ಮಕ್ಕಳ ಆರೋಗ್ಯ ರಕ್ಷಣೆ: ಕಾಳಜಿ ಅಗತ್ಯ


Team Udayavani, Jul 7, 2021, 6:40 AM IST

children-save

ಕಳೆದ ಒಂದೂವರೆ ವರ್ಷದಿಂದ ಕೊರೊನಾ ಪಿಡುಗು ನಮ್ಮನ್ನು ಕಾಡಿದೆ. ಸಮಾಜದ ಮೇಲೆ ತೀವ್ರತೆರನಾದ ಪರಿಣಾಮ ಬೀರಿರುವ ಈ ಕಾಯಿಲೆ ಜನರನ್ನು ಆತಂಕಕ್ಕೀಡು ಮಾಡಿದೆ. ಕೊರೊನಾ ಸೋಂಕು ಬಾಧಿತ ಮಕ್ಕಳಲ್ಲಿ ರೋಗ ಲಕ್ಷಣಗಳು ಕಡಿಮೆ ಹಾಗೂ ಮರಣ ಪ್ರಮಾಣ ಕಡಿಮೆ ಎಂದು ಅವರನ್ನು ನಿರ್ಲಕ್ಷಿಸುವಂತಿಲ್ಲ. ಮುಂದಿನ ದಿನಗಳಲ್ಲಿ ರೂಪಾಂತರಿತ ಸೋಂಕು ಯಾವ ತೆರನಾದ ಪರಿಣಾಮವನ್ನು ಬೀರಲಿದೆ ಎಂಬುದನ್ನು ಊಹಿಸಲು ಕಷ್ಟಸಾಧ್ಯವಾಗಿರುವುದರಿಂದ ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸುವುದು ಅವಶ್ಯವಾಗಿದೆ.

ಕುಟುಂಬದ ಸದಸ್ಯರಲ್ಲಿ ಯಾರಿಗಾದರೂ ಕೊರೊನಾ ಸೋಂಕು ಬಾಧಿಸಿದಾಗ ಮಕ್ಕಳ ಆರೈಕೆ, ತೆಗೆದುಕೊಳ್ಳಬೇಕಾದ ಜಾಗ್ರತ ಕ್ರಮಗಳು ಹಾಗೂ ಈ ಸಂದರ್ಭದಲ್ಲಿ ಬದಲಾದ ಮಕ್ಕಳ ದಿನಚರಿ ಹೆತ್ತವರ ಮುಂದಿರುವ ಸವಾಲುಗಳಾಗಿವೆ.

ಮಕ್ಕಳ ಸುರಕ್ಷೆ , ಆರೈಕೆ ಈ ರೀತಿಯಾಗಿರಲಿ
1. ಕೈ ತೊಳೆಯಲು ಮಕ್ಕಳಿಗೆ ತರಬೇತಿ ನೀಡುವುದು, ಜ್ವರ, ಶೀತ ಇರುವವರ ಸಂಪರ್ಕದಿಂದ ದೂರವಿರಿಸುವುದು, ಮಾಸ್ಕ್ ಧರಿಸುವುದರ ಮೂಲಕ ಮಕ್ಕಳನ್ನು ಕಾಯಿಲೆಯಿಂದ ರಕ್ಷಿಸಿಕೊಳ್ಳಬಹುದು. ಅಲ್ಪ ಅವಧಿಯಲ್ಲಿ ರೋಗದ ಪ್ರತಿರೋಧವನ್ನು ಯಾವುದೇ ವಿಧಾನದಿಂದ ಹೆಚ್ಚಿಸಲು ಸಾಧ್ಯವಿಲ್ಲ. ಮನೆಯಲ್ಲಿ ಕೊರೊನಾ ನಿರೋಧಕ ಲಸಿಕೆ ಪಡೆಯಲು ಅರ್ಹತೆ ಇರುವವರೆಲ್ಲ ಸಾಧ್ಯವಾದಷ್ಟು ಬೇಗ ಲಸಿಕೆ ತೆಗೆದುಕೊಳ್ಳಬೇಕು.

2. ಕಾಯಿಲೆಯ ಬಗ್ಗೆ ಸರಿಯಾದ ಮಾಹಿತಿಯ ಮೂಲಕ ಆತಂಕ, ಭಯ, ನಿದ್ರಾಹೀನತೆ, ಕೆಟ್ಟ ಸ್ವಪ್ನ ಬಾರದಂತೆ ನೋಡಿಕೊಳ್ಳಬಹುದು. ದೈನಂದಿನ ಕೆಲಸದಲ್ಲಿ ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಬೇಕು. ಶೇ. 98 ಜನರು ಕಾಯಿಲೆಯಿಂದ ಗುಣ ಹೊಂದುತ್ತಾರೆ. ಹೆತ್ತವರ ಧನಾತ್ಮಕ ಮನೋಭಾವ ಹಾಗೂ ಧೈರ್ಯದ ನಡವಳಿಕೆ ಮಾನಸಿಕ ಆರೋಗ್ಯಕ್ಕೆ ಬೇಕಾದ ಹಿತಕರ ವಾತಾವರಣವನ್ನು ಸೃಷ್ಟಿಸುತ್ತದೆ.

3. ಕೆಲವೊಂದು ಸಲಹೆ ಮತ್ತು ಮಾರ್ಗದರ್ಶನ: (ಎ) ಮನೆಯ ಒಳಗೆ ಅಥವಾ ಮನೆಯ ಎದುರು ದಿನನಿತ್ಯ ದೈಹಿಕ ಚಟುವಟಿಕೆ ಮತ್ತು ವ್ಯಾಯಾಮ ಮಾಡುವುದು ದೇಹದ ಕ್ಷಮತೆಗೆ ಮತ್ತು ಆರೋಗ್ಯಕ್ಕೆ ಅಗತ್ಯ. ಮನೆಯ ಸುತ್ತ ನಡಿಗೆ, ಜಾಗಿಂಗ್‌, ಮನೆ ಮಂದಿಯ ಜತೆ ಹೊರಾಂಗಣ ಆಟ, ಬಹು ಮಹಡಿ ಕಟ್ಟಡಗಳಲ್ಲಿ ವಾಸಿಸುವವರು ತಮ್ಮ ಪರಿಚಯದ ಸಣ್ಣ ಗುಂಪಿನ ಜತೆ ಆಟದ ಚಟುವಟಿಕೆ, ದೊಡ್ಡ ಮಕ್ಕಳು ಯೋಗವನ್ನು ಅಭ್ಯಾಸ ಮಾಡಿಕೊಳ್ಳಬಹುದು.

(ಬಿ) ಇ- ಕಲಿಕೆ ಈಗಿನ ವಿಧಾನವಾಗಿರುವುದರಿಂದ ಮಕ್ಕಳ ಶೈಕ್ಷಣಿಕ ಆವಶ್ಯಕತೆ ಗಳನ್ನು ಪೂರೈಸುವ ಅಗತ್ಯವಿದೆ. ಮೊಬೈಲ್‌ ಫೋನ್‌ ಸ್ಕಿನ್‌ನ ಮುಂದೆ ಹೆಚ್ಚು ಸಮಯ ಕಳೆಯುವುದರಿಂದ ಕಣ್ಣು, ಮನಸ್ಸು, ಭಾವ ಭಂಗಿ/ ದೇಹ ಸ್ಥಿತಿ ಹಾಗೂ ನಿದ್ರೆಗೆ ಸಂಬಂಧಿಸಿದ ತೊಂದರೆಗಳು ಉಂಟಾಗುತ್ತವೆ. ಲ್ಯಾಪ್‌ಟಾಪ್‌ ಬಳಸುವ ಮೂಲಕ ಕಣ್ಣಿಗೆ ಸಂಬಂಧಿಸಿದ ತೊಂದರೆಗಳನ್ನು ಕಡಿಮೆ ಮಾಡಬಹುದು.

(ಸಿ) ಸಾಂಸ್ಕೃತಿಕ, ಅಡುಗೆ, ಚಿತ್ರಕಲೆ ಮುಂತಾದ ವಿರಾಮದ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸಿ ಆ ಮೂಲಕ ಅವರ ಕೌಶಲವನ್ನು ಹೆಚ್ಚಿಸಬಹುದಾಗಿದೆ.

4. ಮೊಬೈಲ್‌ ಫೋನ್‌ನಲ್ಲಿ ಅಧಿಕ ಸಮಯ ಕಳೆಯುವ ಕುರಿತಂತೆ ಹಾಗೂ ಸಾಮಾಜಿಕ ಜಾಲತಾಣಗಳ ಸುಳ್ಳು ಮಾಹಿತಿಗಳ ಬಗ್ಗೆ ಮಕ್ಕಳಿಗೆ ಸರಿಯಾದ ಮಾಹಿತಿ, ಅರಿವು ಇರಬೇಕು. ಮಕ್ಕಳು ಅದರಲ್ಲೂ ಹದಿ ಹರೆಯದವರು ಸಾಮಾಜಿಕ ಜಾಲತಾಣಗಳಲ್ಲಿ ಏನನ್ನು ನೋಡುತ್ತಾರೆ ಎಂಬ ಬಗ್ಗೆ ನಿಗಾ ಇರಬೇಕು.

5. ಆರೋಗ್ಯಕರ ಆಹಾರ ಕ್ರಮ: ಆರೋಗ್ಯಕರ ಆಹಾರ ಕ್ರಮವು ಜಾಸ್ತಿ ತೂಕ ಹಾಗೂ ಬೊಜ್ಜು ಬಾರದಂತೆ ನೋಡಿಕೊಳ್ಳುವುದರ ಜತೆಗೆ ಆರೋಗ್ಯವನ್ನು ಉತ್ತಮಗೊಳಿಸುತ್ತದೆ. ಆರ್ಥಿಕ ಸಂಕಷ್ಟದಿಂದಾಗಿ ಆನೇಕ ಕುಟುಂಬಗಳಿಗೆ ಉತ್ತಮ ಆಹಾರ ಹೊಂದಿಸಲು ಕಷ್ಟವಾಗುತ್ತಿದ್ದರೂ ವಿಟಮಿನ್‌ ಹಾಗೂ ಪೋಷಕಾಂಶಯುಕ್ತ ಆಹಾರಗಳನ್ನು ಮಕ್ಕಳಿಗೆ ನೀಡಲು ಪ್ರಯತ್ನಿಸಬೇಕು. “ಜಂಕ್‌ ಫುಡ್‌’ ಮತ್ತು ಜಾಸ್ತಿ ಕ್ಯಾಲರಿ ಇರುವ ಆಹಾರಗಳನ್ನು ದೂರ ಮಾಡಿ ಬೊಜ್ಜು ಬಾರದಂತೆ ತಡೆಗಟ್ಟಿ.
ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ವೈದ್ಯರ ಜತೆ ಮುಖತಃ ಅಥವಾ ದೂರವಾಣಿ ಮೂಲಕ ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು. ಮಕ್ಕಳ ಸಣ್ಣಪುಟ್ಟ ತೊಂದರೆಗಳಿಗೆ ಟೆಲಿ ಸಲಹೆಗಳ ಮೂಲಕ ಸಂಪರ್ಕ ಬೆಳೆಸಿ ಹೆತ್ತವರು ಸಮಸ್ಯೆ ಪರಿಹರಿಸಿಕೊಳ್ಳಬಹುದು. ಯಾವುದೇ ಗಂಭೀರ ಕಾಯಿಲೆಗಳಿಗೆ ಚಿಕಿತ್ಸಾಲಯ ಅಥವಾ ಆಸ್ಪತ್ರೆಗಳನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯುವುದು ಸುರಕ್ಷಿತ ವಿಧಾನ. ಕೋವಿಡ್‌ ಸೋಂಕಿತರ ಸಂಪರ್ಕ ಹೊಂದಿದವರು ಫಿವರ್‌
ಕ್ಲಿನಿಕ್‌ಗೆ ಭೇಟಿ ನೀಡಬಹುದು.

6. ಕೋವಿಡ್‌ ಸೋಂಕು ಇದ್ದು, ಉಸಿರಾಟದ ವೇಗ ಜಾಸ್ತಿ ಇದ್ದರೆ ಹಾಗೂ ಆಕ್ಸಿಜನ್‌ ಪ್ರಮಾಣ 94 ಕ್ಕಿಂತ ಕಡಿಮೆ ಇದ್ದರೆ, 3 ದಿನಕ್ಕಿಂತ ಜಾಸ್ತಿ ಜ್ವರ ಇದ್ದರೆ, ಮಂಪರು ಬಂದ ಹಾಗೆ ಇದ್ದರೆ, ಸರಿಯಾಗಿ ಆಹಾರ ಸೇವಿಸದಿದ್ದರೆ ಆಸ್ಪತ್ರೆಗೆ ದಾಖಲಾಗುವುದು ಅಗತ್ಯ.

 ಡಾ| ಬಿ.ಎಸ್‌. ಬಾಳಿಗಾ, ಪ್ರೊಫೆಸರ್‌ ಎಮಿರಟಸ್‌, ಮಕ್ಕಳ ಚಿಕಿತ್ಸಾ ವಿಭಾಗ, ಕೆ.ಎಂ.ಸಿ., ಮಂಗಳೂರು

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.