ಬಾಲ್ಯದಲ್ಲೇ ಬೊಜ್ಜು! ಕಾರಣವೇನು? ಪರಿಹಾರ ಹೇಗೆ?


Team Udayavani, Jul 11, 2019, 12:02 PM IST

m-26

ಇಪ್ಪತ್ತೂಂದನೆಯ ಶತಮಾನದ ಅತಿ ಗಂಭೀರ ಸಾರ್ವಜನಿಕ ಆರೋಗ್ಯ ಸವಾಲುಗಳಲ್ಲಿ ಒಂದು ಮಕ್ಕಳು ಬಾಲ್ಯದಲ್ಲಿಯೇ ಬೊಜ್ಜು ಬೆಳೆಸಿಕೊಳ್ಳುವುದು. ಈ ಸಮಸ್ಯೆ ಜಾಗತಿಕವಾದುದು ಮತ್ತು ಕೆಳ ಮತ್ತು ಮಧ್ಯಮ ಆದಾಯ ದೇಶಗಳಲ್ಲಿ ಅದರಲ್ಲೂ ನಗರ ಪ್ರದೇಶಗಳಲ್ಲಿ ವ್ಯಾಪಕವಾಗಿದೆ. ಮಗು ಆತನ/ ಆಕೆಯ ವಯಸ್ಸು ಮತ್ತು ಎತ್ತರಕ್ಕೆ ಸಹಜವಾದ ಅಥವಾ ಆರೋಗ್ಯಕರವಾದ ದೇಹತೂಕಕ್ಕಿಂತ ಹೆಚ್ಚು ತೂಕವನ್ನು ಹೊಂದಿದ್ದರೆ ಅದನ್ನು ಬೊಜ್ಜು ಎನ್ನಲಾಗುತ್ತದೆ. ಬಾಲ್ಯದಲ್ಲಿಯೇ ಅಧಿಕ ದೇಹತೂಕ ಅಥವಾ ಬೊಜ್ಜು ಹೊಂದಿರುವ ಮಕ್ಕಳು ಪ್ರೌಢವಯಸ್ಕರಾದಾಗಲೂ ಈ ಸಮಸ್ಯೆ ಹಾಗೆಯೇ ಉಳಿದುಬಿಡುವ ಸಾಧ್ಯತೆಗಳು ಹೆಚ್ಚು. ಅಲ್ಲದೆ ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದ್ರೋಗಗಳಂತಹ ತೊಂದರೆಗೆ ತುತ್ತಾಗುವ ಸಾಧ್ಯತೆಗಳು ಅಧಿಕ. ಅಧಿಕ ದೇಹತೂಕ ಅಥವಾ ಬೊಜ್ಜು ಹಾಗೂ ಇವುಗಳಿಗೆ ಸಂಬಂಧಿಸಿದ ಇತರ ಕಾಯಿಲೆಗಳು ಬಹುತೇಕವಾಗಿ ತಡೆಗಟ್ಟಬಲ್ಲಂಥವು. ಆದ್ದರಿಂದ ಬಾಲ್ಯದಲ್ಲಿಯೇ ಬೊಜ್ಜು ಬೆಳೆಯುವುದನ್ನು ತಡೆಗಟ್ಟುವುದಕ್ಕೆ ಹೆಚ್ಚು ಪ್ರಾಮುಖತೆಯನ್ನು ನೀಡಬೇಕಾದ ಅಗತ್ಯವಿದೆ. ಕೆಳ ಸಾಮಾಜಿಕ- ಆರ್ಥಿಕ ಸ್ಥಿತಿಗತಿಯ ಸಮುದಾಯಗಳು ಮತ್ತು ತಾಯಂದಿರನ್ನು ಉದ್ದೇಶಿಸಿ ಶೈಕ್ಷಣಿಕ ಅರಿವನ್ನು ಮೂಡಿಸುವ ಸಂದರ್ಭದಲ್ಲಿ ಬೊಜ್ಜು ಅಥವಾ ಅಧಿಕ ದೇಹತೂಕವು ಉತ್ತಮ ಆರೋಗ್ಯವನ್ನು ಸಂಕೇತಿಸುವುದಿಲ್ಲ ಎಂಬ ಸಂದೇಶವನ್ನು ಹರಡುವುದಕ್ಕೆ ಹೆಚ್ಚು ಒತ್ತನ್ನು ನೀಡಬೇಕಾದ ಅಗತ್ಯವಿದೆ.

ಬಾಲ್ಯದಲ್ಲಿ ಬೊಜ್ಜು: ಆರೋಗ್ಯ ಸಮಸ್ಯೆಯಾಗಿ ಪರಿಗಣಿತವಾಗಿರುವುದು ಯಾಕೆ?

ಬಾಲ್ಯದಲ್ಲಿ ಬೊಜ್ಜು ಅಥವಾ ಅಧಿಕ ದೇಹತೂಕ ಉಂಟಾದರೆ ಅದು ಅನೇಕ ರೀತಿಗಳಲ್ಲಿ ದೇಹದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತದೆ. ಬೊಜ್ಜು ಹೊಂದಿರುವ ಮಕ್ಕಳು ಈ ಕೆಳಗಿನ ಸಮಸ್ಯೆಗಳಿಗೆ ತುತ್ತಾಗುವ ಸಾಧ್ಯತೆ ಅಧಿಕ:

• ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟರಾಲ್ – ಇವೆರಡೂ ಹೃದ್ರೋಗ (ಸಿವಿಡಿ)ಗಳ ಅಪಾಯಾಂಶಗಳಾಗಿವೆ.

• ಗ್ಲುಕೋಸ್‌ ಸಹಿಷ್ಣುತೆ, ಇನ್ಸುಲಿನ್‌ ಪ್ರತಿರೋಧ ಶಕ್ತಿ ಕಡಿಮೆಯಾಗುವುದು ಮತ್ತು ಟೈಪ್‌ 2 ಮಧುಮೇಹ ಉಂಟಾಗುವ ಅಪಾಯ ಹೆಚ್ಚುವುದು.

• ಅಸ್ತಮಾ ಮತ್ತು ಸ್ಲೀಪ್‌ ಅಪ್ನಿಯಾದಂತಹ ಉಸಿರಾಟ ಸಂಬಂಧಿ ತೊಂದರೆಗಳು.

• ಸಂದುಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸ್ನಾಯು-ಎಲುಬು ಸಂಬಂಧಿ ಅನಾರೋಗ್ಯಗಳು

• ಫ್ಯಾಟಿ ಲಿವರ್‌ ಕಾಯಿಲೆ, ಮೂತ್ರಪಿಂಡದಲ್ಲಿ ಕಲ್ಲು ಮತ್ತು ಗ್ಯಾಸ್ಟ್ರೊ ಎಸೊಫೇಜಿಯಲ್ ಡಿಸ್‌ಕಂಫ‌ರ್ಟ್‌ (ಎದೆಯುರಿ, ಹುಳಿತೇಗು)

ಮಕ್ಕಳು ಅಧಿಕ ದೇಹತೂಕ ಅಥವಾ ಬೊಜ್ಜನ್ನು ಬೆಳೆಸಿಕೊಳ್ಳುವುದೇಕೆ?

ಆಹಾರ ಮತ್ತು ಜೀವನಶೈಲಿ
ಹೆತ್ತವರ ಉದ್ಯೋಗ ಜೀವನದ ಇಡುಕಿರದ ಕಾರ್ಯಭಾರದಿಂದಾಗಿ ಅವರಿಗೆ ಮಕ್ಕಳಿಗಾಗಿ ಸಮಯ ನೀಡಲು ಆಗುವುದಿಲ್ಲ. ಇದರಿಂದ ಮಕ್ಕಳಿಗೆ ಹೆತ್ತವರ ಮಾರ್ಗದರ್ಶನದ ಕೊರತೆ ಉಂಟಾಗುತ್ತದೆ. ಹೀಗಾಗಿ ಸರಿಯಾದ ಪೌಷ್ಟಿಕಾಂಶ ಸೇವನೆಯ ಬಗ್ಗೆ ಮಕ್ಕಳಿಗೆ ಹೇಳಿಕೊಡುವುದಕ್ಕೆ ಹೆತ್ತವರ ಬಳಿ ಸಮಯವಿರುವುದಿಲ್ಲ. ಹೆತ್ತವರ ಕಾರ್ಯಭಾರದಿಂದಾಗಿ ಅನೇಕ ಮಕ್ಕಳು ಮನೆಯೂಟ ಬದಲಾಗಿ ಯಾವುದೋ ಫಾಸ್ಟ್‌ಫ‌ುಡ್‌ ರೆಸ್ಟೋರೆಂಟ್‌ಗಳಲ್ಲಿ ಊಟ-ಉಪಾಹಾರಗಳನ್ನು ಪೂರೈಸಿಕೊಳ್ಳಬೇಕಾಗುತ್ತದೆ.
ವ್ಯಾಯಾಮ ಮತ್ತು ದೈಹಿಕ ಚಟುವಟಿಕೆಗಳ ಕೊರತೆ
ಅನೇಕ ಮಕ್ಕಳಿಗೆ ಸಾಕಷ್ಟು ದೈಹಿಕ ಚಟುವಟಿಕೆ, ವ್ಯಾಯಾಮ ಸಿಗುವುದಿಲ್ಲ. ಹೊರಾಂಗಣದಲ್ಲಿ ಆಟವಾಡುವ ಬದಲಾಗಿ ಮನೆಯೊಳಗೆ ಡಿಜಿಟಲ್ ಉಪಕರಣಗಳ ಜತೆಗೆ ಆಟವಾಡುವುದರಲ್ಲಿಯೇ ಮಕ್ಕಳು ಹೆಚ್ಚು ಕಾಲ ಕಳೆಯುತ್ತಾರೆ. ದಿನಕ್ಕೆ ಎರಡು ತಾಸು ಅಥವಾ ಅದಕ್ಕಿಂತ ಕಡಿಮೆ ಕಾಲ ಟಿವಿ ವೀಕ್ಷಿಸುವ ಮಕ್ಕಳಿಗಿಂತ ದಿನಕ್ಕೆ ನಾಲ್ಕು ತಾಸುಗಳಿಗಿಂತ ಹೆಚ್ಚು ಕಾಲ ಟಿವಿ ವೀಕ್ಷಿಸುವ ಮಕ್ಕಳು ಬೊಜ್ಜು ಬೆಳೆಸಿಕೊಳ್ಳುವ ಸಾಧ್ಯತೆ ಅಧಿಕ.

ವಂಶವಾಹಿ
ಮಕ್ಕಳ ದೇಹತೂಕದಲ್ಲಿ ವಂಶವಾಹಿಗಳೂ ಪಾತ್ರ ವಹಿಸುತ್ತವೆ. ನಮ್ಮ ದೇಹವಿಧ ಮತ್ತು ದೇಹವು ಎಷ್ಟು ಮತ್ತು ಹೇಗೆ ಕೊಬ್ಬನ್ನು ದಹಿಸಬೇಕು ಮತ್ತು ಶೇಖರಿಸಿಟ್ಟುಕೊಳ್ಳಬೇಕು ಎಂಬುದನ್ನು ನಿರ್ಧರಿಸುವಲ್ಲಿ ವಂಶವಾಹಿಗಳು ಸಹಾಯ ಮಾಡುತ್ತವೆ. ಹೆತ್ತವರು ಅಧಿಕ ದೇಹತೂಕ ಅಥವಾ ಬೊಜ್ಜು ಹೊಂದಿದವರಾಗಿದ್ದರೆ ಮಗು ಕೂಡ ಈ ಸಮಸ್ಯೆಗೆ ತುತ್ತಾಗುವ ಸಾಧ್ಯತೆಗಳು ಅಧಿಕ.

ಶಿಶುಗಳಲ್ಲಿ ಬೊಜ್ಜು ತಡೆಯುವುದು
ಮಗುವಿಗೆ ಹೆಚ್ಚು ಕಾಲ ಎದೆಹಾಲು ಉಣಿಸಿದರೆ ಮಗು ಬೆಳೆದಂತೆ ಅಧಿಕ ದೇಹತೂಕ, ಬೊಜ್ಜು ಉಂಟಾಗುವ ಸಾಧ್ಯತೆ ಕಡಿಮೆಯಾಗುತ್ತದೆ.
ಮುಂದುವರಿಯುವುದು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.