Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ


Team Udayavani, May 21, 2024, 4:57 PM IST

colon cancer

ಕೊಲೊರೆಕ್ಟಲ್ ಕ್ಯಾನ್ಸರ್ ಎಂದೂ ಕೂಡ ಕರೆಯಲ್ಪಡುವ ಕೊಲೊನ್ ಕ್ಯಾನ್ಸರ್ ಸಾಮಾನ್ಯವಾಗಿ ಕೊಲೊನ್ ಅಥವಾ ಗುದನಾಳದ ಒಳ ಗೋಡೆಗಳ ಮೇಲೆ ಪೊಲಿಪ್ಸ್ ಎಂಬ ಸಣ್ಣ, ಕ್ಯಾನ್ಸರ್ ರಹಿತ ಬೆಳವಣಿಗೆಯಾಗಿ ಪ್ರಾರಂಭವಾಗುತ್ತದೆ.  ಈ ಪೊಲಿಪ್ಸ್ ನಂತರ ಕ್ಯಾನ್ಸರ್ ಆಗಿ ಬೆಳೆಯಬಹುದು. ಇತ್ತೀಚಿನ ದಿನಗಳಲ್ಲಿ, ಜೀವನಶೈಲಿಯಲ್ಲಿನ ಬದಲಾವಣೆಗಳು, ಆಹಾರ ಪದ್ಧತಿ ಮತ್ತು ವಯಸ್ಸಾದ ಜನಸಂಖ್ಯೆಯ ಹೆಚ್ಚುತ್ತಿರುವ ಅನುಪಾತದಂತಹ ಅಂಶಗಳಿಂದಾಗಿ ಕರುಳಿನ ಕ್ಯಾನ್ಸರ್ ಭಾರತದಲ್ಲಿ ಪ್ರಮುಖ ಕ್ಯಾನ್ಸರ್ ವಿಧಗಳಲ್ಲಿ ಒಂದಾಗಿದೆ. ಕೊಲೊನ್ ಕ್ಯಾನ್ಸರ್ ನ ಸಂಕೇತಗಳು ಮತ್ತು ರೋಗಲಕ್ಷಣಗಳನ್ನು ತಿಳಿದುಕೊಳ್ಳುವುದು ಮತ್ತು ತ್ವರಿತವಾಗಿ ವೈದ್ಯರನ್ನು ಭೇಟಿ ಮಾಡುವುದು ಮುಖ್ಯವಾಗಿದೆ.

ಅದರ ಬೆಳವಣಿಗೆಯನ್ನು ಮೊದಲೇ ಕಂಡುಹಿಡಿದರೆ ಚಿಕಿತ್ಸೆಗಳನ್ನು ಉತ್ತಮವಾಗಿ ನೀಡಬಹುದು ಮತ್ತು ಫಲಿತಾಂಶಗಳನ್ನು ಸುಧಾರಿಸಲು ಸಹಾಯ ಮಾಡಬಹುದು. ಕರುಳಿನ ಕ್ಯಾನ್ಸರ್ ನ ಸಾಮಾನ್ಯ ಸಂಕೇತಗಳು ಮತ್ತು ರೋಗಲಕ್ಷಣಗಳು ಈ ಕೆಳಗಿನಂತಿವೆ:

1 ಮಲದಲ್ಲಿನ ರಕ್ತ, ಕಪ್ಪು ಅಥವಾ ಜಿಗುಟಾದ ಮಲ, ನಿರಂತರ ಅತಿಸಾರ, ಅಥವಾ ಮಲಬದ್ಧತೆ ಸೇರಿದಂತೆ ಮಲ ವಿಸರ್ಜನೆಯ ರೀತಿಯಲ್ಲಿ ಬದಲಾವಣೆಗಳು.

2 ಹೊಟ್ಟೆಯಲ್ಲಿ ನೋವು, ಸೆಳೆತ ಅಥವಾ ಉಬ್ಬುವಿಕೆಯ ಭಾವನೆ

3 ಎಲ್ಲಾ ಸಮಯದಲ್ಲೂ ದಣಿವು ಅಥವಾ ಸ್ಪಷ್ಟವಾದ ಕಾರಣವಿಲ್ಲದೆ ಬಲಹೀನತೆಯ ಸ್ಥಿತಿ.

4 ಯಾವುದೇ ಕಾರಣವಿಲ್ಲದೆ ತೂಕ ಕಡಿಮೆಯಾಗುವುದು.

5 ಜೀರ್ಣಾಂಗ ವ್ಯವಸ್ಥೆಯಲ್ಲಿ ರಕ್ತಸ್ರಾವವಾಗುವ ಕಾರಣದಿಂದ ರಕ್ತದಲ್ಲಿ ಕಡಿಮೆ ಕಬ್ಬಿಣದ ಅಂಶ.

ಇತರ ಅನೇಕ ಹೊಟ್ಟೆ ಮತ್ತು ಕರುಳಿನ ಸಮಸ್ಯೆಗಳು ಇದೆ ರೀತಿಯ ಸಂಕೇತಗಳನ್ನು ಹೊಂದಿರುವುದರಿಂದ, ಈ ರೋಗ ಲಕ್ಷಣಗಳನ್ನು ಸಣ್ಣ ಸಮಸ್ಯೆಗಳೆಂದು ಪರಿಗಣಿಸಿ ವೈದ್ಯಕೀಯ ಸಹಾಯ ಪಡೆಯಲು ವಿಳಂಬ ಮಾಡಬಹುದು. ಈ ರೋಗಲಕ್ಷಣಗಳಲ್ಲಿ ಯಾವುದಾದರೂ ಕೆಲವು ದಿನಗಳವರೆಗೆ ಮುಂದುವರಿದರೆ ಅಥವಾ ಕಾಲಾನಂತರದಲ್ಲಿ ಸ್ಥಿತಿಯು ಹದಗೆಟ್ಟರೆ, ಸಮಸ್ಯೆಯನ್ನು ಕಂಡುಹಿಡಿಯಲು ವೈದ್ಯರನ್ನು ಭೇಟಿ ಮಾಡುವುದು ಬಹಳ ಮುಖ್ಯ.

ಸ್ಕ್ರೀನಿಂಗ್ ಪರೀಕ್ಷೆಗಳ ಮೂಲಕ ಕರುಳಿನ ಕ್ಯಾನ್ಸರ್ ನ ಆರಂಭಿಕ ಪತ್ತೆಯನ್ನು ಮಾಡಬಹುದು.

1 ಕೊಲೊನೋಸ್ಕೋಪಿ, ಇಲ್ಲಿ ಪೊಲಿಪ್ಸ್ ಅಥವಾ ಕ್ಯಾನ್ಸರ್ ನ ಸಂಕೇತಗಳಿಗಾಗಿ ಸಂಪೂರ್ಣ ಕೊಲೊನ್ ಮತ್ತು ಗುದನಾಳದ ಪರೀಕ್ಷೆಯನ್ನು ಮಾಡಲಾಗುತ್ತದೆ.

2 ಫೀಕಲ್ ಅಕುಲ್ಟ್ ಬ್ಲಡ್ ಟೆಸ್ಟ್ (FOBT) ಅಥವಾ ಫೀಕಲ್ ಇಮ್ಯುನೊಕೆಮಿಕಲ್ ಟೆಸ್ಟ್ (FIT), ಇದು ಕರುಳಿನ ಕ್ಯಾನ್ಸರ್ ನ ಸಂಕೇತವಾದ ಮಲದಲ್ಲಿನ ರಕ್ತವನ್ನು ಪತ್ತೆ ಹಚ್ಚಲು ಮಾಡಲಾಗುತ್ತದೆ.

3 ಫೆಲ್ಕ್ಸಿಬಲ್ ಸಿಗ್ಮೋಯ್ಡೋಸ್ಕೋಪಿಯು ಕೊಲೊನೋಸ್ಕೋಪಿಗೆ ಹೋಲುವ ಪರೀಕ್ಷೆಯಾಗಿದೆ, ಆದರೆ ಇಲ್ಲಿ ಕೊಲೊನ್ ನ ಕೆಳಭಾಗವನ್ನು ಪರೀಕ್ಷೆ ಮಾಡಲಾಗುತ್ತದೆ.

50 ವರ್ಷ ಮೇಲ್ಪಟ್ಟ ವ್ಯಕ್ತಿಗಳು ವಾರ್ಷಿಕವಾಗಿ ಸ್ಕ್ರೀನಿಂಗ್ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಾಗಿದೆ.

ಕೊಲೊನ್ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿ ಪತ್ತೆಹಚ್ಚಲು ಸಾಧ್ಯವಾದರೆ, ಶಸ್ತ್ರಚಿಕಿತ್ಸೆ, ಕೀಮೋಥೆರಪಿ, ವಿಕಿರಣ ಚಿಕಿತ್ಸೆ ಅಥವಾ ಇವುಗಳ ಮಿಶ್ರಣದಂತಹ ಚಿಕಿತ್ಸೆಗಳು ಉತ್ತಮವಾಗಿ ಕೆಲಸ ಮಾಡುತ್ತವೆ. ಕ್ಯಾನ್ಸರ್ ನ ಹಂತ, ಅದು ಎಲ್ಲಿದೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಆಧರಿಸಿ ಚಿಕಿತ್ಸೆಯ ಯೋಜನೆಯನ್ನು ಮಾಡಲಾಗುತ್ತದೆ.

ಡಾ. ಬಸವಂತರಾವ್ ಮಲ್ಲಿಪಾಟೀಲ್

ಕನ್ಸಲ್ಟೆಂಟ್ – ವೈದ್ಯಕೀಯ ಆಂಕೊಲಾಜಿಸ್ಟ್

 ಮಣಿಪಾಲ್ ಆಸ್ಪತ್ರೆ, ಹೆಬ್ಬಾಳ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

Muniyal Institute: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

10-health

Monsoon Diseases:ಮಳೆಗಾಲದಲ್ಲಿ ಸಾಮಾನ್ಯ; ಮಾನ್ಸೂನ್‌ ರೋಗಗಳು,ತಡೆಗಟ್ಟುವಿಕೆಗಾಗಿ ಸಲಹೆಗಳು

2-health

Scleroderma: ಸ್ಕ್ಲೆರೋಡರ್ಮಾ ಜತೆಗೆ ಜೀವಿಸುವುದು

Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

6-health

Hemorrhoids: ಮಲದಲ್ಲಿ ರಕ್ತಸ್ರಾವವಾದಾಗಲೆಲ್ಲ ಮೂಲವ್ಯಾಧಿ ಕಾರಣವಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.