ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ


Team Udayavani, Mar 5, 2024, 5:35 PM IST

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ಬೆಂಗಳೂರು: ಇಂದಿನ ವೇಗದ ಜಗತ್ತಿನಲ್ಲಿ ಆರೋಗ್ಯವೇ ಸಂಪತ್ತಾಗಿದೆ. ನಾವು ಸೇವಿಸುವ ಆಹಾರದಲ್ಲಿ ಹೆಚ್ಚು ಪೌಷ್ಟಿಕಾಂಶವಿರುವ ಸೂಪರ್ ಫುಡ್ ಗಳನ್ನು ಸೇರಿಸುವುದು ಅತ್ಯಗತ್ಯವಾಗಿದೆ. ಇಂತಹ ಪೌಷ್ಟಿಕಾಂಶವನ್ನು ನೀಡುವ ಉತ್ಪನ್ನವೆಂದರೆ ಬಾದಾಮಿ.

ಇಂತಹ ಬಾದಾಮಿಯಿಂದ ನಮ್ಮ ಆರೋಗ್ಯದ ಮೇಲೆ ಉಂಟಾಗುವ ಅತ್ಯುತ್ತಮ ಪರಿಣಾಮದ ಬಗ್ಗೆ ಆಯುರ್ವೇದ ತಜ್ಞರಾಗಿರುವ ಡಾ.ಮಧುಮಿತ ಕೃಷ್ಣನ್ ಅವರು ಇಲ್ಲಿ ಬೆಳಕು ಚೆಲ್ಲಿದ್ದಾರೆ.

ದಿನಕ್ಕೆ ಒಂದು ಹಿಡಿಯಷ್ಟು ಅಂದರೆ ಸುಮಾರು 22-23 ಬಾದಾಮಿಯನ್ನು ತಿಂದರೆ ಆರೋಗ್ಯ ವೃದ್ಧಿಯಾಗುವುದರಲ್ಲಿ ಸಂಶಯವಿಲ್ಲ ಎನ್ನುತ್ತಾರೆ ಅವರು.

ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಾದಾಮಿಯನ್ನು ಬಳಸುವುದು ಆರೋಗ್ಯಕರ ಜೀವನಕ್ಕೆ ಸೋಪಾನವಾಗುತ್ತದೆ. ಇದೇ ಮಾರ್ಗವನ್ನು ಆಯುರ್ವೇದವೂ ಹೇಳುತ್ತದೆ. ಸಾಮಾನ್ಯವಾಗಿ ಬಾದಾಮಿಯು ಎಲ್ಲಾ ಋತುಗಳಲ್ಲೂ ಸೂಪರ್ ಫುಡ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾದಾಮಿಯು ಕೇವಲ ಮಧುಮೇಹ, ಹೃದ್ರೋಗಗಳು, ಅಧಿಕ ರಕ್ತದೊತ್ತಡ ಮತ್ತು ಇನ್ನೂ ಅನೇಕ ದೀರ್ಘಕಾಲೀನ ಕಾಯಿಲೆಗಳಿಗೆ ಉತ್ತಮ ಮದ್ದಾಗಿದೆಯಲ್ಲದೇ, ವಿಟಮಿನ್ ಇ, ಕ್ಯಾಲ್ಸಿಯಂ, ಮೆಗ್ನೀಸಿಯಂ, ಪ್ರೋಟೀನ್, ಫೈಬರ್, ಕಾಪರ್ ಮತ್ತು ರೈಬೋಫ್ಲಾವಿನ್ ನಂತಹ ಪೋಷಕಾಂಶಗಳನ್ನು ಒದಗಿಸುತ್ತದೆ. ನಿಯಮಿತವಾಗಿ ಬಾದಾಮಿ ತಿನ್ನುವುದರಿಂದ ಹೃದ್ರೋಗಗಳು ಸಂಭವಿಸುವ ಪ್ರಮಾಣವನ್ನು ಕಡಿಮೆ ಮಾಡುತ್ತದೆ ಮತ್ತು ಮೆದುಳಿನ ಆರೋಗ್ಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂಬುದನ್ನು ಅನೇಕ ಅಧ್ಯಯನಗಳು ದೃಢಪಡಿಸಿವೆ ಎಂದು ಅವರು ತಿಳಿಸಿದ್ದಾರೆ.

ಆಯುರ್ವೇದದ ಪ್ರಕಾರ ಒಟ್ಟಾರೆ ಯೋಗಕ್ಷೇಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬಾದಾಮಿಯಲ್ಲಿರುವ ಗುಣಲಕ್ಷಣಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ ಎಂದು ತಿಳಿಸಿರುವ ಡಾ.ಮಧುಮಿತ ಅವರು, ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು? ಎಂಬುದರ ಬಗ್ಗೆ ಕೆಲವು ಗೊಂದಲಗಳಿವೆ. ಅಮೇರಿಕಾದ ಆಹಾರ ಮಾರ್ಗಸೂಚಿಗಳು ದಿನಕ್ಕೆ ಸುಮಾರು 23 ಬಾದಾಮಿ ತಿನ್ನುವುದು ಉತ್ತಮ ಎಂದು ಸಲಹೆ ನೀಡುತ್ತವೆ. ಈ ಹಿನ್ನೆಲೆಯಲ್ಲಿ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿಯನ್ನು ಅಡಕ ಮಾಡಿಕೊಳ್ಳುವುದು ಉತ್ತಮ ಎಂದು ಕಿವಿಮಾತು ಹೇಳಿದ್ದಾರೆ.

ಬಾದಾಮಿ ಸೇವನೆ ಆರಂಭಿಸುವವರು ಮೊದಲು ಎರಡು ಬಾದಾಮಿಗಳನ್ನು ನೆನಸಿ ಸಿಪ್ಪೆ ತೆಗೆದು ತಿನ್ನಬೇಕು. ಈ ಮೂಲಕ ನಿಧಾನವಾಗಿ ಬಾದಾಮಿ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು. ನಾವು ಏನನ್ನು ತಿನ್ನುತ್ತೇವೆ ಎನ್ನುವುದಕ್ಕಿಂತ ನಾವು ಏನನ್ನು ಜೀರ್ಣಿಸಿಕೊಳ್ಳುತ್ತೇವೆ ಎಂಬ ಮಂತ್ರವನ್ನು ಅಳವಡಿಸಿಕೊಳ್ಳುವುದು ಉತ್ತಮ. ಈ ಹಿನ್ನೆಲೆಯಲ್ಲಿ ಸೂಪರ್ ಫುಡ್ ಸೇವನೆ ಮಾಡುವಾಗ ಎಚ್ಚರಿಕೆ ವಹಿಸುವುದೂ ಅಷ್ಟೇ ಪ್ರಮುಖವಾಗಿರುತ್ತದೆ ಎಂದು ಅವರು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.