ಓಸ್ಟಿಯೋಪೊರೋಸಿಸ್‌ ಅಪಾಯವನ್ನು ಹೆಚ್ಚಿಸಬಲ್ಲ ಪಾನ ಹವ್ಯಾಸಗಳು


Team Udayavani, Nov 13, 2022, 3:58 PM IST

18

ಓಸ್ಟಿಯೋಪೊರೋಸಿಸ್‌ ಎಂಬ ಗಂಭೀರ ಕಾಯಿಲೆಯ ಲಕ್ಷಣಗಳು ಆರಂಭಿಕವಾಗಿ ಹೆಚ್ಚು ತೋರಿಬರದಿರುವುದರಿಂದಾಗಿ ಇದನ್ನು ಸಾಮಾನ್ಯವಾಗಿ “ನಿಶ್ಶಬ್ದ ಕೊಲೆಗಾರ’ ಎಂಬುದಾಗಿ ಸಂಬೋಧಿಸಲಾಗುತ್ತದೆ.

ಸಣ್ಣ ಏಟಿನಿಂದ ಕೂಡ ಮೂಳೆ ಮುರಿತಗಳು ಉಂಟಾಗುವಷ್ಟು ಮಟ್ಟಿಗೆ ಓಸ್ಟಿಯೋಪೊರೋಸಿಸ್‌ ವ್ಯಕ್ತಿಯ ಎಲುಬುಗಳನ್ನು ದುರ್ಬಲ ಮತ್ತು ಬಿಧುರಗೊಳಿಸುತ್ತದೆ. ಚಿಕಿತ್ಸೆ ಒದಗಿಸದೆ ಇದ್ದಲ್ಲಿ ಇದು ಸೊಂಟ ಮತ್ತು ಬೆನ್ನೆಲುಬಿನಲ್ಲಿ ಗಂಭೀರ ಮುರಿತಗಳಿಗೆ ಕಾರಣವಾಗಬಹುದಾಗಿದ್ದು, ಇದರಿಂದ ಭಾರೀ ನೋವು, ವೈಕಲ್ಯ ಉಂಟಾಗಬಹುದು ಮತ್ತು ಅದಕ್ಕಾಗಿ ಶಸ್ತ್ರಚಿಕಿತ್ಸೆಯ ಅಗತ್ಯ ಬೀಳಬಹುದು.

ಯುವಜನರಲ್ಲಿ ಆಲಸಿ ಜೀವನಶೈಲಿಯು ಓಸ್ಟಿಯೋಪೊರೋಸಿಸ್‌ ನಂತಹ ದೀರ್ಘ‌ಕಾಲೀನ ಪ್ರತಿಕೂಲ ಪರಿಣಾಮಗಳನ್ನು ಉಂಟುಮಾಡಬಹುದು. ವ್ಯಕ್ತಿಯೊಬ್ಬ ಓಸ್ಟಿಯೋಪೊರೋಸಿಸ್‌ಗೆ ತುತ್ತಾಗಲು ಕಾರಣವಾಗಬಹುದಾದಂತಹ ಕೆಲವು ಪಾನ ಹವ್ಯಾಸಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಅತಿಯಾದ ಮದ್ಯಪಾನ ದಿನಂಪ್ರತಿ ಅತಿಯಾಗಿ ಮದ್ಯಪಾನ ಮಾಡುವುದರಿಂದ ಮೆಗ್ನಿಸಿಯಂ ಮತ್ತು ಕ್ಯಾಲ್ಸಿಯಂನಂತಹ ಖನಿಜಾಂಶಗಳು ದೇಹವು ಅವುಗಳನ್ನು ಹೀರಿಕೊಳ್ಳುವುದಕ್ಕೆ ಮುನ್ನವೇ ಮೂತ್ರದ ಮೂಲಕ ಹೊರಹಾಕಲ್ಪಡುತ್ತವೆ. ಇದರಿಂದಾಗಿ ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಉಂಟಾಗಿ ವಿಟಮಿನ್‌ ಡಿ ಉತ್ಪಾದನೆ ಕುಂಠಿತವಾಗಬಹುದು. ಇದಲ್ಲದೆ, ಮದ್ಯಪಾನದ ಚಟದಿಂದಾಗಿ ಮಹಿಳೆಯರಲ್ಲಿ ಈಸ್ಟ್ರೋಜೆನ್‌ ಹಾರ್ಮೋನ್‌ ಉತ್ಪಾದನೆಯ ಪ್ರಮಾಣ ಕಡಿಮೆಯಾಗಿ ಋತುಚಕ್ರ ವಿಳಂಬವಾಗಬಹುದು.
  • ಶಕ್ತಿವರ್ಧಕ ಪೇಯಗಳನ್ನು ನಿಯಮಿತವಾಗಿ ಕುಡಿಯುವುದು ಶಕ್ತಿವರ್ಧಕ ಪೇಯಗಳು ಅಥವಾ “ಎನರ್ಜಿ ಡ್ರಿಂಕ್‌’ಗಳು ಹೆಚ್ಚು ಪ್ರಮಾಣದಲ್ಲಿ ಸೋಡಿಯಂ ಅಂಶವನ್ನು ಹೊಂದಿರುತ್ತವೆ. ಇದು ದೇಹಕ್ಕೆ ಆರೋಗ್ಯಕರವಲ್ಲ. ದೇಹದಲ್ಲಿ ಸೋಡಿಯಂ ಅಂಶ ಹೆಚ್ಚಿದ್ದರೆ ಕ್ಯಾಲ್ಸಿಯಂ ಅಂಶ ಕಡಿಮೆಯಾಗುತ್ತದೆ.
  • ದಿನಂಪ್ರತಿ ಸೋಡಾ ಕುಡಿಯುವುದು ಸೋಡಾದಲ್ಲಿ ಸಾಮಾನ್ಯವಾಗಿ ಕಂಡುಬರುವ ಪಾಸ್ಫಾರಿಕ್‌ ಆಮ್ಲವು ದೇಹದಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಅಂಶವು ಹೊರಹೋಗಲು ಕಾರಣವಾಗುವ ಇನ್ನೊಂದು ರಾಸಾಯನಿಕ ಅಂಶ. ಸೋಡಾದಲ್ಲಿರುವ ಕೆಫಿನ್‌ ಕೂಡ ಎಲುಬು ನಷ್ಟಕ್ಕೆ ಕಾರಣವಾಗಬಹುದು.
  • ಸಕ್ಕರೆ ಬೆರೆಸಿದ ಪಾನೀಯಗಳು ಇಂತಹ ಹಣ್ಣಿನ ರಸಗಳು, ಪಾನೀಯಗಳಲ್ಲಿ ಹೆಚ್ಚುವರಿಯಾಗಿ ಸಕ್ಕರೆ/ ಸಂಸ್ಕರಿತ ಸಕ್ಕರೆಯನ್ನು ಬೆರೆಸಲಾಗಿರುತ್ತದೆ. ಇದು ದೇಹದ ಎಲುಬುಗಳ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರಬಲ್ಲುದು. ಇದರಿಂದ ಮೂತ್ರದ ಮೂಲಕ ಕ್ಯಾಲ್ಸಿಯಂ ಮತ್ತು ಮೆಗ್ನಿಶಿಯಂ ಅಂಶ ದೇಹದಿಂದ ಹೊರಹೋಗುವ ಪ್ರಮಾಣ ಹೆಚ್ಚುತ್ತದೆ. ಅಲ್ಲದೆ ಇದು ದೇಹದಲ್ಲಿರುವ ಸಕ್ರಿಯ ವಿಟಮಿನ್‌ ಡಿ ಅಂಶವನ್ನು ಹೀರಿಕೊಳ್ಳುತ್ತದೆ.

ಮೇಲೆ ಹೇಳಲಾದ, ಎಲುಬುಗಳ ಆರೋಗ್ಯಕ್ಕೆ ಹಾನಿಕರವಾದ ಹವ್ಯಾಸಗಳನ್ನು ತ್ಯಜಿಸಿ ಹೈನು ಉತ್ಪನ್ನಗಳು, ತಾಜಾ ಹಣ್ಣಿನ ರಸಗಳು, ಬೇಳೆಕಾಳುಗಳಿಂದ ಕೂಡಿದ ಆರೋಗ್ಯಕರ ಮತ್ತು ಪೌಷ್ಟಿಕಾಂಶಸಹಿತ ಆಹಾರ ಶೈಲಿಯನ್ನು ರೂಢಿಸಿಕೊಳ್ಳಬೇಕು. ಜತೆಗೆ ವಿಟಮಿನ್‌ ಡಿ ಅಥವಾ ಮಲ್ಟಿವಿಟಮಿನ್‌ ಪೂರಕಗಳನ್ನು ಸೇವಿಸಬೇಕು. ಮದ್ಯಪಾನ ಮತ್ತು ಧೂಮಪಾನದಿಂದ ವ್ಯಕ್ತಿಯ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮಗಳು ಉಂಟಾಗುತ್ತವೆ.

ಅತಿಯಾದ ಮದ್ಯಪಾನದಿಂದ ದೇಹದಲ್ಲಿ ಕ್ಯಾಲ್ಸಿಯಂ ಅಂಶ ಕಡಿಮೆಯಾಗುತ್ತದೆ, ಹೀಗಾಗಿ ಇದರಿಂದ ದೂರವಿರಬೇಕು. ಈಗಾಗಲೇ ಓಸ್ಟಿಯೋಪೊರೋಸಿಸ್‌ ಇದ್ದರೆ ಉಪ್ಪೂರಿದ, ಕರಿದ ಆಹಾರಗಳಿಂದ ದೂರವಿರಿ, ಏಕೆಂದರೆ ಅವು ಎಲುಬುಗಳ ರೋಗಲಕ್ಷಣಗಳನ್ನು ಇನ್ನಷ್ಟು ಉಲ್ಬಣಗೊಳಿಸುತ್ತವೆ. ಯೋಗ, ಬಿರುಸಾದ ನಡಿಗೆಯಂತಹ ವ್ಯಾಯಾಮ ಚಟುವಟಿಕೆಗಳಲ್ಲಿ ನಿಯಮಿತವಾಗಿ ತೊಡಗುವುದು, ಸಕ್ರಿಯ ಜೀವನಶೈಲಿಯನ್ನು ಅಳವಡಿಸಿ ಕೊಳ್ಳುವುದರಿಂದ ಓಸ್ಟಿಯೋಪೊರೋಸಿಸನ್ನು ದೂರ ಇರಿಸಬಹುದು.

-ಡಾ| ಈಶ್ವರಕೀರ್ತಿ, ಕನ್ಸಲ್ಟಂಟ್‌ ಸ್ಪೈನ್‌ ಸರ್ಜನ್‌, ಕೆಎಂಸಿ, ಮಂಗಳೂರು

(ಈ ಲೇಖನದಲ್ಲಿರುವ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: ಮುಖ್ಯಸ್ಥರು, ಆಥೊìಪೆಡಿಕ್‌ ವಿಭಾಗ, ಕೆಎಂಸಿ, ಮಾಹೆ, ಮಂಗಳೂರು)

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

7-

Obsessive Psychiatry: ಗೀಳು ಮನೋರೋಗ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.