತಲೆನೋವು, ಎಲ್ಲ ಚಿಕನ್‌ ಪಾಕ್ಸ್‌ನ ಮೊದಲು ಕಂಡುಬರುವ ಸೂಚನೆಗಳು. ಎರಡನೇ ದಿನ ಮುಖ ಮತ್ತು ಶರೀರದಲ್ಲಿ ಸಣ್ಣ ಸೆಕೆ ಬೊಕ್ಕೆಗಳಂತೆ ಕಂಡು ಬರುತ್ತದೆ. ಹೊಟ್ಟೆ, ಬೆನ್ನು, ಮುಖದ ಮೇಲೆ ಹೆಚ್ಚಿನ ಗುಳ್ಳೆಗಳು ಕಂಡುಬರುತ್ತವೆ. ಸಾಮಾನ್ಯವಾಗಿ ಮಕ್ಕಳು ಯಾವುದೇ ತೊಂದರೆಯಿಲ್ಲದೇ ಚಿಕನ್‌ ಪಾಕ್ಸ್ ಅನ್ನು ಸಹಿಸುತ್ತಾರೆ.

ಮುಂಜಾಗ್ರತೆ ಕ್ರಮಗಳು
ಈ ರೋಗ ಬಾರದೇ ಇರುವ ಹಾಗೆ ಮಕ್ಕಳಿಗೆ ಎಂಎಂಆರ್‌ ವಾಕ್ಸಿನ್‌ ಕೊಡಿಸಬೇಕು. ಮಕ್ಕಳಿಗೆ ಬಂದಲ್ಲಿ ಶಾಲೆಗೆ ಹೋಗದೆ ವಿಶ್ರಾತಿ ತೆಗೆದುಕೊಂಡು ಇತರರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಚರ್ಮದ ನೈರ್ಮಲ್ಯ, ಉತ್ತಮ ಆರೈಕೆ ಮತ್ತು ವೈದ್ಯರ ಸಲಹೆಗಳನ್ನು ಪಡೆದು, ಆಂಟಿಸೆಪ್ಟಿಕ್‌ ಕ್ರಮಗಳನ್ನು ಅನುಸರಿಸಬೇಕು. ಆಳವಾದ ಕಲೆಗಳು ಉಳಿಯದ ಹಾಗೆ ಮಾಡಲು ಆದಷ್ಟು ಗುಳ್ಳೆಗಳನ್ನು ಉಗುರಿನಿಂದ ಮುಟ್ಟದೇ ಇರುವುದು ಒಳ್ಳೆಯದು. ಚರ್ಮದ ಗಾಯದಿಂದ ರೋಗ ಉಲ್ಬಣವಾಗದಂತೆ ಜಾಗೃತೆ ವಹಿಸಬೇಕು.

ಪಥ್ಯ ಅಗತ್ಯ
ಕರಿದ ಹಾಗೂ ಖಾರವಾದ ತಿಂಡಿ ಸಂಪೂರ್ಣವಾಗಿ ತ್ಯಜಿಸಬೇಕು. ಕಹಿಬೇವಿನ ಕಷಾಯದಲ್ಲಿ ಸ್ನಾನ ಮಾಡುವುದು, ಎಳನೀರು ಹಾಗೂ ನೀರನ್ನು ಧಾರಾಳವಾಗಿ ಕುಡಿಯುವುದು, ರೋಗವನ್ನು ಶೀಘ್ರವಾಗಿ ಗುಣಮುಖ ಮಾಡುವುದು. ಗರ್ಭಿಣಿಯರು, ವೃದ್ಧರಿಗೆ, ಚಿಕನ್‌ ಪಾಕ್ಸ್ ಬಂದಾಗ ವೈದ್ಯರ ಸಲಹೆ ಅಗತ್ಯ. ಆಗಾಗ ತುರಿಕೆಯಿಂದ ಇನ್‌ಫೆಕ್ಷನ್‌ ಆಗುವ ಸಾಧ್ಯತೆ ಇರುವುದರಿಂದ ಉಗುರುಗಳನ್ನು ಕತ್ತರಿಸುವುದು ಉತ್ತಮ.

ಇನ್‌ಫೆಕ್ಷನ್‌ ಇದ್ದಲ್ಲಿ ಆ್ಯಂಟಿ ಬಯೋಟಿಕ್  ಔಷಧಗಳ ಆವಶ್ಯಕತೆ ಇರುತ್ತದೆ. ಒಬ್ಬ ವ್ಯಕ್ತಿಗೆ ಒಮ್ಮೆ ಚಿಕನ್‌ ಪಾಕ್ಸ್ ಬಂದರೆ ಆ ವ್ಯಕ್ತಿಯು ರೋಗ ನಿರೋಧಕ ಶಕ್ತಿಯನ್ನು ಪಡೆಯುತ್ತಾನೆ. ಚಿಕನ್‌ ಪಾಕ್ಸ್ ಎರಡನೇ ಸಲ ಬಂದರೆ ವೈದ್ಯರನ್ನು ಭೇಟಿಯಾಗುವುದು ಉತ್ತಮ. ಚಿಕನ್‌ ಪಾಕ್ಸ್ ಬಂದ ಮೂರನೇ ದಿನ ಕಣ್ಣು ಕೆಂಪು ಆಗಿರಬಹುದು. ಯಾವುದೇ ತೊಂದರೆ ಇದ್ದಲ್ಲಿ ವೈದ್ಯರ ಸಂಪರ್ಕ ಅಗತ್ಯ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.