ಬೇಸಿಗೆಯಲ್ಲಿ ಈ ಆಹಾರ ಸೇವನೆ ಮರೆಯಬೇಡಿ ..!  


Team Udayavani, Mar 3, 2021, 7:11 PM IST

summer

ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ನಮ್ಮ ಉಡುಗೆ ತೊಡುಗೆಯಲ್ಲಿ ಬದಲಾವಣೆ ಮಾಡಿಕೊಳ್ಳುತ್ತೇವೆ. ತೆಳುವಾದ ಹಾಗೂ ಹತ್ತಿಯಿಂದ ತಯಾರಾದ ಬಟ್ಟೆಗಳ ಮೊರೆ ಹೋಗುತ್ತವೆ. ಕೇವಲ ಬಟ್ಟೆ ಶೈಲಿ ಬದಲಾಯಿಸಿದರೆ ಮುಗಿತೇ ? ಖಂಡಿತವಾಗಿಯೂ ಇಲ್ಲ. ಬೇಸಿಗೆಯಲ್ಲಿ ನಮ್ಮ ಆಹಾರ ಪದ್ಧತಿಯೂ ಕೂಡ ಬದಲಾಗುವುದು ಅಗತ್ಯ.

ಹೌದು, ಸೂರ್ಯನಿಂದ ಹೊರಹೊಮ್ಮುವ ಶಾಖದ ಕಿರಣಗಳು ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಬೇಸಿಗೆಯಲ್ಲಿ ಹೆಚ್ಚಾಗಿ ನಿರ್ಜಲೀಕರಣ( ಡಿಹೈಡ್ರೆಷನ್), ಚರ್ಮದ ರೋಗಗಳು ಹಾಗೂ ವಿಟಮಿನ್ ಮತ್ತು ಖನಿಜ ಕೊರತೆಯಿಂದ ನಾನಾ ಬಗೆಯ ಸಮಸ್ಯೆಗಳು ವಕ್ಕರಿಸುತ್ತವೆ. ಇವುಗಳಿಂದ ಪಾರಾಗಬೇಕಾದರೆ ಕೆಲವೊಂದು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು ಅಗತ್ಯ.

ಹಾಗಾದರೆ ಬೇಸಿಗೆಯಲ್ಲಿ ಸೇವಿಸಬಹುದಾದ ಆಹಾರಗಳು ಯಾವವು ?

ಟೊಮೆಟೊ : ವಿಟಮಿನ್ ಸಿ ಹಾಗೂ ರೋಗನಿರೋಧಕ ಶಕ್ತಿ ತುಂಬಿಕೊಂಡಿರುವ ಟೊಮೆಟೊ ಬೇಸಿಗೆಯಲ್ಲಿ ಹೆಚ್ಚು ಸೇವಿಸುವುದು ಉತ್ತಮ. ಲೈಕೋಪೀನ್ ನಂತಹ ಫೈಟೊಕೆಮಿಕಲ್ಸ್ ಟೊಮೆಟೊದಲ್ಲಿರುತ್ತೆ. ಇವು ನಮ್ಮಲ್ಲಿರುವ ದೀರ್ಘಕಾಲಿಕ ಕಾಯಿಲೆಗಳ ನಿರ್ಮೂಲನೆಗೆ ಸಹಾಯಕವಾಗುತ್ತೆ.

ಜುಚಿನಿ : ಇದು ಕುಂಬಳಕಾಯಿ ಹೋಲುವಂತಹ ಆದರೆ, ಅದಕ್ಕಿಂತ ಕಡಿಮೆ ಗಾತ್ರ ಹೊಂದಿರುತ್ತದೆ. ಇದು ಹೃದಯದ ಆರೋಗ್ಯವನ್ನು ಹೆಚ್ಚಿಸಲು ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯವಾಗುತ್ತದೆ. ಇದಕ್ಕೆ ಕಾರಣ ಈ ಕಾಯಿಯಲ್ಲಿರುವ ಪೆಕ್ಟಿನ್ ಎನ್ನುವ ನಾರು ಪದಾರ್ಥ.

ಕಲ್ಲಂಗಡಿ : ಇದು ಬೇಸಿಗೆ ಕಾಲದಲ್ಲಿ ಬಹುಬೇಡಿಕೆಯ ಹಣ್ಣು. ಅತೀ ಹೆಚ್ಚು ನೀರಿನ ಅಂಶ ತುಂಬಿಕೊಂಡಿರುವುದರಿಂದ ನಿರ್ಜಲೀಕರಣಕ್ಕೆ ( ಡಿಹೈಡ್ರೆಷನ್) ರಾಮಬಾಣ. ಜತೆಗೆ ಸೂರ್ಯನ ಕಿರಣಗಳಿಂದ ಉಂಟಾಗುವ ಚರ್ಮ ಸಂಬಂಧಿ ರೋಗಗಳನ್ನೂ ಕಡಿಮೆ ಮಾಡುತ್ತೆ. ಕಲ್ಲಂಗಡಿ ಸೇವನೆ ಲವಲವಿಕೆಯಿಂದ ಇರುಸುತ್ತೆ.

ಕಿತ್ತಳೆ ( ಆರೆಂಜ್ ) : ಬೇಸಿಗೆಯಲ್ಲಿ ನಮ್ಮ ದೇಹದಿಂದ ಹೊರಹೊಮ್ಮುವ ಬೆವರಿನ ಜತೆಗೆ ಪೊಟ್ಯಾಶಿಯಮ್ ಕೂಡ ನಾವು ಕಳೆದುಕೊಳ್ಳುತ್ತೇವೆ. ಇದಕ್ಕೆ ಪರಿಹಾರ ಕಿತ್ತಳೆ ಸೇವನೆ. ಈ ಹಣ್ಣಿನಲ್ಲಿ ಸಿಹಿ ಸಿಟ್ರಸ್ ಪೊಟ್ಯಾಸಿಯಮ್ ಸಮೃದ್ಧವಾಗಿರುತ್ತದೆ. ಶೇಕಡಾ 80 ರಷ್ಟು ನೀರಿನ ಪ್ರಮಾಣ ಹೊಂದಿರುವ ಕಿತ್ತಳೆ ನಿರ್ಜಲೀಕರಣ ನಿವಾರಣೆಗೂ ಸಹಕಾರಿಯಾಗಲಿದೆ.

ಮೊಸರು : ಮೊಸರು ಹಾಗೂ ಇದರಿಂದ ತಯಾರಾಗುವ ಮಜ್ಜಿಗೆ ಬೇಸಿಗೆ ಕಾಲದಲ್ಲಿ ಅತೀ ಹೆಚ್ಚು ಸೇವನೆ ಉತ್ತಮ. ಇದರಿಂದ ದೇಹದ ಉಷ್ಟಾಂಶ ಸಮತೋಲನದಲ್ಲಿರುತ್ತೆ.

ಸೇಬು : ಬೇಸಿಗೆ ಕಾಲದಲ್ಲಿ ಸೇಬು ಸೇವನೆ ಉಪಯೋಗಕಾರಿ. ಇದು ಚರ್ಮ ರೋಗ ಹಾಗೂ ಆರೋಗ್ಯಕ್ಕೂ ಉತ್ತಮವಾಗಿದೆ.

ತರಕಾರಿ ಸಲಾಡ್ : ಮೂಲಂಗಿ, ಮೆಂತೆ ಸೊಪ್ಪು, ಗಜ್ಜರಿ ( ಕ್ಯಾರೆಟ್ ) ಮುಂತಾದವುಗಳನ್ನು ಸೇರಿಸಿ ಸಲಾಡ್ ತಯಾರಿಸಿ ಸೇವಿಸಬೇಕು. ಇವುಗಳಿಂದ ನಿರ್ಜಲೀಕರಣ ನಿವಾರಣೆಗೆಯಾಗುತ್ತೆ.

ಒಣ ಹಣ್ಣು ( ಟ್ರೈಪ್ರೂಟ್ಸ್ ) : ಬೇಸಿಗೆಯಲ್ಲಿ ಗೋಡಂಬಿ, ಬದಾಮ್, ಒಣ ದ್ರಾಕ್ಷಿ, ಪಿಸ್ತಾ ಸೇವನೆ ಮರಿಯಬೇಡಿ.

ಹಸಿರು ತರಕಾರಿ : ಬೇಸಿಗೆಯಲ್ಲಿ ಮಾರುಕಟ್ಟೆಗೆ ಹಸಿರು ತರಕಾರಿ ಆವಕ ಕಡಿಮೆ ಇರುತ್ತದೆ. ಆದರೆ, ಇವುಗಳನ್ನು ಸೇವಸದೆ ಇರಬೇಡಿ. ಕಾರಣ ಹಸಿರು ತರಕಾರಿ ನಮ್ಮ ದೇಹಕ್ಕೆ ಉತ್ತಮ.

ಎಳ ನೀರು : ಬಿಸಿಲಿನ ಝಳ ತಾಳಲಾರದೆ ತಂಪು ಪಾನೀಯ ಮೊರೆ ಹೋಗುತ್ತೇವೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವು ಪಾನೀಯಗಳಿಗಿಂತ ಎಳನೀರು ಸೇವನೆಗೆ ಮೊದಲ ಅದ್ಯತೆ ನೀಡಿ.

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.